ಷರೀಫ್ ಕುಟುಂಬ ಜೈಲಿಗೆ?


Team Udayavani, Jul 7, 2018, 6:00 AM IST

8.jpg

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಕೀಯ ಇತಿಹಾಸದಲ್ಲಿ ದಾಖಲಾಗಿ ಉಳಿಯುವಂಥ ತೀರ್ಪನ್ನು ಇಲ್ಲಿನ ಭ್ರಷ್ಟಾಚಾರ ನಿಗ್ರಹ ಕೋರ್ಟ್‌ ಶುಕ್ರವಾರ ನೀಡಿದೆ. ಭ್ರಷ್ಟಾಚಾರ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಪ್ರಧಾನಿ ನವಾಜ್‌ ಷರೀಫ್ ಕುಟುಂಬವೇ ಜೈಲುಪಾಲಾಗಲಿದೆ. ಪುತ್ರಿ ಮರ್ಯಮ್‌, ಅವರ ಪತಿ ಮೊಹಮ್ಮದ್‌ ಸಫ‌ªರ್‌ ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಂತೆಯೂ ಅನರ್ಹಗೊಳಿಸಲಾಗಿದೆ. ಇನ್ನೊಂದೆಡೆ, ಷರೀಫ್ ಲಂಡನ್‌ನಲ್ಲಿ ಹೊಂದಿರುವ ಅವೆನ್‌ಫೀಲ್ಡ್‌ ಹೌಸ್‌ (Avenfield House) ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಕೋರ್ಟ್‌ ಆದೇಶ ನೀಡಿದೆ. 

ಷರೀಫ್ ಪತ್ನಿ ಖುಲ್ಸುಮ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಷರೀಫ್, ಮರ್ಯಮ್‌ ಅಲ್ಲಿಯೇ ಉಳಿದುಕೊಂಡಿದ್ದಾರೆ. ವಾರ ಕಾಲ ತೀರ್ಪು ಪ್ರಕಟಿಸುವುದನ್ನು ಮುಂದೂಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ಅದಕ್ಕೆ ಕೋರ್ಟ್‌ ಸಮ್ಮತಿಸಿರಲಿಲ್ಲ.

ನಾಲ್ವರು ಅಪರಾಧಿಗಳು: ಷರೀಫ್, ಪುತ್ರಿ ಮರ್ಯಮ್‌, ಅವರ ಪತಿ ಮೊಹಮ್ಮದ್‌ ಸಫ‌ªರ್‌, ಮಾಜಿ ಪ್ರಧಾನಿ ಪುತ್ರರಾದ ಹಸನ್‌ ಮತ್ತು ಹುಸೇನ್‌ರನ್ನು ತಲೆತಪ್ಪಿಸಿಕೊಂಡವರು ಎಂದು ಕೋರ್ಟ್‌ ಘೋಷಣೆ ಮಾಡಿದೆ. ಇವರಿಬ್ಬರು ತನಿಖೆ-ವಿಚಾರಣೆಯ ಯಾವುದೇ ಹಂತದಲ್ಲೂ ಹಾಜರಾಗಿರಲಿಲ್ಲ. ಅಕ್ರಮ ಆಸ್ತಿ ಸಂಪಾದನೆ ಮತ್ತು ಅಧಿಕಾರಿಗಳಿಗೆ ತನಿಖೆಯಲ್ಲಿ ಸಹಕರಿಸಲಿಲ್ಲವೆಂದು ಮರ್ಯಮ್‌ಗೆ ವರ್ಷ ಕಾಲ ಪ್ರತ್ಯೇಕ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರೆಡೂ ಶಿಕ್ಷೆ ಜತೆಯಾಗಿ ಸಾಗಲಿದೆ. ಹೀಗಾಗಿ ಭಾರತದ ನೆರೆಯ ರಾಷ್ಟ್ರವನ್ನು ಮೂರು ಬಾರಿ ಆಳಿದ ಪ್ರಮುಖ ನಾಯಕ ನವಾಜ್‌ ಷರೀಫ್ ಕುಟುಂಬವೇ ಜೈಲು ಪಾಲಾಗಲಿದೆ. ಇದರ ಜತೆ ರಾಜಕೀಯವಾಗಿ ಕೂಡ ಪಾಕಿಸ್ತಾನ ಮುಸ್ಲಿಂ ಲೀಗ್‌-ನವಾಜ್‌ ಪಕ್ಷದ ಸ್ಥಿತಿಯೂ ಡೋಲಾಯಮಾನವಾಗಲಿದೆ. 

ಏನಿದು ಅವೆನ್‌ ಫೀಲ್ಡ್‌?
ಲಂಡನ್‌ನ ವೈಭವೋಪೇತ ಪ್ರದೇಶವಾಗಿರುವ  ಪಾರ್ಕ್‌ ಲೇನ್‌ನಲ್ಲಿರುವ ಅದ್ಧೂರಿ ಕಟ್ಟಡವಿದು. ಇಲ್ಲಿಯೇ ಷರೀಫ್ ಕುಟುಂಬದ ಸದಸ್ಯರು 4 ಅಪಾರ್ಟ್‌ಮೆಂಟ್‌ ಖರೀದಿಸಿ ದ್ದಾರೆ. ತೆರಿಗೆ ಸ್ವರ್ಗ ಪ್ರದೇಶಗಳಾಗಿರುವ ಬ್ರಿಟಿಷ್‌ ವರ್ಜಿನ್‌ ದ್ವೀಪಸಮೂಹ, ಪನಾಮಾ, ಗುರೆನ್ಸಿಯಲ್ಲಿ ಹೂಡಿಕೆ ಮಾಡಿರುವ ಕಂಪನಿಗಳು ಇಲ್ಲಿ ಅಪಾರ್ಟ್‌ಮೆಂಟ್‌ ಖರೀದಿ ಮಾಡುತ್ತವೆ. ನೆಸ್ಕೋಲ್‌ ಲಿಮಿಟೆಡ್‌ ಎಂಬ ಕಂಪನಿ ಮೂಲಕ 1993ರ ಜೂನ್‌ನಲ್ಲಿ ಷರೀಫ್ ಕುಟುಂಬಸ್ಥರು ಮೊದಲ ಅಪಾರ್ಟ್‌ಮೆಂಟ್‌ ಖರೀದಿಸಿದ್ದರು. ಅವೆನ್‌ ಫೀಲ್ಡ್‌ನಲ್ಲಿ ಈ ಅಪಾರ್ಟ್‌ಮೆಂಟ್‌ಗಳಲ್ಲದೆ ಮತ್ತೂಂದು ಆಸ್ತಿಯೂ ಇದೆ. ಆದರೆ ಅದು ಅಕ್ರಮದ ವ್ಯಾಪ್ತಿಗೆ ಒಳಪಟ್ಟುದಲ್ಲ.

ದಾಖಲೆಗಳ ಪ್ರಭಾವ
2016ರ ಏ.3ರಂದು ಭಾರತ, ಪಾಕಿಸ್ತಾನ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಾಯಕರ ಕುಟುಂಬಗಳು ತೆರಿಗೆ ಸ್ವರ್ಗ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿವೆ ಎಂದು ಅಂತಾ ರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ ವರದಿ ಮಾಡಿತ್ತು. ಅದರಲ್ಲಿ ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್ ಕುಟುಂಬಸ್ಥರ ಹೆಸರೂ ಇತ್ತು. 2016ರ ಆ.30ರಂದು ಪಾಕಿಸ್ತಾನ್‌ ತೆಹ್ರಿಕ್‌-ಇ-ಇನ್ಸಾಫ್ ಪಕ್ಷದ ನಾಯಕ ಇಮ್ರಾನ್‌ ಖಾನ್‌ ಸುಪ್ರೀಂ ಕೋರ್ಟಲ್ಲಿ ಕೇಸು ದಾಖಲಿಸಿದ್ದರು. 

ಸತ್ಯ ಹೇಳಿದ್ದಕ್ಕೆ ಪಾಕಿಸ್ತಾನೀಯ ರನ್ನು ಕಠಿಣ ಸರಳು ಗಳಿಂದ ಬಂಧಿಸಲಾಗಿದೆ. ಅವರನ್ನು ಅದರಿಂದ ಮುಕ್ತ ಗೊಳಿಸು ವವರೆಗೂ ನನ್ನ ಹೋರಾಟ ಮುಂದು ವರಿಯುತ್ತದೆ.
ನವಾಜ್‌ ಷರೀಫ್, ಮಾಜಿ ಪ್ರಧಾನಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.