ಬಹುಮುಖಿ ಸಂಪರ್ಕಕ್ಕೆ ಒತ್ತು ಎಂದ ಮೋದಿ
Team Udayavani, Aug 31, 2018, 6:00 AM IST
ಕಠ್ಮಂಡು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ “ಬಿಮ್ಸ್ಟೆಕ್’ ಸದಸ್ಯ ದೇಶಗಳೊಂದಿಗೆ ಭಾರತವು ಬಹುಮುಖಿ ಸಂಪರ್ಕವನ್ನು ವೃದ್ಧಿಸಲು ಹೆಚ್ಚಿನ ಆದ್ಯತೆ ನೀಡುತ್ತದಲ್ಲದೆ, ಉಗ್ರವಾದ ಹಾಗೂ ಮಾದಕ ವಸ್ತುಗಳಂಥ ಅಪಾಯಕಾರಿ ಸಮಸ್ಯೆಗಳ ವಿರುದ್ಧ ಹೋರಾಡಲು ಬಿಮ್ಸ್ಟೆಕ್ ಸದಸ್ಯ ರಾಷ್ಟ್ರಗಳೊಂದಿಗೆ ಕೈಜೋಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್, ಶ್ರೀಲಂಕಾ, ಥಾಯ್ಲೆಂಡ್, ಭೂತಾನ್ ಹಾಗೂ ನೇಪಾಳ ರಾಷ್ಟ್ರಗಳು, ತಾವಿರುವ ವಲಯ ಮಟ್ಟದಲ್ಲಿ ಪರಸ್ಪರ ಸಹಕಾರ ಹಾಗೂ ಅಭಿವೃದ್ಧಿಗಾಗಿ ಅಸ್ತಿತ್ವಕ್ಕೆ ತಂದಿರುವ “ಬಿಮ್ಸ್ಟೆಕ್’ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, “ಪೂರ್ವಾತ್ಯ ರಾಷ್ಟ್ರಗಳ ನಿಯಮಗಳನ್ನು ಪರಸ್ಪರ ಅರ್ಥ ಮಾಡಿಕೊಂಡು ಮುನ್ನಡೆಯಲು ಈ ವೇದಿಕೆ ಸಹಕಾರಿಯಾಗಿದೆ. ಬಿಮ್ಸ್ಟೆಕ್ ಅಸ್ತಿತ್ವವು ಭಾರತ “ನೆರೆ ದೇಶಗಳಿಗೆ ಮೊದಲ ಆದ್ಯತೆ’ ಎಂಬ ಧೋರಣೆಗೆ ಮತ್ತಷ್ಟು ಇಂಬು ನೀಡುತ್ತದೆ. ಬಿಮ್ ಸ್ಟೆಕ್ನ ಯಾವುದೇ ಸದಸ್ಯ ರಾಷ್ಟ್ರವು ಭಯೋತ್ಪಾದನೆ ಹಾಗೂ ಮಾದಕ ವಸ್ತುಗಳ ಜಾಲದಿಂದ ಮುಕ್ತವಾಗಿಲ್ಲ. ಇಂಥ ಅಪಾಯಕಾರಿ ಸಮಸ್ಯೆಗಳ ವಿರುದ್ಧ ವಲಯ ಮಟ್ಟದಲ್ಲಿ ಹೋರಾಡಲು ಭಾರತ ಎಲ್ಲಾ ಸದಸ್ಯ ರಾಷ್ಟ್ರಗಳಿಗೂ ಬೆಂಬಲ ನೀಡುತ್ತದೆ” ಎಂದು ಆಶ್ವಾಸನೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಾಯಕರ ಜತೆ ಅವರು ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್