ಪಾಕ್‌ನಲ್ಲಿ ಖಾನ್‌ ದಾನ್‌ 


Team Udayavani, Jul 27, 2018, 6:00 AM IST

43.jpg

ಇಸ್ಲಾಮಾಬಾದ್‌: ಪಾಕಿಸ್ಥಾನದ ಕ್ರಿಕೆಟ್‌ ತಂಡದ ಕಪ್ತಾನರಾಗಿದ್ದ ಇಮ್ರಾನ್‌ ಖಾನ್‌ ಅವರು 22 ವರ್ಷಗಳ ಹೋರಾಟದ ಬಳಿಕ ಬಿರುಸು ರಾಜಕೀಯ ಬ್ಯಾಟಿಂಗ್‌ನೊಂದಿಗೆ ಪಾಕಿಸ್ಥಾನದ ಕಪ್ತಾನರಾಗಲು ಸಜ್ಜಾಗಿದ್ದಾರೆ. ಆದರೆ ಇಮ್ರಾನ್‌ ಪಕ್ಷಕ್ಕೆ ಪೂರ್ಣ ಬಹುಮತ ಸಿಗದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಗದ್ದುಗೆಯೇರಲು ಸಣ್ಣ ಪಕ್ಷಗಳು “ರನ್ನರ್‌’ ಆಗಿ ನೆರವಾಗಬೇಕಾಗಿದೆ.

ಪಾಕಿಸ್ಥಾನ ರಾಷ್ಟ್ರೀಯ ಅಸೆಂಬ್ಲಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌ ಅವರ ಪಾಕಿಸ್ಥಾನ ತೆಹ್ರೀಕ್‌ ಇ- ಇನ್ಸಾಫ್ (ಪಿಟಿಐ) ಪಕ್ಷವು 117 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. 272 ಸದಸ್ಯ ಬಲದ ಪಾಕಿಸ್ಥಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಬಹುಮತಕ್ಕೆ 137 ಸ್ಥಾನ ಬೇಕಾಗಿದೆ. ಖಾನ್‌ ಪಕ್ಷಕ್ಕೆ ಪೂರ್ಣ ಬಹುಮತ ದೊರೆಯದೇ ಇದ್ದರೂ ಇತರ ಪ್ರಮುಖ ಪಕ್ಷಗಳಿಗಿಂತ ಭಾರೀ ಮುನ್ನಡೆ ಸಾಧಿಸಿದೆ. ಐದು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಇಮ್ರಾನ್‌ ಖಾನ್‌ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದಾರೆ. ಈ ಸಾಧನೆಗೈದ ಮೊದಲ ನಾಯಕ ಎಂಬ ಹೆಗ್ಗಳಿಕೆಯನ್ನೂ ಅವರು ಗಳಿಸಿಕೊಂಡಿದ್ದಾರೆ. ಪಂಜಾಬ್‌ ಪ್ರಾಂತ್ಯದ ರಾಜಧಾನಿ, ಪಾಕಿಸ್ಥಾನದ ರಾಜಕೀಯ ಕೇಂದ್ರ ಲಾಹೋರ್‌ನಲ್ಲಿ ಇಮ್ರಾನ್‌ ಪಕ್ಷದ ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಪಕ್ಷದ ಧ್ವಜ ಹಾಗೂ ಸ್ಲೋಗನ್‌ಗಳೊಂದಿಗೆ ಕುಣಿದು ಕುಪ್ಪಳಿಸುತ್ತಾ ಗೆಲುವನ್ನು  ಸಂಭ್ರಮಿಸಿದರು. ನವಾಜ್‌ ಷರೀಫ್ ಅವರ ಅಧಿಕಾರರೂಢ ಪಕ್ಷವಾದ ಪಾಕಿಸ್ಥಾನ ಮುಸ್ಲಿಂ ಲೀಗ್‌- ನವಾಜ್‌ (ಪಿಎಂಎಲ್ಎನ್‌) ಕೇವಲ 60 ಸ್ಥಾನಗಳನ್ನಷ್ಟೇಗಳಿಸಿದೆ. ಬಿಲಾವಲ್‌ ಭುಟ್ಟೋ ಜರ್ದಾರಿ ನೇತೃತ್ವದ ಪಾಕಿಸ್ಥಾನ ಪೀಪಲ್ಸ್‌ ಪಾರ್ಟಿ (ಪಿಪಿ ಪಿ) 39 ಸ್ಥಾನಗಳಲ್ಲಷ್ಟೇ ಜಯ ಸಾಧಿಸಿದೆ.

ವಿಪಕ್ಷಗಳ ಚುನಾವಣ ಅಕ್ರಮ ಆರೋಪಗಳ ಮಧ್ಯೆಯೇ ಮತ ಎಣಿಕೆ ಕಾರ್ಯ ನಡೆದಿದ್ದು, ಗುರುವಾರ ನಸುಕಿನ ಜಾವ 4ಕ್ಕೆ ಮೊದಲ ಫ‌ಲಿತಾಂಶ ಹೊರ ಬಿದ್ದಿದೆ. ಮತ ಪತ್ರಗಳ ಮೂಲಕ ಚುನಾವಣೆ ನಡೆದಿದ್ದು, ಬುಧವಾರ ಸಂಜೆ ಆರಂಭವಾಗಿದ್ದ ಮತ ಎಣಿಕೆ ಕಾರ್ಯ ಗುರುವಾರ ರಾತ್ರಿಯವರೆಗೂ ಮುಂದುವರಿದಿತ್ತು.

ಪಾಕಿಸ್ಥಾನ ರಾಷ್ಟ್ರೀಯ ಅಸೆಂಬ್ಲಿಯ ಒಟ್ಟು ಬಲ 342. ಆದರೆ ಇದರಲ್ಲಿ ನೇರ ಚುನಾವಣೆ ನಡೆಯುವುದು 272 ಸ್ಥಾನಗಳಿಗೆ ಮಾತ್ರ. ಉಳಿದಂತೆ 60 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದ್ದರೆ, 10 ಸ್ಥಾನಗಳು ಅಲ್ಪಸಂಖ್ಯಾಕ ಸಮುದಾಯಗಳಿಗೆ ಮೀಸಲಾಗಿವೆ. ಈ 70 ಸದಸ್ಯರನ್ನು ಬಳಿಕ ಪಕ್ಷಗಳ ಸಂಖ್ಯಾ ಬಲದ ಅನುಪಾತದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪ್ರಾಂತ್ಯಗಳಲ್ಲಿ ಭಿನ್ನ ಫ‌ಲಿತಾಂಶ: ರಾಷ್ಟ್ರೀಯ ಅಸೆಂಬ್ಲಿಯ ಜತೆಗೆ ನಾಲ್ಕು ಪ್ರಾಂತ್ಯಗಳಿಗೂ ಚುನಾವಣೆ ನಡೆದಿದ್ದು, ಅವುಗಳಲ್ಲಿ ಭಿನ್ನ ಫ‌ಲಿತಾಂಶ ಹೊರಬಿದ್ದಿದೆ. ಪಂಜಾಬ್‌ ಪ್ರಾಂತ್ಯದಲ್ಲಿ ಪಿಟಿಐ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಆದರೆ ಪಿಎಂಎಲ್‌ಎನ್‌ ನಿಕಟ ಪೈಪೋಟಿ ನೀಡಿದೆ. ಸಿಂಧ್‌ ಪ್ರಾಂತ್ಯದಲ್ಲಿ ಪಿಪಿಪಿ ಮೂರನೇ ಎರಡು ಬಹುಮತ ಗಳಿಸಿಕೊಂಡಿದೆ. ಖೈಬರ್‌ ಪಾಖು¤ಕ್ವಾ ಪ್ರಾಂತ್ಯದಲ್ಲಿ ಪಿಟಿಐ ಮೂರನೇ ಎರಡರಷ್ಟು ಬಹುಮತಗಳಿಸಿದೆ. ಬಲೂಚಿ ಸ್ಥಾನ ಪ್ರಾಂತ್ಯದಲ್ಲಿ ಅತಂತ್ರ ಫ‌ಲಿತಾಂಶ ಹೊರ ಬಿದ್ದಿದ್ದು, ಬಲೂಚಿಸ್ಥಾನ ಅವಾಮಿ ಲೀಗ್‌ ಅತೀ ದೊಡ್ಡ ಪಕ್ಷವಾಗಿದೆ.

ಚುನಾವಣಾ ಅಕ್ರಮ: ಆರೋಪ
ಇಮ್ರಾನ್‌ ಪಕ್ಷ ಮುನ್ನಡೆ ಸಾಧಿಸುತ್ತಿದ್ದಂತೆ ಉಳಿದ ಎರಡು ಪ್ರಮುಖ ಪಕ್ಷಗಳಾದ ಪಿಎಂಎಲ್‌-ಎನ್‌ ಹಾಗೂ ಪಿಪಿಪಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಮತ ಎಣಿಕೆ ಕಾರ್ಯ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ದೂರಿವೆ. ವಿಪಕ್ಷಗಳಿಗೆ ತಿರುಗೇಟು ನೀಡಿರುವ ಇಮ್ರಾನ್‌ ಖಾನ್‌, ಮತಗಳ ಮರು ಎಣಿಕೆಗೆ ತಾವು ಸಿದ್ಧ ಎಂದು ಸವಾಲು ಹಾಕಿದ್ದಾರೆ. ಈ ಮಧ್ಯೆ ಪಾಕ್‌ ಚುನಾವಣ ಆಯುಕ್ತರು ಮುಂಜಾವ 4 ಗಂಟೆಗೆ ವಿಶೇಷ ಪತ್ರಿಕಾಗೋಷ್ಠಿ ಕರೆದು ಅಕ್ರಮ ಆರೋಪವನ್ನು ತಿರಸ್ಕರಿಸಿದ್ದಾರೆ.

ಭಾರ ತ ದತ್ತ ಸ್ನೇಹಹಸ್ತ: ಭಾರತದೊಂದಿಗೆ ನಾನು ಉತ್ತಮ ಬಾಂಧವ್ಯ ಬಯಸುತ್ತೇನೆ. ಈ ನಿಟ್ಟಿನಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಇಟ್ಟರೆ, ಪಾಕಿಸ್ಥಾನ ಎರಡು ಹೆಜ್ಜೆ ಇಡಲಿದೆ ಎಂದು ಪಾಕಿಸ್ಥಾನದ ಭಾವಿ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ. ಭಾರತದೊಂದಿಗಿನ ಅತೀ ದೊಡ್ಡ ವಿವಾದವೇ ಕಾಶ್ಮೀರ ಕುರಿತದ್ದಾಗಿದೆ. ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಅದು ನಿಲ್ಲಬೇಕಿದೆ ಎಂದ ಅವರು, ಎರಡೂ ದೇಶಗಳು ಪರಸ್ಪರ ದೂರುವುದನ್ನು ನಿಲ್ಲಿಸಬೇಕು ಎಂದೂ ಅಭಿಪ್ರಾಯಪಟ್ಟರು.

ಉಗ್ರರಿಗೆ ತಿರಸ್ಕಾರ: ಪಾಕ್‌ ಜನರು ತೀವ್ರಗಾಮಿ ಹಾಗೂ ಉಗ್ರಗಾಮಿ ಸಂಘಟನೆ ಗಳನ್ನು ತಿರಸ್ಕರಿಸಿದ್ದಾರೆ.

ಭಾರತದ ಮೇಲೆ ಸಂಭಾವ್ಯ ಪರಿಣಾಮ
1 ಜಾಗತಿಕ ಉಗ್ರ ಸಂಘಟನೆಗಳ ಜತೆಗಿನ ಇಮ್ರಾನ್‌ ಗೆಳೆತನ ಭಾರತಕ್ಕೆ ಮಾರಕ.

2 ಪಕ್ಕಾ ಇಸ್ಲಾಂ ಧರ್ಮಿಷ್ಟ ಎಂಬ ಇಮೇಜ್‌ ಬೆಳೆಸಿಕೊಂಡಿರುವುದರಿಂದ ಭಾರತದ ಜತೆಗೆ ಸಂಬಂಧ ಸುಧಾರಣೆ ಕಷ್ಟ ಸಾಧ್ಯವಾಗಬಹುದು.

3 ಪಾಕಿಸ್ಥಾನ ಸೇನೆ ಜತೆಗಿನ ಖಾನ್‌ ನಂಟು ಭಾರತವನ್ನು ಸದಾ ಎಚ್ಚರಿಕೆಯಲ್ಲಿ ಇಡು ವಂತೆ ಮಾಡುತ್ತದೆ.

4 ಕಾಶ್ಮೀರ ಬಿಕ್ಕಟ್ಟು ಬಗೆಹರಿಯಲು ಸೇನಾ ಮಾರ್ಗವೇ ಸೂಕ್ತ ಎಂಬಂಥ ಇಮ್ರಾನ್‌ ನಿಲುವು ಭಾರತ ಎಂದಿಗೂ ಒಪ್ಪಿಕೊಳ್ಳುವಂಥದ್ದಲ್ಲ.

5 ಇಷ್ಟರ ನಡುವೆಯೂ ಮೂಲತಃ ಕ್ರಿಕೆಟ್‌ ತಾರೆ ಇಮ್ರಾನ್‌ ಭಾರತದಲ್ಲಿ ಹೊಂದಿರುವ ಗೆಳೆತನಗಳು ಬಾಂಧವ್ಯ ವೃದ್ಧಿಗೆ ಪೂರಕವಾಗಬಹುದು.

ಅಧಿಕಾರಾರೂಢರಿಗೆ ಹಾಗೂ ಸಾಮಾನ್ಯ ನಾಗರಿಕರಿಗೆ ಪ್ರತ್ಯೇಕ ವ್ಯವಸ್ಥೆ  ಇರುವುದೇ ಇಂದು ಪಾಕಿಸ್ಥಾನ ಹಿಂದುಳಿಯಲು ಮುಖ್ಯ ಕಾರಣ. ವಿಐಪಿ ಸಂಸ್ಕೃತಿ ಕೊನೆಗಾಣಿಸುತ್ತೇನೆ. ಈಗಿನ ಪ್ರಧಾನಿ ನಿವಾಸವನ್ನು ಶಿಕ್ಷಣ ಸಂಸ್ಥೆಯಾಗಿಸುವೆ. ನನ್ನನ್ನೂ ಸೇರಿದಂತೆ ಸರಕಾರವನ್ನು ಉತ್ತರದಾಯಿತ್ವಕ್ಕೆ ಒಳಪಡಿಸುತ್ತೇನೆ. ಆಡಳಿತದಲ್ಲಿ ಸುಧಾರಣೆ ತಂದು ಆರ್ಥಿಕ ಸವಾಲನ್ನು ನೀಗಿಸುತ್ತೇನೆ.
-ಇಮ್ರಾನ್‌ ಖಾನ್‌, ಭಾವಿ ಪಾಕ್‌ ಪ್ರಧಾನಿ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.