ಚೀನ-ಪಾಕ್‌ ಸ್ನೇಹದಲ್ಲಿ ಬಿರುಕು?


Team Udayavani, Dec 6, 2017, 6:00 AM IST

pak.jpg

ಇಸ್ಲಾಮಾಬಾದ್‌: ಒಂದಲ್ಲ ಒಂದು ಕಾರಣಕ್ಕಾಗಿ ಜಾಗತಿಕ ಮುಖಭಂಗ ಅನುಭವಿಸುತ್ತಾ ಬಂದಿರುವ ಪಾಕಿಸ್ಥಾನ ಈಗ ಚೀನ ಕೆಂಗಣ್ಣಿಗೂ ಗುರಿಯಾಗಿದೆ. ಗಳಸ್ಯ ಕಂಠಸ್ಯನಂತಿದ್ದ ರಾಷ್ಟ್ರದ ಸ್ನೇಹವನ್ನೂ ಕಳೆದುಕೊಳ್ಳುವ ಆತಂಕದಲ್ಲಿದೆ. ಉಗ್ರರ ಬೆಂಬಲಕ್ಕೆ ನಿಂತಿದೆ ಎನ್ನುವ  ಕಾರಣಕ್ಕಾಗಿ ಅಮೆರಿಕದ ಆರ್ಥಿಕ ನೆರವನ್ನು ಕಳೆದು ಕೊಂಡಿರುವ ಪಾಕಿಸ್ಥಾನಕ್ಕೆ ಈಗ ಚೀನ ಭ್ರಷ್ಟಾಚಾರದ ನೆಪವೊಡ್ಡಿ ಶಾಕ್‌ ನೀಡಿದೆ.

ಚೀನ-ಪಾಕಿಸ್ಥಾನ ಸಂಪರ್ಕ ಸೇತುವಾಗಿ ನಿರ್ಮಾಣ ಹಂತದಲ್ಲಿರುವ ಬರೋಬ್ಬರಿ 50 ಶತಕೋಟಿ ಡಾಲರ್‌ ಮೊತ್ತದ ಚೀನ- ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ (ಸಿಪಿಇಸಿ) ಯೋಜನೆಗೆ ಆರ್ಥಿಕ ನೆರವು ನೀಡುವ ಒಪ್ಪಂದದಿಂದ ಸದ್ಯಕ್ಕೆ ಹಿಂದಕ್ಕೆ ಸರಿಯುವುದಾಗಿ ಚೀನ ಹೇಳಿದೆ. ಭ್ರಷ್ಟಾಚಾರ, ಅವ್ಯವಹಾರ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆರ್ಥಿಕ ನೆರವು ಸ್ಥಗಿತಗೊಳಿಸಲು ಚೀನ ನಿರ್ಧರಿಸಿದೆ. ಇದರಿಂದ ಪಾಕಿಸ್ಥಾನ ಅಧಿಕಾರಿಗಳು ಗಾಬರಿ ಗೊಂಡಿದ್ದಾರೆ. ಚೀನ ಅಧಿಕಾರಿಗಳ ಜತೆ ಮಾತುಕತೆಗೂ ಮುಂದಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ಥಾನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎ)ದ ಮಹತ್ವಾಕಾಂಕ್ಷೆಯ ಯೋಜನೆ ಎಂದೇ ಹೇಳಲಾಗುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೇ ಇದೀಗ ಬ್ರೇಕ್‌ ಬೀಳುವ ಆತಂಕದ ಸ್ಥಿತಿ ಸೃಷ್ಟಿಯಾಗಿದೆ.

ಯಾಕೆ ಈ ನಿರ್ಧಾರ?
ಬೀಜಿಂಗ್‌ ಪ್ರಕರಣದ ಬಳಿಕ ಆರ್ಥಿಕ ಸಹಕಾರ ನಿಯಮಾವಳಿಯಲ್ಲಿ ಒಂದಿಷ್ಟು ತಿದ್ದುಪಡಿಗೆ ಮುಂದಾಗಿರುವುದೇ ಚೀನದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಹೊಸ ನಿಯಮಾವಳಿ ಪ್ರಕಾರ ಪಾಕಿಸ್ಥಾನಕ್ಕೆ ಆರ್ಥಿಕ ನೆರವು ಅಸಾಧ್ಯ ಎನ್ನುವುದು ಸರಕಾರಿ ಹಿರಿಯ ಅಧಿಕಾರಿಗಳ ಲೆಕ್ಕಾಚಾರವಾಗಿದೆ ಎಂದು ಪಾಕಿಸ್ಥಾನದ ಸುದ್ದಿ ಸಂಸ್ಥೆ ಡಾನ್‌ ವರದಿ ಮಾಡಿದೆ. 

ಚೀನದ ಮಹತ್ವಾಕಾಂಕ್ಷೆಯ ಒನ್‌ ಬೆಲ್ಟ್ ಒನ್‌ ರೋಡ್‌ ಯೋಜನೆಯ ಭಾಗ ಇದಾಗಿದ್ದರಿಂದ ಪಾಕಿಸ್ಥಾನವು ಚೀನ ಜತೆ ಕೈಜೋಡಿಸಿತ್ತು. ಈ ಯೋಜನೆಯಂತೆ ಈ ಹೆದ್ದಾರಿ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದ ಮೂಲಕ ಹಾದು ಹೋಗಲಿದೆ. ಇದರಿಂದ ಪಾಕ್‌ನ ಬಲೂಚಿಸ್ಥಾನ ಹಾಗೂ ಚೀನದ ಕ್ಸಿನ್‌ಜಿಯಾಂಗ್‌ 
ಸಂಪರ್ಕ ಸಾಧ್ಯವಾಗಲಿದೆ.

ಪಾಕ್‌ಗೆ ಏಕೆ ಆತಂಕ ?
ಚೀನ ಜತೆ ಒಪ್ಪಂದ ಮಾಡಿಕೊಂಡಿದ್ದ ಪಾಕಿಸ್ಥಾನಕ್ಕೆ ಇದರಿಂದ ತನ್ನ ಮೂರು ಪ್ರಮುಖ ಯೋಜನೆಗಳೇ ನನೆಗುದಿಗೆ ಬೀಳುವ ಆತಂಕ ಶುರುವಾಗಿದೆ. ಅಂದಾಜು 81 ಶತಕೋಟಿ ರೂ. ಮೌಲ್ಯದ, 210 ಕಿಲೋ ಮೀಟರ್‌ ದೂರದ ದೆರಾ ಇಸೆ¾„ಲ್‌ ಖಾನ್‌-ಜೋಬ್‌ ರಸ್ತೆ, 19.76 ಶತಕೋಟಿ ರೂ. ಮೌಲ್ಯದ, 110 ಕಿಲೋ ಮೀಟರ್‌ ದೂರದ ಖುಜ್ಧರ್‌-ಬಸಿಮಾ ರಸ್ತೆ ಹಾಗೂ 8.5 ಶತ ಕೋಟಿ ರೂ. ಮೌಲ್ಯದ 136 ಕಿಲೋ ಮೀಟರ್‌ ದೂರದ ರೈಕೋಟ್‌-ಥಾಕೋಟ್‌ ಕರಕರಾಮ್‌ ಹೈವೇ ನಿರ್ಮಾಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.