ಐಸಿಸ್‌ ಪ್ರೇರಿತನ ದಾಳಿ ಎಂಟು ಮಂದಿ ಸಾವು


Team Udayavani, Nov 2, 2017, 6:05 AM IST

ISIS.jpg

ನ್ಯೂಯಾರ್ಕ್‌: ಅಮೆರಿಕದಲ್ಲಿ 9/11 ಉಗ್ರ ದಾಳಿ ನಡೆದ ಬಳಿಕ ಮಂಗಳವಾರ ಭೀಕರ ದಾಳಿ ನಡೆದಿದೆ. ಉಗ್ರ ಸಂಘಟನೆ ಐಸಿಸ್‌ನಿಂದ ಪ್ರೇರಿತನಾದ ವ್ಯಕ್ತಿ ಪಿಕ್‌ಅಪ್‌ ಟ್ರಕ್‌ ಅನ್ನು ಪಾದಚಾರಿಗಳ ಮೇಲೆ ಚಲಾಯಿಸಿ ಎಂಟು ಮಂದಿಯನ್ನು ಕೊಂದಿದ್ದಾನೆ. ಈ ಘಟನೆಯಲ್ಲಿ ಇತರ 11 ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಉಜ್ಬೇಕಿನಸ್ತಾನ ಮೂಲದ 29 ವರ್ಷದ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಪೊಲೀಸರು ಆತನಿಗೆ ಹೊಟ್ಟೆಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ಅಸುನೀಗಿದವರ ಪೈಕಿ ಐವರು ಅರ್ಜೆಂಟೀನಾದ ವಿದ್ಯಾರ್ಥಿಗಳಾಗಿದ್ದರೆ, ಮತ್ತೂಬ್ಬ ಬಲ್ಗೇರಿಯಾದವನೆಂದು ಗುರುತಿಸಲಾಗಿದೆ. 

ನ್ಯೂಯಾರ್ಕ್‌ನ ಲೋವರ್‌  ಮ್ಯಾನ್‌ಹಟನ್‌ನ ಪಶ್ಚಿಮ ಭಾಗದಲ್ಲಿರುವ ಹಡ್ಸನ್‌ ನದಿ ಪಕ್ಕದಲ್ಲಿ ಉತ್ಸವೊಂದರಲ್ಲಿ ಸಂಭ್ರಮಾಚರಣೆಯಲ್ಲಿ ನಿರತವಾಗಿರುವಾಗ ಸೈಫ‌ುಲ್ಲೊ ಸೈಪೊವ್‌ ಎಂಬ ಹೆಸರಿನ ವ್ಯಕ್ತಿ ಪಿಕ್‌ಅಪ್‌ ಟ್ರಕ್‌ ಅನ್ನು ಏರಿ ದೇವರ ಹೆಸರಿನ ಘೋಷಣೆ ಮಾಡುತ್ತಾ ಪಾದಚಾರಿ ಮಾರ್ಗದ ಮೇಲೆ ಚಲಾಯಿಸಿದ. 2001ರಲ್ಲಿ ಉಗ್ರರ ದಾಳಿಗೀಡಾಗಿದ್ದ ವರ್ಲ್x ಟ್ರೇಡ್‌ ಸೆಂಟರ್‌ನ ನೂತನ ಕಟ್ಟಡಗಳ ಬಳಿಯೇ ಈ ದಾಳಿ ನಡೆದಿದೆ. ಏಕಾಏಕಿ ಟ್ರಕ್‌ ವೇಗದಲ್ಲಿ ಬರುತ್ತಿದ್ದುದನ್ನು ನೋಡಿದ ಪಾದಚಾರಿಗಳು, ಸೈಕಲ್‌ ಸವಾರರು ದಿಕ್ಕಾಪಾಲಾಗಿ ಓಡಿದರು. ಈ ವೇಳೆ ಸ್ಥಳದಲ್ಲಿಯೇ ಆರು ಮಂದಿ ಅಸುನೀಗಿದ್ದಾರೆ. ತೀವ್ರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಬಂಧನಕ್ಕೆ ಒಳಗಾದ ವ್ಯಕ್ತಿ 60 ಕಿಮೀ ವೇಗದಲ್ಲಿ ಚಲಾಯಿಸುತ್ತಾ ಸಾಗುತ್ತಿದ್ದ. ಶಾಲಾ ಬಸ್‌ ಬಳಿಕ ಸೈಕಲ್‌ ಒಂದಕ್ಕೆ ಡಿಕ್ಕಿ ಹೊಡೆಯಿತು. ಇದೇ ಸಂದರ್ಭದಲ್ಲಿ ಹತ್ತು ಬಾರಿ ಗುಂಡು ಹಾರಿದ ಸದ್ದು ಕೇಳಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಎಬಿಸಿ ಚಾನೆಲ್‌ಗೆ ತಿಳಿಸಿದ್ದಾರೆ. ಕೂಡಲೇ ಕಾರ್ಯಾಚರಣೆಗೆ ಇಳಿದ ನ್ಯೂಯಾರ್ಕ್‌ ಪೊಲೀಸರು ಗುಂಡು ಹಾರಿಸುತ್ತಾ ಆತನ ನಿಯಂತ್ರಣಕ್ಕೆ ಮುಂದಾದರು. 2001ರ ಬಳಿಕ ನ್ಯೂಯಾರ್ಕ್‌ನಲ್ಲಿ ವ್ಯಕ್ತಿಯೊಬ್ಬ ನಡೆಸಿದ ದಾಳಿ ಇದಾಗಿದೆ. 

ಪಿಕ್‌ಅಪ್‌ನಲ್ಲಿ ಇಂಗ್ಲಿಷ್‌ ಬರೆದಿತ್ತು ಎಂದು ಹೇಳಲಾ ಗಿರುವ ಟಿಪ್ಪಣಿಯೊಂದು ಸಿಕ್ಕಿದೆ. ಅದರಲ್ಲಿ ಉಗ್ರ ಸಂಘಟನೆ ಐಸಿಸ್‌ಗೆ ಸೇರಿದ ಬರಹ ಇತ್ತು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪೊಲೀಸರು ಆತನ ಹೊಟ್ಟೆಗೆ ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದ್ದಾರೆ.

ಯಾರೀತ ದಾಳಿಕೋರ?: ಮೂಲತಃ ಉಜ್ಬೇಕಿಸ್ತಾನದ ವ್ಯಕ್ತಿಯಾಗಿರುವ ಈತ 2010ರಲ್ಲಿ ಅಮೆರಿಕಕ್ಕೆ ಆಗಮಿಸಿದ್ದ. ಆತ ನ್ಯೂಜರ್ಸಿಯಲ್ಲಿರುವ ಪ್ಯಾಟರ್ಸನ್‌ನಲ್ಲಿ ನೆಲೆಸಿದ್ದ ಎಂದು ನ್ಯೂಯಾರ್ಕ್‌ ಪೊಲೀಸರು ತಿಳಿಸಿದ್ದಾರೆ. 
ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ “ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಆಮೂಲಾಗ್ರವಾಗಿ ಪರಿಶೀಲಿಸಬೇಕು’ ಎಂದು ಎಚ್ಚರಿಸಿದ್ದಾರೆ.

ಮ್ಯಾನ್‌ಹಟನ್‌ ಮೇಲಿನ ದಾಳಿ ಉಗ್ರರ ಜಾಲ ವಿಶ್ವದೆಲ್ಲೆಡೆ ಪಸರಿಸಿರುವುದಕ್ಕೆ ಸಾಕ್ಷಿ. ನಾವೆಲ್ಲರೂ ಇದನ್ನು ಖಂಡಿಸಬೇಕಿದೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಬರಲಿ. 
– ಸೋನಿಯಾ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.