ನವಾಜ್‌ ಶರೀಫ್, ಪುತ್ರಿ ಬಂಧನ


Team Udayavani, Jul 14, 2018, 6:00 AM IST

m-19.jpg

ಲಾಹೋರ್‌/ಪೇಶಾವರ: ಸಂಸತ್‌ ಚುನಾವಣೆಯ ಹೊಸ್ತಿಲಲ್ಲಿರುವ ಪಾಕಿಸ್ಥಾನದಲ್ಲಿ ಶುಕ್ರವಾರ ಹೈಡ್ರಾಮಾ ನಡೆದಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್‌ ಶರೀಫ್, ಅವರ ಪುತ್ರಿ ಮರ್ಯಮ್‌ ಅವರನ್ನು ಬಂಧಿಸಲಾಗಿದೆ. ಲಂಡನ್‌ನಿಂದ ಅಬುಧಾಬಿ ಮೂಲಕ ವಿಮಾನದಲ್ಲಿ ಲಾಹೋರ್‌ಗೆ ಬಂದಿಳಿದ ತತ್‌ಕ್ಷಣವೇ ಅವರನ್ನು ಬಂಧಿಸಿ, ಹೆಲಿ ಕಾಪ್ಟರ್‌ ಮೂಲಕ ಇಸ್ಲಾಮಾಬಾದ್‌ಗೆ ಕರೆದೊಯ್ದು, ಅಲ್ಲಿಂದ ರಾವಲ್ಪಿಂಡಿ ಸಮೀಪದ ಪಟ್ಟಣ ಅಡಿಯಾಲದಲ್ಲಿರುವ ಜೈಲಿಗೆ ಕರೆದೊಯ್ಯಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಲಾಹೋರ್‌, ಇಸ್ಲಾಮಾಬಾದ್‌ ಏರ್‌ಪೋರ್ಟ್‌ಗೆ ತೆರಳುವ ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಲಾಗಿತ್ತು.

ಶರೀಫ್ ಶುಕ್ರವಾರ ಸಂಜೆ 6 ಗಂಟೆಗೆ ಲಾಹೋರ್‌ಗೆ ಆಗಮಿಸಬೇಕಾಗಿತ್ತು. ನಿಗ ದಿತ ಸಮಯಕ್ಕಿಂತ ಎರಡೂವರೆ ಗಂಟೆ ವಿಳಂಬದ ಬಳಿಕ ವಿಮಾನ  6 ಗಂಟೆಗೆ ಅಬಧಾಬಿಯಿಂದ ಟೇಕಾಫ್ ಆಯಿತು. ಎತಿಹಾದ್‌ ಏರ್‌ವೇಸ್ ವಿಮಾನದ ಮೂಲಕ ಅವರು ಲಾಹೋರ್‌ ವಿಮಾನ ನಿಲ್ದಾಣಕ್ಕೆ 8.48ಕ್ಕೆ ಆಗಮಿಸಿದರು. ಪ್ರಯಾಣಕ್ಕೆ ಮುನ್ನ ಅಬುದಾಭಿ ವಿಮಾನ ನಿಲ್ದಾಣದಲ್ಲಿ ಬಿಬಿಸಿ ಜತೆಗೆ ಮಾತನಾಡಿದ ಶರೀಫ್,  ನಮ್ಮ ದೇಶದಲ್ಲಿ ಪಕ್ಷದ ಕಾರ್ಯಕರ್ತರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅನುಸರಿಸಲಾಗುತ್ತಿದೆ. ಇಂಥ ಕ್ರಮ ಕೈಗೊಳ್ಳುತ್ತಿ ರುವ ಸಂದರ್ಭದಲ್ಲಿಯೇ ನಡೆಯುತ್ತಿರುವ ಚುನಾವಣ ಪ್ರಕ್ರಿಯೆ ಮೇಲೆ ನಂಬಿಕೆ ಇರಿಸಬಹುದೇ? ಎಂದು ಪ್ರಶ್ನಿಸಿದ್ದಾರೆ.

ಮೊಬೈಲ್‌, ಇಂಟರ್‌ನೆಟ್‌  ಬಂದ್‌: ಪಾಕಿಸ್ಥಾನದಾದ್ಯಂತ ಮೊಬೈಲ್‌ ಇಂಟರ್ನೆಂಟ್‌ ಸೇವೆ ಸ್ಥಗಿತಗೊಳಿಸ ಲಾಗಿದೆ. ಪಂಜಾಬ್‌ ಪ್ರಾಂತ್ಯ ಸರಕಾರ ಪಿಎಂಎಲ್‌-ಎನ್‌ ನಾಯಕರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಂತೆ ನಿಷೇಧ ಹೇರಿದೆ. 

10 ಸಾವಿರ ಪೊಲೀಸರು:
ಲಾಹೋರ್‌ ಮತ್ತು ಇಸ್ಲಾಮಾ ಬಾದ್‌ನಲ್ಲಿ ಭದ್ರತೆಗಾಗಿ ಹತ್ತು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಶುಕ್ರವಾರ ಒಂದೇ ದಿನ ಲಾಹೋರ್‌ನಲ್ಲಿ 378ಕ್ಕೂ ಅಧಿಕ ಮಂದಿ ನವಾಜ್‌ ಶರೀಫ್ ಬೆಂಬಲಿಗರನ್ನು ಬಂಧಿಸಲಾಗಿದೆ. ಗುರುವಾರ ಪಾಕಿಸ್ಥಾನದಾದ್ಯಂತ ನಡೆಸಿದ್ದ ಕಾರ್ಯಾಚರಣೆಯಲ್ಲಿ 500ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು.

ಬೆಂಬಲವಾಗಿ ನಿಲ್ಲಿ:
ಪಾಕಿಸ್ಥಾನದ ಭವಿಷ್ಯ ಬದಲಾಯಿ ಸುವ ನಿಟ್ಟಿನಲ್ಲಿ ಬೆಂಬಲ ನೀಡಿ ಎಂದು ಶರೀಫ್ ತಮ್ಮ ಪಕ್ಷ ಪಾಕಿಸ್ಥಾನ ಮುಸ್ಲಿಂ ಲೀಗ್‌-ನವಾಜ್‌ (ಪಿಎಂಎಲ್‌-ಎನ್‌)ನ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ. “ಪಾಕಿಸ್ಥಾನ ಈಗ ಕವಲು ದಾರಿಯಲ್ಲಿದೆ’ ಎಂದು ಅವರು ಅಬುಧಾಬಿಯಿಂದ ಕಳುಹಿಸಿರುವ ವೀಡಿಯೋ ಸಂದೇಶದಲ್ಲಿ ಹೇಳಿ ಕೊಂಡಿದ್ದಾರೆ.  “ನನಗೆ ಏನು ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿದ್ದೇನೆ. ಹತ್ತು ವರ್ಷ ಜೈಲು ಶಿಕ್ಷೆಯಾಗಿರುವುದೂ ಗಮನಕ್ಕೆ ಬಂದಿದೆ. ಸ್ವದೇಶಕ್ಕೆ ಬಂದ ಕೂಡಲೇ ಜೈಲಿಗೆ ತೆರಳಲಿದ್ದೇನೆ. ಪಾಕಿಸ್ಥಾನಿ ಯರಿಗಾಗಿ ಈ ಎಲ್ಲವನ್ನೂ ಮಾಡುತ್ತಿದ್ದೇನೆ ತಿಳಿಯಿರಿ’ ಎಂದು ಹೇಳಿದ್ದಾರೆ.

ಮೊಮ್ಮಕ್ಕಳ ಬಂಧನ:
ಲಂಡನ್‌ನಲ್ಲಿ ಶರೀಫ್ರ ಇಬ್ಬರು ಮೊಮ್ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಪಿಎಂ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರ ಜತೆಗೆ ಗಲಾಟೆ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ.

ಬಾಂಬ್‌ ದಾಳಿಗೆ 90 ಬಲಿ
ಈ ಎಲ್ಲ ಬೆಳವಣಿಗೆಗಳ ನಡು ವೆಯೇ ಪಾಕಿಸ್ಥಾನದ 2 ಸ್ಥಳಗಳಲ್ಲಿ ಚುನಾವಣ ಪ್ರಚಾರ ಭಾಷಣ ನಡೆಯುತ್ತಿರುವ ಸಂದರ್ಭ ಪ್ರತ್ಯೇಕ ಬಾಂಬ್‌ ದಾಳಿಗಳು ನಡೆದಿವೆ. ಅದರಲ್ಲಿ ಒಟ್ಟು 90 ಮಂದಿ ಅಸುನೀಗಿ, 150ಕ್ಕೂ ಅಧಿಕ ಮಂದಿ ಗಾಯ ಗೊಂಡಿದ್ದಾರೆ. ಬಲೂಚಿಸ್ಥಾನದ ಮಸ್ತಂಗ್‌ನಲ್ಲಿ ನಡೆದ ಸ್ಫೋಟದಲ್ಲಿ ಬಲೂಚಿಸ್ಥಾನ ಅವಾಮಿ ಪಾರ್ಟಿ (ಬಿಎಪಿ) ನಾಯಕ ಸಿರಾಜ್‌ ರೈಸಾನಿ ಸಹಿತ 85 ಮಂದಿ ಅಸುನೀಗಿದ್ದಾರೆ. ಈ ಘಟನೆಯಲ್ಲಿ  150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.