ಜೀವಿತಾವಧಿವರೆಗೆ ಕ್ಸಿ ಅಧ್ಯಕ್ಷ


Team Udayavani, Mar 12, 2018, 10:15 AM IST

china.jpg

ಬೀಜಿಂಗ್‌:  ಚೀನದ ಹಾಲಿ ಅಧ್ಯಕ್ಷ  ಕ್ಸಿ ಜಿನ್‌ಪಿಂಗ್‌ ತಮ್ಮ ಜೀವಿತಾವಧಿಯವರೆಗೆ ಇದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಚೀನದ ಸಂವಿಧಾನದಲ್ಲಿ ಐತಿಹಾಸಿಕ ತಿದ್ದುಪಡಿ ತಂದು, ಸಂಸತ್‌ನಲ್ಲಿ ಅದಕ್ಕೆ ಒಪ್ಪಿಗೆಯನ್ನೂ ಪಡೆಯಲಾಗಿದೆ.

ಪ್ರಸಕ್ತ ತಿಂಗಳಲ್ಲಿಯೇ ಕ್ಸಿ ಜಿನ್‌ಪಿಂಗ್‌ ಅವರು ಎರಡನೇ ಅವಧಿಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವ ಅವಕಾಶ ಪಡೆಯುವವರಿದ್ದರು. ಕಮ್ಯುನಿಸ್ಟ್‌ ಪಾರ್ಟಿ ಆಫ್ ಚೀನ (ಸಿಪಿಸಿ)ದ ಸಂಸ್ಥಾಪಕ ಮಾವೋ ಝೆಡಾಂಗ್‌ ಜೀವಿತಾವಧಿಯವರೆಗೆ ಚೀನದ ಅಧ್ಯಕ್ಷರಾಗಿದ್ದರು. ಅವರ ಬಳಿಕ ಹಾಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಈ ಅವಕಾಶ ಸಿಗುತ್ತಿದೆ. ಹೀಗಾಗಿ ಅಂಥ ಅವಕಾಶ ಪಡೆದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಬೆಳವಣಿಗೆಯಿಂದಾಗಿ ಚೀನದ ಸಂಸತ್‌, ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ (ಎನ್‌ಪಿಸಿ) ಆಡಳಿತ ಪಕ್ಷ ಸೂಚಿಸುವ ಅಂಶಗಳಿಗೆ ಒಪ್ಪಿಗೆ ಸೂಚಿಸುವ ರಬ್ಬರ್‌ಸ್ಟಾಂಪ್‌ ಎಂಬ ಅನ್ವರ್ಥ ನಾಮವನ್ನು ಉಳಿಸಿಕೊಂಡಂತಾಗಿದೆ.

ಇದುವರೆಗೆ ಚೀನದಲ್ಲಿ ಅಧ್ಯಕ್ಷರಾದ ವ್ಯಕ್ತಿ ಎರಡು ಬಾರಿಗೆ ಮಾತ್ರ ಆ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಇತ್ತು. ಚೀನ ಸಂವಿಧಾನದಲ್ಲಿ ಸದ್ಯ ಉಲ್ಲೇಖವಾಗಿರುವ ಅಧ್ಯಕ್ಷ, ಉಪಾಧ್ಯಕ್ಷ ಎಂಬ ಹುದ್ದೆಯನ್ನು ತೆಗೆದುಹಾಕಲು ಕೂಡ ಸಂಸತ್‌ನಲ್ಲಿ ಒಪ್ಪಿಕೊಳ್ಳಲಾಗಿದೆ. ಪ್ರಸ್ತಾವ ಅಂಗೀಕಾರಕ್ಕೆ 2,958 ಮತಗಳು ಬಂದಿವೆ. ಇಬ್ಬರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರೆ, ಮೂವರು ಗೈರು ಹಾಜರಾಗಿದ್ದರು.

ರವಿವಾರ ನಡೆದ ಮತದಾನದಲ್ಲಿ ಮತಪತ್ರಗಳನ್ನು ಬಳಕೆ ಮಾಡಲಾಗಿತ್ತು. ವಿದ್ಯುನ್ಮಾನ ಮತಯಂತ್ರ ಅಥವಾ ನಿರ್ಧಾರಕ್ಕೆ ಸಮ್ಮತಿ ಸೂಚಿಸಲು ಕೈ ಎತ್ತಿ ಅಭಿಪ್ರಾಯ ತಿಳಿಸುವ ವ್ಯವಸ್ಥೆಯನ್ನು ಅನುಸರಿಸಲಾಗಿರಲಿಲ್ಲ. ಸಂಸತ್‌ನಲ್ಲಿ ಅಧ್ಯಕ್ಷ ಕ್ಸಿ ಅವರು ಮೊದಲು ಎದ್ದು ನಿಂತು ಮತ ಹಾಕಿದರು. ಇದಕ್ಕೂ ಮುನ್ನ ಸಿಪಿಸಿಯ ಉನ್ನತ ಮಟ್ಟದ ಸಮಿತಿಯಾಗಿರುವ ಏಳು ಮಂದಿ ಸದಸ್ಯರು ಸಂವಿಧಾನ ತಿದ್ದುಪಡಿಲಿಗೆ ಒಪ್ಪಿಗೆ ಸೂಚಿಸಿದ್ದರು.

ತಿದ್ದುಪಡಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ರಾಜಕೀಯ ವಿಶ್ಲೇಷಕರು, ಒಂದು ಪಕ್ಷದ ಆಡಳಿತ ಎನ್ನುವುದಕ್ಕಿಂತ ಒಬ್ಬ ವ್ಯಕ್ತಿಯ ಆಡಳಿತ ಎಂಬ ಸ್ಥಿತಿ ಬಂದಿದೆ. ಇದೊಂದು ಚಕ್ರವರ್ತಿಯ ಆಡಳಿತದಂತೆ ಇದೆ. ಅದು ನೆರೆಯ ರಾಷ್ಟ್ರಗಳ ಮೇಲೆ ಪ್ರಭಾವ ಬೀರಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತ- ಚೀನ ಸಂಬಂಧ
ಹಾಲಿ ಅಧ್ಯಕ್ಷರ ಅವಧಿಯಲ್ಲಿಯೇ 73 ದಿನಗಳ ಡೋಕ್ಲಾಂ ವಿವಾದ ಉಂಟಾಗಿತ್ತು. ಕೋಟ್ಯಂತರ ರೂ. ಮೌಲ್ಯದ ವಿವಿಧ ಕಾಮಗಾರಿಗಳಲ್ಲಿ ನೆರೆಯ ರಾಷ್ಟ್ರ ಹೂಡಿಕೆ ಮಾಡಿದೆ. ಅದರಲ್ಲಿ ಚೀನ ಪಾಕಿಸ್ಥಾನ ಇಕಾನಮಿಕ್‌ ಕಾರಿಡಾರ್‌ ಯೋಜನೆಯೂ ಸೇರಿದೆ.

ನೇಪಾಳ, ಶ್ರೀಲಂಕಾ, ಮಾಲ್ಡೀವ್ಸ್‌, ಭೂತಾನ್‌ಗಳಲ್ಲಿಯೂ ಅದು ರಸ್ತೆ ಮತ್ತು ರೈಲು ಸಂಪರ್ಕ ಯೋಜನೆಗಳಲ್ಲಿ ಹೂಡಿಕೆ ಮಾಡಿದೆ. ಇದು ಭಾರತಕ್ಕೆ ವ್ಯೂಹಾತ್ಮಕವಾಗಿ ಸವಾಲೂ ಹೌದು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.