ಚೀನ-ಪಾಕ್‌ ಸ್ನೇಹದಲ್ಲಿ ಬಿರುಕು?


Team Udayavani, Dec 6, 2017, 6:00 AM IST

pak.jpg

ಇಸ್ಲಾಮಾಬಾದ್‌: ಒಂದಲ್ಲ ಒಂದು ಕಾರಣಕ್ಕಾಗಿ ಜಾಗತಿಕ ಮುಖಭಂಗ ಅನುಭವಿಸುತ್ತಾ ಬಂದಿರುವ ಪಾಕಿಸ್ಥಾನ ಈಗ ಚೀನ ಕೆಂಗಣ್ಣಿಗೂ ಗುರಿಯಾಗಿದೆ. ಗಳಸ್ಯ ಕಂಠಸ್ಯನಂತಿದ್ದ ರಾಷ್ಟ್ರದ ಸ್ನೇಹವನ್ನೂ ಕಳೆದುಕೊಳ್ಳುವ ಆತಂಕದಲ್ಲಿದೆ. ಉಗ್ರರ ಬೆಂಬಲಕ್ಕೆ ನಿಂತಿದೆ ಎನ್ನುವ  ಕಾರಣಕ್ಕಾಗಿ ಅಮೆರಿಕದ ಆರ್ಥಿಕ ನೆರವನ್ನು ಕಳೆದು ಕೊಂಡಿರುವ ಪಾಕಿಸ್ಥಾನಕ್ಕೆ ಈಗ ಚೀನ ಭ್ರಷ್ಟಾಚಾರದ ನೆಪವೊಡ್ಡಿ ಶಾಕ್‌ ನೀಡಿದೆ.

ಚೀನ-ಪಾಕಿಸ್ಥಾನ ಸಂಪರ್ಕ ಸೇತುವಾಗಿ ನಿರ್ಮಾಣ ಹಂತದಲ್ಲಿರುವ ಬರೋಬ್ಬರಿ 50 ಶತಕೋಟಿ ಡಾಲರ್‌ ಮೊತ್ತದ ಚೀನ- ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ (ಸಿಪಿಇಸಿ) ಯೋಜನೆಗೆ ಆರ್ಥಿಕ ನೆರವು ನೀಡುವ ಒಪ್ಪಂದದಿಂದ ಸದ್ಯಕ್ಕೆ ಹಿಂದಕ್ಕೆ ಸರಿಯುವುದಾಗಿ ಚೀನ ಹೇಳಿದೆ. ಭ್ರಷ್ಟಾಚಾರ, ಅವ್ಯವಹಾರ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆರ್ಥಿಕ ನೆರವು ಸ್ಥಗಿತಗೊಳಿಸಲು ಚೀನ ನಿರ್ಧರಿಸಿದೆ. ಇದರಿಂದ ಪಾಕಿಸ್ಥಾನ ಅಧಿಕಾರಿಗಳು ಗಾಬರಿ ಗೊಂಡಿದ್ದಾರೆ. ಚೀನ ಅಧಿಕಾರಿಗಳ ಜತೆ ಮಾತುಕತೆಗೂ ಮುಂದಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ಥಾನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎ)ದ ಮಹತ್ವಾಕಾಂಕ್ಷೆಯ ಯೋಜನೆ ಎಂದೇ ಹೇಳಲಾಗುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೇ ಇದೀಗ ಬ್ರೇಕ್‌ ಬೀಳುವ ಆತಂಕದ ಸ್ಥಿತಿ ಸೃಷ್ಟಿಯಾಗಿದೆ.

ಯಾಕೆ ಈ ನಿರ್ಧಾರ?
ಬೀಜಿಂಗ್‌ ಪ್ರಕರಣದ ಬಳಿಕ ಆರ್ಥಿಕ ಸಹಕಾರ ನಿಯಮಾವಳಿಯಲ್ಲಿ ಒಂದಿಷ್ಟು ತಿದ್ದುಪಡಿಗೆ ಮುಂದಾಗಿರುವುದೇ ಚೀನದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಹೊಸ ನಿಯಮಾವಳಿ ಪ್ರಕಾರ ಪಾಕಿಸ್ಥಾನಕ್ಕೆ ಆರ್ಥಿಕ ನೆರವು ಅಸಾಧ್ಯ ಎನ್ನುವುದು ಸರಕಾರಿ ಹಿರಿಯ ಅಧಿಕಾರಿಗಳ ಲೆಕ್ಕಾಚಾರವಾಗಿದೆ ಎಂದು ಪಾಕಿಸ್ಥಾನದ ಸುದ್ದಿ ಸಂಸ್ಥೆ ಡಾನ್‌ ವರದಿ ಮಾಡಿದೆ. 

ಚೀನದ ಮಹತ್ವಾಕಾಂಕ್ಷೆಯ ಒನ್‌ ಬೆಲ್ಟ್ ಒನ್‌ ರೋಡ್‌ ಯೋಜನೆಯ ಭಾಗ ಇದಾಗಿದ್ದರಿಂದ ಪಾಕಿಸ್ಥಾನವು ಚೀನ ಜತೆ ಕೈಜೋಡಿಸಿತ್ತು. ಈ ಯೋಜನೆಯಂತೆ ಈ ಹೆದ್ದಾರಿ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದ ಮೂಲಕ ಹಾದು ಹೋಗಲಿದೆ. ಇದರಿಂದ ಪಾಕ್‌ನ ಬಲೂಚಿಸ್ಥಾನ ಹಾಗೂ ಚೀನದ ಕ್ಸಿನ್‌ಜಿಯಾಂಗ್‌ 
ಸಂಪರ್ಕ ಸಾಧ್ಯವಾಗಲಿದೆ.

ಪಾಕ್‌ಗೆ ಏಕೆ ಆತಂಕ ?
ಚೀನ ಜತೆ ಒಪ್ಪಂದ ಮಾಡಿಕೊಂಡಿದ್ದ ಪಾಕಿಸ್ಥಾನಕ್ಕೆ ಇದರಿಂದ ತನ್ನ ಮೂರು ಪ್ರಮುಖ ಯೋಜನೆಗಳೇ ನನೆಗುದಿಗೆ ಬೀಳುವ ಆತಂಕ ಶುರುವಾಗಿದೆ. ಅಂದಾಜು 81 ಶತಕೋಟಿ ರೂ. ಮೌಲ್ಯದ, 210 ಕಿಲೋ ಮೀಟರ್‌ ದೂರದ ದೆರಾ ಇಸೆ¾„ಲ್‌ ಖಾನ್‌-ಜೋಬ್‌ ರಸ್ತೆ, 19.76 ಶತಕೋಟಿ ರೂ. ಮೌಲ್ಯದ, 110 ಕಿಲೋ ಮೀಟರ್‌ ದೂರದ ಖುಜ್ಧರ್‌-ಬಸಿಮಾ ರಸ್ತೆ ಹಾಗೂ 8.5 ಶತ ಕೋಟಿ ರೂ. ಮೌಲ್ಯದ 136 ಕಿಲೋ ಮೀಟರ್‌ ದೂರದ ರೈಕೋಟ್‌-ಥಾಕೋಟ್‌ ಕರಕರಾಮ್‌ ಹೈವೇ ನಿರ್ಮಾಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.