ಷರೀಫ್ ಕುಟುಂಬ ಜೈಲಿಗೆ?


Team Udayavani, Jul 7, 2018, 6:00 AM IST

8.jpg

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಕೀಯ ಇತಿಹಾಸದಲ್ಲಿ ದಾಖಲಾಗಿ ಉಳಿಯುವಂಥ ತೀರ್ಪನ್ನು ಇಲ್ಲಿನ ಭ್ರಷ್ಟಾಚಾರ ನಿಗ್ರಹ ಕೋರ್ಟ್‌ ಶುಕ್ರವಾರ ನೀಡಿದೆ. ಭ್ರಷ್ಟಾಚಾರ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಪ್ರಧಾನಿ ನವಾಜ್‌ ಷರೀಫ್ ಕುಟುಂಬವೇ ಜೈಲುಪಾಲಾಗಲಿದೆ. ಪುತ್ರಿ ಮರ್ಯಮ್‌, ಅವರ ಪತಿ ಮೊಹಮ್ಮದ್‌ ಸಫ‌ªರ್‌ ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಂತೆಯೂ ಅನರ್ಹಗೊಳಿಸಲಾಗಿದೆ. ಇನ್ನೊಂದೆಡೆ, ಷರೀಫ್ ಲಂಡನ್‌ನಲ್ಲಿ ಹೊಂದಿರುವ ಅವೆನ್‌ಫೀಲ್ಡ್‌ ಹೌಸ್‌ (Avenfield House) ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಕೋರ್ಟ್‌ ಆದೇಶ ನೀಡಿದೆ. 

ಷರೀಫ್ ಪತ್ನಿ ಖುಲ್ಸುಮ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಷರೀಫ್, ಮರ್ಯಮ್‌ ಅಲ್ಲಿಯೇ ಉಳಿದುಕೊಂಡಿದ್ದಾರೆ. ವಾರ ಕಾಲ ತೀರ್ಪು ಪ್ರಕಟಿಸುವುದನ್ನು ಮುಂದೂಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ಅದಕ್ಕೆ ಕೋರ್ಟ್‌ ಸಮ್ಮತಿಸಿರಲಿಲ್ಲ.

ನಾಲ್ವರು ಅಪರಾಧಿಗಳು: ಷರೀಫ್, ಪುತ್ರಿ ಮರ್ಯಮ್‌, ಅವರ ಪತಿ ಮೊಹಮ್ಮದ್‌ ಸಫ‌ªರ್‌, ಮಾಜಿ ಪ್ರಧಾನಿ ಪುತ್ರರಾದ ಹಸನ್‌ ಮತ್ತು ಹುಸೇನ್‌ರನ್ನು ತಲೆತಪ್ಪಿಸಿಕೊಂಡವರು ಎಂದು ಕೋರ್ಟ್‌ ಘೋಷಣೆ ಮಾಡಿದೆ. ಇವರಿಬ್ಬರು ತನಿಖೆ-ವಿಚಾರಣೆಯ ಯಾವುದೇ ಹಂತದಲ್ಲೂ ಹಾಜರಾಗಿರಲಿಲ್ಲ. ಅಕ್ರಮ ಆಸ್ತಿ ಸಂಪಾದನೆ ಮತ್ತು ಅಧಿಕಾರಿಗಳಿಗೆ ತನಿಖೆಯಲ್ಲಿ ಸಹಕರಿಸಲಿಲ್ಲವೆಂದು ಮರ್ಯಮ್‌ಗೆ ವರ್ಷ ಕಾಲ ಪ್ರತ್ಯೇಕ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರೆಡೂ ಶಿಕ್ಷೆ ಜತೆಯಾಗಿ ಸಾಗಲಿದೆ. ಹೀಗಾಗಿ ಭಾರತದ ನೆರೆಯ ರಾಷ್ಟ್ರವನ್ನು ಮೂರು ಬಾರಿ ಆಳಿದ ಪ್ರಮುಖ ನಾಯಕ ನವಾಜ್‌ ಷರೀಫ್ ಕುಟುಂಬವೇ ಜೈಲು ಪಾಲಾಗಲಿದೆ. ಇದರ ಜತೆ ರಾಜಕೀಯವಾಗಿ ಕೂಡ ಪಾಕಿಸ್ತಾನ ಮುಸ್ಲಿಂ ಲೀಗ್‌-ನವಾಜ್‌ ಪಕ್ಷದ ಸ್ಥಿತಿಯೂ ಡೋಲಾಯಮಾನವಾಗಲಿದೆ. 

ಏನಿದು ಅವೆನ್‌ ಫೀಲ್ಡ್‌?
ಲಂಡನ್‌ನ ವೈಭವೋಪೇತ ಪ್ರದೇಶವಾಗಿರುವ  ಪಾರ್ಕ್‌ ಲೇನ್‌ನಲ್ಲಿರುವ ಅದ್ಧೂರಿ ಕಟ್ಟಡವಿದು. ಇಲ್ಲಿಯೇ ಷರೀಫ್ ಕುಟುಂಬದ ಸದಸ್ಯರು 4 ಅಪಾರ್ಟ್‌ಮೆಂಟ್‌ ಖರೀದಿಸಿ ದ್ದಾರೆ. ತೆರಿಗೆ ಸ್ವರ್ಗ ಪ್ರದೇಶಗಳಾಗಿರುವ ಬ್ರಿಟಿಷ್‌ ವರ್ಜಿನ್‌ ದ್ವೀಪಸಮೂಹ, ಪನಾಮಾ, ಗುರೆನ್ಸಿಯಲ್ಲಿ ಹೂಡಿಕೆ ಮಾಡಿರುವ ಕಂಪನಿಗಳು ಇಲ್ಲಿ ಅಪಾರ್ಟ್‌ಮೆಂಟ್‌ ಖರೀದಿ ಮಾಡುತ್ತವೆ. ನೆಸ್ಕೋಲ್‌ ಲಿಮಿಟೆಡ್‌ ಎಂಬ ಕಂಪನಿ ಮೂಲಕ 1993ರ ಜೂನ್‌ನಲ್ಲಿ ಷರೀಫ್ ಕುಟುಂಬಸ್ಥರು ಮೊದಲ ಅಪಾರ್ಟ್‌ಮೆಂಟ್‌ ಖರೀದಿಸಿದ್ದರು. ಅವೆನ್‌ ಫೀಲ್ಡ್‌ನಲ್ಲಿ ಈ ಅಪಾರ್ಟ್‌ಮೆಂಟ್‌ಗಳಲ್ಲದೆ ಮತ್ತೂಂದು ಆಸ್ತಿಯೂ ಇದೆ. ಆದರೆ ಅದು ಅಕ್ರಮದ ವ್ಯಾಪ್ತಿಗೆ ಒಳಪಟ್ಟುದಲ್ಲ.

ದಾಖಲೆಗಳ ಪ್ರಭಾವ
2016ರ ಏ.3ರಂದು ಭಾರತ, ಪಾಕಿಸ್ತಾನ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಾಯಕರ ಕುಟುಂಬಗಳು ತೆರಿಗೆ ಸ್ವರ್ಗ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿವೆ ಎಂದು ಅಂತಾ ರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ ವರದಿ ಮಾಡಿತ್ತು. ಅದರಲ್ಲಿ ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್ ಕುಟುಂಬಸ್ಥರ ಹೆಸರೂ ಇತ್ತು. 2016ರ ಆ.30ರಂದು ಪಾಕಿಸ್ತಾನ್‌ ತೆಹ್ರಿಕ್‌-ಇ-ಇನ್ಸಾಫ್ ಪಕ್ಷದ ನಾಯಕ ಇಮ್ರಾನ್‌ ಖಾನ್‌ ಸುಪ್ರೀಂ ಕೋರ್ಟಲ್ಲಿ ಕೇಸು ದಾಖಲಿಸಿದ್ದರು. 

ಸತ್ಯ ಹೇಳಿದ್ದಕ್ಕೆ ಪಾಕಿಸ್ತಾನೀಯ ರನ್ನು ಕಠಿಣ ಸರಳು ಗಳಿಂದ ಬಂಧಿಸಲಾಗಿದೆ. ಅವರನ್ನು ಅದರಿಂದ ಮುಕ್ತ ಗೊಳಿಸು ವವರೆಗೂ ನನ್ನ ಹೋರಾಟ ಮುಂದು ವರಿಯುತ್ತದೆ.
ನವಾಜ್‌ ಷರೀಫ್, ಮಾಜಿ ಪ್ರಧಾನಿ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.