ಅಮೆರಿಕ ನೆಮ್ಮದಿಗೆ ಮತ್ತೆ ಉ.ಕೊರಿಯಾ ಕೊಳ್ಳಿ


Team Udayavani, Nov 30, 2017, 6:00 AM IST

amerika.jpg

ಸಿಯೋಲ್‌: ಒಂದರ ಹಿಂದೊಂದರಂತೆ ಕ್ಷಿಪಣಿ ಪರೀಕ್ಷೆ ನಡೆಸುತ್ತಾ ಅಮೆರಿಕ ನಾಶಗೊಳಿಸುವ ಬೆದರಿಕೆ ಒಡ್ಡುತ್ತಿರುವ ಉತ್ತರ ಕೊರಿಯಾ ಬುಧವಾರ ಅತ್ಯಂತ ಶಕ್ತಿಶಾಲಿಯಾದ ಹ್ವಾಸಾಂಗ್‌-15 ಎಂಬ ಖಂಡಾತರ ಕ್ಷಿಪಣಿಯೊಂದರ ಯಶಸ್ವಿ ಪ್ರಯೋಗ ನಡೆಸಿರುವುದಾಗಿ ಘೋಷಿಸಿದೆ.   

ಖಂಡಾಂತರ ಕ್ಷಿಪಣಿ ಪರೀಕ್ಷೆ ಸರಣಿಯಲ್ಲಿ ಉತ್ತರ ಕೊರಿಯಾ ನಡೆಸಿರುವ ಮೂರನೇ ಕ್ಷಿಪಣಿ ಇದಾಗಿದ್ದು, ಈ ಹಿಂದಿನ ಎಲ್ಲಾ ಕ್ಷಿಪಣಿ ಗಿಂತಲೂ ಹ್ವಾಸಾಂಗ್‌-51 ಅತ್ಯಂತ ಶಕ್ತಿಶಾಲಿ ಹಾಗೂ ವಿನಾಶಕಾರಿ ಎಂದು ಹೇಳಲಾಗಿದೆ. 

ಏನಿದರ ವಿಶೇಷ?: ಇದು ಅಣ್ವಸ್ತ್ರದ ಸಿಡಿ ತಲೆಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ. ಉಡಾವಣೆಗೊಂಡ ನಂತರ 4,475 ಕಿ.ಮೀ. ಎತ್ತರಕ್ಕೆ ಚಿಮ್ಮಬಲ್ಲ ಇದು, ಆನಂತರ ತನ್ನ ಗುರಿಯೆಡೆಗೆ ಮುಖ ಮಾಡಿ 13 ಸಾವಿರ ಕಿ.ಮೀ.ವರೆಗೆ ಸಾಗಬಲ್ಲದು. ಅಲ್ಲದೆ, ಅಮೆರಿಕದ ಯಾವುದೇ ಪ್ರಮುಖ ನಗರವನ್ನು ನಿಮಿಷಗಳಲ್ಲೇ ನಾಶ ಮಾಡಬಲ್ಲ ಶಕ್ತಿ ಇದಕ್ಕಿದೆ ಎಂದು ಉತ್ತರ ಕೊರಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಸರ್ಕಾರಿ ವಾಹಿನಿಯಲ್ಲಿ ಕ್ಷಿಪಣಿ ಯಶಸ್ವಿ ಪರೀಕ್ಷೆ ಪ್ರಕಟಿಸಿದ ಅಲ್ಲಿನ ಸ್ಟಾರ್‌ ನಿರೂಪಕಿ ರಿ ಚುನ್‌-ಹೀ, ಹೊಸ ಕ್ಷಿಪಣಿ ಪರೀಕ್ಷೆಯಿಂದಾಗಿ ಉತ್ತರ ಕೊರಿಯಾವು ಅಣ್ವಸ್ತ್ರಗಳ ಸಂಸ್ಥಾನ ವೆಂಬ ಹೆಗ್ಗಳಿಕೆ ಪಡೆದುಕೊಂಡಂತಾಗಿದೆ ಎಂದು ಅಧ್ಯಕ್ಷ ಕಿಮ್‌ ಜಾಂಗ್‌-ಉನ್‌ ಘೋಷಿ ಸಿರುವುದಾಗಿ ಹೇಳಿದ್ದಾರೆ. ಮಹತ್ವದ ಬೆಳವಣಿಗೆಗಳು ನಡೆದಾಗ ಮಾತ್ರವೇ ರಿ ಚುನ್‌ ಅವರು ಟಿವಿಯಲ್ಲಿ ಕಾಣಿಸಿ ಕೊಳ್ಳುತ್ತಾರೆ.

ಉತ್ತರ ಕೊರಿಯಾದ ಈ ಹೊಸ ರಣೋತ್ಸಾಹ ಅಮೆರಿಕಕ್ಕೆ ಕೇಡುಗಾಲ ತರಲಿದೆ ಎಂದು ಹೇಳಲಾಗಿದ್ದು, ಅಮೆರಿಕದ ವಿಜ್ಞಾನಿ ಗಳ ಒಕ್ಕೂಟದ ಸಹ ನಿರ್ದೇಶಕ ಡೇವಿಡ್‌ ರಿಟ್‌ ಅವರೂ ಈ ಕ್ಷಿಪಣಿ ಬಗ್ಗೆ ಆತಂಕ ವ್ಯಕ್ತಪಡಿಸಿರುವುದು ಇದಕ್ಕೆ ಪುಷ್ಟಿ ನೀಡಿದೆ. 

ರಷ್ಯಾ ಪ್ರತಿಕ್ರಿಯೆ: ಉತ್ತರ ಕೊರಿಯಾದ ಹೊಸ ಕ್ಷಿಪಣಿ ಪ್ರಯೋಗ, ಯುದ್ಧ ಪ್ರಚೋದನಾ ತಂತ್ರಗಾರಿಕೆ ಎಂದು ರಷ್ಯಾದ ಅಧ್ಯಕ್ಷರ ಅಧಿಕೃತ ನಿವಾಸವಾದ ಮಾಸ್ಕೊ ಕ್ರೆಮ್ಲಿನ್‌ ಹೇಳಿದೆ. 

ತ್ರಿಮೂರ್ತಿಗಳ ತುರ್ತು ಸಭೆ
ಉತ್ತರ ಕೊರಿಯಾ ವತಿಯಿಂದ ಹೊಸ ಕ್ಷಿಪಣಿ ಪ್ರಯೋಗ ಯಶಸ್ವಿ ವಿಚಾರ ಪ್ರಕಟವಾದ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ದೂರವಾಣಿ ಮೂಲಕ ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್‌ ಜೇ-ಇನ್‌ ಹಾಗೂ ಜಪಾನ್‌ ಪ್ರಧಾನಿ ಅಬೆ ಶಿಂಜೊ ತುರ್ತು ಸಭೆ ನಡೆಸಿದ್ದಾರೆ. ಉತ್ತರ ಕೊರಿಯಾದ ಈ ನಡೆಯಿಂದ ದಕ್ಷಿಣ ಕೊರಿಯಾ, ಜಪಾನ್‌ ರಾಷ್ಟ್ರಗಳು ಕಟ್ಟೆಚ್ಚರ ವಹಿಸಬೇಕೆಂದು ಟ್ರಂಪ್‌ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.