ರಾಜನ್ ಕೈತಪ್ಪಿದ ಅರ್ಥ ನೊಬೆಲ್ ಥೇಲರ್ಗೆ
Team Udayavani, Oct 10, 2017, 6:45 AM IST
ಸ್ಟಾಕ್ಹೋಂ: ಪ್ರಸಕ್ತ ವರ್ಷದ ಅರ್ಥಶಾಸ್ತ್ರ ನೊಬೆಲ್ ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅವರ ಕೈತಪ್ಪಿದೆ. ಅಮೆರಿಕದ ಅರ್ಥತಜ್ಞ ರಿಚರ್ಡ್ ಥೇಲರ್ ಅವರು ಈ ಪ್ರತಿಷ್ಠಿತ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ಅರ್ಥಶಾಸ್ತ್ರ ಹಾಗೂ ಮನಶಾÏಸ್ತ್ರದ ನಡುವಿನ ಅಂತರವನ್ನು ಇಲ್ಲವಾಗಿ ಸುವ ಮೂಲಕ, “ವರ್ತನಾ ಅರ್ಥ ಶಾಸ್ತ್ರ'(ಬಿಹೇವಿಯರಲ್ ಎಕ ನಾಮಿಕ್ಸ್)ಕ್ಕೆ ಸಂಬಂಧಿಸಿ ನೀಡಿದ ಗಣನೀಯ ಕೊಡುಗೆಗಾಗಿ ಅವರಿಗೆ ಈ ಗೌರವ ನೀಡಲಾಗಿದೆ.
ಹಣಕಾಸು ಮಾರುಕಟ್ಟೆ ಮತ್ತು ಆರ್ಥಿಕತೆಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳುವಾಗ ಒಬ್ಬ ವ್ಯಕ್ತಿಯ ಮಾನಸಿಕ ಹಾಗೂ ಸಾಮಾಜಿಕ ಅಂಶಗಳು ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಕುರಿತು ಅವರು ಸಂಶೋಧನೆ ನಡೆಸಿದ್ದಾರೆ. ರಿಚರ್ಡ್ ಅವರು ಆರ್ಥಿಕತೆಯನ್ನು ಇನ್ನಷ್ಟು ಮಾನವೀಯ ಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ನೊಬೆಲ್ ಸಮಿತಿ ತಿಳಿಸಿದೆ. ಥೇಲರ್ ಅವರು ಪ್ರಸ್ತುತ ಷಿಕಾಗೋ ವಿವಿಯಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ಅರ್ಥಶಾಸ್ತ್ರ ನೊಬೆಲ್ ಸಂಭಾವ್ಯರ ಪಟ್ಟಿಯಲ್ಲಿ ರಘುರಾಂ ರಾಜನ್ರ ಹೆಸರೂ ಇತ್ತು ಎಂದು 2 ದಿನಗಳ ಹಿಂದಷ್ಟೇ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ಸಮಿತಿ ಆಯ್ಕೆ ಮಾಡಿರುವ 6 ಅರ್ಥಶಾಸ್ತ್ರಜ್ಞರ ಪಟ್ಟಿಯಲ್ಲಿ ರಾಜನ್ ಹೆಸರೂ ಇದೆ ಎಂದು ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ