ಪಾಕ್‌ ಸೇನೆಯ ರೈಫ‌ಲ್‌ ಉಗ್ರರ ಕೈಯ್ಯಲ್ಲಿ!


Team Udayavani, Nov 8, 2017, 6:25 AM IST

rifal.jpg

ಶ್ರೀನಗರ: ಭಾರತದಲ್ಲಿ ಹಲವು ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿರುವ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನ ಸೋದರ ಸಂಬಂಧಿ ಸೇರಿದಂತೆ ಮೂವರು ಉಗ್ರರನ್ನು ಭದ್ರತಾ ಪಡೆಯ ಯೋಧರು ಹೊಡೆದುರುಳಿಸಿದ್ದಾರೆ.

ಸೋಮವಾರ ರಾತ್ರಿ ನಡೆದ ಈ ಕಾರ್ಯಾಚರಣೆಯು ಭಾರತೀಯ ಸೇನೆಯ ಪಾಲಿಗೆ ಅತ್ಯಂತ ಮಹತ್ವದ್ದು. ಏಕೆಂದರೆ, ಹತ ಉಗ್ರರ ಬಳಿ ಅಮೆರಿಕ ನಿರ್ಮಿತ ಎಂ4 ರೈಫ‌ಲ್‌ಗ‌ಳು ಸಿಕ್ಕಿದ್ದು, ಅದು ಪಾಕಿಸ್ತಾನದ ವಿಶೇಷ ಪಡೆಯ ಸೈನಿಕರು ಬಳಸುವಂಥದ್ದು. ಹೀಗಾಗಿ, ಭಾರತದ ನೆಲದಲ್ಲಿ ಉಗ್ರ ಕೃತ್ಯಗಳನ್ನು ನಡೆಸಲು ಸ್ವತಃ ಪಾಕ್‌ ಸೇನೆಯೇ ನೆರವಾಗುತ್ತಿರುವುದು ಇದೀಗ ಜಗಜ್ಜಾಹೀರಾದಂತಾಗಿದೆ. ನಮ್ಮದು ಉಗ್ರರ ಸ್ವರ್ಗವಲ್ಲ ಎಂದು ವಾದಿಸುತ್ತಾ ಬಂದಿರುವ ಪಾಕಿಸ್ತಾನಕ್ಕೂ ಈ ಬೆಳವಣಿಗೆ ತೀವ್ರ ಮುಖಭಂಗ ಉಂಟುಮಾಡಿದೆ.

ರಾತ್ರೋರಾತ್ರಿ ಎನ್‌ಕೌಂಟರ್‌:
ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ರಾತ್ರೋರಾತ್ರಿ ಕಾರ್ಯಾಚರಣೆ ನಡೆದಿದ್ದು, ಉಗ್ರ ಮಸೂದ್‌ ಅಜರ್‌ನ ಸೋದರ ಸಂಬಂಧಿ ತಲ್ಲಾಹ್‌ ರಶೀದ್‌, ಜೈಶ್‌ನ ವಿಭಾಗೀಯ ಕಮಾಂಡರ್‌ ಮೆಹೂ¾ದ್‌ ಭಾಯಿ ಹಾಗೂ ವಾಸಿಂ ಅಹ್ಮದ್‌ ಗನಿ ಎಂಬವರನ್ನು ಹತ್ಯೆಗೈಯ್ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಆದರೆ, ಗುಂಡಿನ ಚಕಮಕಿ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹತ ಉಗ್ರರ ಪೈಕಿ ಮೊದಲ ಇಬ್ಬರು ಮೋಸ್ಟ್‌ ವಾಂಟೆಡ್‌ ಉಗ್ರರಾಗಿದ್ದು, ಅಹ್ಮದ್‌ ಗನಿ ಸ್ಥಳೀಯ ಯುವಕ. ಈತ ಕಳೆದ ಮೇ ತಿಂಗಳಲ್ಲಿ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದ ಎಂದು ಸುದ್ದಿಗೋಷ್ಠಿಯಲ್ಲಿ ಸಿಆರ್‌ಪಿಎಫ್, ಸೇನೆ ಮತ್ತು ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಎನ್‌ಕೌಂಟರ್‌ ಬಳಿಕ ಹಸನ್‌ ಶಾ ಎಂಬ ಹೆಸರಿನ ಜೈಶ್‌ ವಕ್ತಾರ ಸ್ಥಳೀಯ ಸುದ್ದಿಸಂಸ್ಥೆಗಳಿಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾನೆ. ಅದರಲ್ಲಿ ಮೃತಪಟ್ಟ ಉಗ್ರರ ಪೈಕಿ ಒಬ್ಬ ಮಸೂದ್‌ ಅಜರ್‌ನ ಸೋದರ ಸಂಬಂಧಿ ಎಂಬುದನ್ನು ದೃಢಪಡಿಸಿದ್ದಾನೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಐಜಿ ಮುನೀರ್‌ ಖಾನ್‌, “ಗುರುತನ್ನು ತಾವೇ ಹೇಳಿಕೊಂಡಿದ್ದಕ್ಕಾಗಿ ಉಗ್ರ ಸಂಘಟನೆಗೆ ಥ್ಯಾಂಕ್ಸ್‌ ಹೇಳಬೇಕು. ಇನ್ನಾದರೂ, ಪಾಕಿಸ್ತಾನವು ಈ ವಿದೇಶಿ ಉಗ್ರರ ಮೃತದೇಹಗಳನ್ನು ಪಡೆದುಕೊಳ್ಳಬೇಕು. ಇದೇ ಮೊದಲ ಬಾರಿಗೆ ಉಗ್ರರು ನಮ್ಮವರು ಎಂದು ಅವರು ಒಪ್ಪಿಕೊಂಡಿದ್ದಾರೆ’ ಎಂದಿದ್ದಾರೆ.

ಪಾಕ್‌ ಬಣ್ಣ ಬಯಲು
ಮೃತ ಉಗ್ರರಿಂದ ವಶಪಡಿಸಿಕೊಂಡ ಎಂ4 ಕಾರ್ಬೈನ್‌ ರೈಫ‌ಲ್‌ ಅಮೆರಿಕದಲ್ಲಿ ತಯಾರಾಗಿದ್ದು. ಅವುಗಳನ್ನು ಅಮೆರಿಕವು ಪಾಕಿಸ್ತಾನದ ಸೇನೆಗೆಂದು ಮಾರಾಟ ಮಾಡುತ್ತಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನ ಮತ್ತು ಇರಾಕ್‌ನಲ್ಲಿನ ನ್ಯಾಟೋ ಪಡೆಗಳೂ ಈ ರೈಫ‌ಲ್‌ಗ‌ಳನ್ನು ಬಳಸುತ್ತಿವೆ. ಹೀಗಾಗಿ, ಪಾಕಿಸ್ತಾನದ ವಿಶೇಷ ಸೇನಾಪಡೆಯೇ ಈ ಶಸ್ತ್ರಾಸ್ತ್ರಗಳನ್ನು ಉಗ್ರರಿಗೆ ನೀಡಿರುವುದು ಈಗ ಸ್ಪಷ್ಟವಾಗಿದೆ. ಇದು ಪಾಕ್‌ ಮತ್ತು ಜೈಶ್‌ ಸಂಘಟನೆ ನಡುವಿನ ನಂಟನ್ನು ಮತ್ತು ಕಾಶ್ಮೀರದಲ್ಲಿ ಅವರು ನಡೆಸುತ್ತಿರುವ ವಿಧ್ವಂಸಕ ಕೃತ್ಯಗಳನ್ನು ಬಯಲು ಮಾಡಿದೆ. ಇದೇ ಮೊದಲ ಬಾರಿಗೆ ಉಗ್ರರ ಕೈಯ್ಯಲ್ಲಿ ಅಮೆರಿಕ ನಿರ್ಮಿತ ರೈಫ‌ಲ್‌ ದೊರೆತಿದ್ದು, ಪಾಕ್‌ ವಿರುದ್ಧ ಮಾಡುತ್ತಿದ್ದ ಆರೋಪ ಸತ್ಯವೆಂದು ಜಗಜ್ಜಾಹೀರಾಗಿದೆ ಎಂದು ಮೇಜರ್‌ ಜನರಲ್‌ ಬಿ.ಎಸ್‌. ರಾಜು ಹೇಳಿದ್ದಾರೆ.

ಉಗ್ರರಿಗೆ ಹಣಕಾಸು: 36.34 ಕೋಟಿ ವಶ
ಕಪ್ಪುಹಣ ಮತ್ತು ಭಯೋತ್ಪಾದನೆಯ ವಿರುದ್ಧ ಸಿಕ್ಕ ದೊಡ್ಡ ಯಶಸ್ಸು ಎಂಬಂತೆ, ಜಮ್ಮು-ಕಾಶ್ಮೀರ ಉಗ್ರರಿಗೆ ಹಣಕಾಸು ನೆರವು ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಬರೋಬ್ಬರಿ 36.34 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ. ಅಷ್ಟೇ ಅಲ್ಲದೆ, ಪ್ರಕರಣ ಸಂಬಂಧ 9 ಮಂದಿಯನ್ನು ಬಂಧಿಸಲಾಗಿದೆ. ವಿನೋದ್‌ ಶೆಟ್ಟಿ, ಪ್ರದೀಪ್‌ ಚೌಹಾಣ್‌, ಭಗವಾನ್‌ ಸಿಂಗ್‌, ಶಹನವಾಜ್‌ ಮಿರ್‌, ದೀಪಕ್‌ ತೋಪ್ರಾನಿ, ಮಜೀದ್‌ ಸೋಫಿ, ಇಜಾಝುಲ್‌ ಹಸನ್‌, ಜಸ್ವಿಂದರ್‌ ಸಿಂಗ್‌ ಮತ್ತು ಉಮೇರ್‌ ದರ್‌ ಎಂಬವರೇ ಬಂಧಿತರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.