ಅನ್ನದಾತನ ಪರಿ’ತಾಪ’: ರೈತರ ಆತ್ಮಹತ್ಯೆಗೆ ತಾಪವೇ ಕಾರಣ
Team Udayavani, Aug 2, 2017, 7:50 AM IST
ಲಾಸ್ಏಂಜಲೀಸ್: ಭಾರತದಲ್ಲಿ ಬರಗಾಲ ಬರಲು ಯುರೋಪ್ನ ಮಾಲಿನ್ಯವೇ ಕಾರಣ ಎಂದು ಇತ್ತೀಚೆಗೆ ಲಂಡನ್ನ ಸಂಶೋಧಕರ ವರದಿಯೊಂದು ತಿಳಿಸಿದ್ದು ನೆನಪಿರಬಹುದು. ಯುರೋಪ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪತ್ತಿಯಾಗುವ ಸಲ್ಫರ್ ಡಯಾಕ್ಸೈಡ್ನಿಂದ ಮಾಲಿನ್ಯ ಹೆಚ್ಚಾಗಿ, ಅದರ ದುಷ್ಪರಿಣಾಮ ನೇರವಾಗಿ ಭಾರತಕ್ಕೆ ತಲುಪಿತ್ತಿದೆ ಎಂದು ಈ ವರದಿ ಹೇಳಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತೆ, ಹವಾಮಾನ ವೈಪರೀತ್ಯವೇ ಭಾರತದಲ್ಲಿ ರೈತರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣ ಎಂದು ಅಮೆರಿಕದ ಸಂಶೋಧಕರ ತಂಡವೊಂದು ಹೇಳಿದೆ.
ಕಳೆದ 30 ವರ್ಷಗಳಲ್ಲಿ ಭಾರತದಲ್ಲಿ 59 ಸಾವಿರಕ್ಕೂ ಹೆಚ್ಚು ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಚಟುವಟಿಕೆಗಳ ಕಾಲದಲ್ಲಿ ತಾಪಮಾನ ಹೆಚ್ಚಳ ಮತ್ತು ಮಳೆಯ ಕೊರತೆಯಿಂದ ರೈತರು ಹತಾಶೆಗೊಳಗಾಗುತ್ತಾರೆ. ನಿರೀಕ್ಷೆಯೆಲ್ಲ ಹುಸಿಯಾದಾಗ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕ್ಯಾಲಿಫೋರ್ನಿಯಾ ವಿವಿಯ ಸಂಶೋಧಕರ ಅಧ್ಯಯನ ವರದಿ ಹೇಳಿದೆ. ಜಾಗತಿಕ ತಾಪಮಾನ ಹೆಚ್ಚಿದಂತೆ ರೈತರ ಆತ್ಮಹತ್ಯೆ ಪ್ರಮಾಣವೂ ಹೆಚ್ಚಳವಾಗಲಿದೆ ಎಂಬ ಎಚ್ಚರಿಕೆಯನ್ನೂ ವರದಿ ನೀಡಿದೆ. ಜತೆಗೆ, ಸರಕಾರವು ಸೂಕ್ತ ನೀತಿಗಳನ್ನು ತಂದರೆ ಅನ್ನದಾತರ ಜೀವವನ್ನು ಉಳಿಸಲು ಸಾಧ್ಯ ಎಂದೂ ವರದಿ ಹೇಳಿದೆ. 2050ರ ವೇಳೆಗೆ ತಾಪಮಾನ ಇನ್ನೂ 3 ಡಿ.ಸೆ.ನಷ್ಟು ಹೆಚ್ಚಾಗಲಿದೆ ಎಂಬ ಆತಂಕಕಾರಿ ಭವಿಷ್ಯವನ್ನೂ ಸಂಶೋಧಕರು ನುಡಿದಿದ್ದಾರೆ. ಜಗತ್ತಿನ ಆತ್ಮಹತ್ಯೆಗಳಲ್ಲಿ ಶೇ.75ರಷ್ಟು ನಡೆಯುತ್ತಿರುವುದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ. ಈ ಪೈಕಿ ಐದನೇ ಒಂದರಷ್ಟು ಪ್ರಕರಣಗಳು ಭಾರತದಲ್ಲೇ ಘಟಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ