ತೀವ್ರಗೊಂಡ ಬಿಕ್ಕಟ್ಟು; ದ್ವೀಪವಾಗಲಿದೆಯೇ ಕತಾರ್‌?


Team Udayavani, Sep 2, 2018, 6:00 AM IST

23.jpg

ರಿಯಾದ್‌: ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿ ಈಗಾಗಲೇ ಕತಾರ್‌ ಅನ್ನು ರಾಜತಾಂತ್ರಿಕವಾಗಿ ದ್ವೀಪವಾಗಿಸಿರುವ ಗಲ್ಫ್ ರಾಷ್ಟ್ರಗಳು ಈಗ ಕತಾರನ್ನು ಅಕ್ಷರಶಃ ದ್ವೀಪವಾಗಿಸಲು ಚಿಂತನೆ ನಡೆಸಿವೆ. ಸೌದಿ ಅರೇಬಿಯಾದೊಂದಿಗೆ ಕತಾರ್‌ ಭೂಗಡಿ ಹಂಚಿಕೊಂಡಿದ್ದು, ಈ ಗಡಿ ಗುಂಟ ಬೃಹತ್‌ ನಾಲೆ ನಿರ್ಮಿಸಲು ಸೌದಿ ಅರೇಬಿಯಾ ಯೋಜನೆ ರೂಪಿಸಿದೆ. ಇದು ಪೂರ್ಣಗೊಂಡರೆ ಇಡೀ ಕತಾರ್‌ ಸಂಪೂರ್ಣವಾಗಿ ದ್ವೀಪರಾಷ್ಟ್ರವಾಗಲಿದೆ. ಇದನ್ನು ಸಾಲ್ವಾ ಐಲ್ಯಾಂಡ್‌ ಪ್ರಾಜೆಕ್ಟ್ ಎಂದು ಕರೆಯಲಾಗಿದ್ದು, ಈ ಯೋಜನೆಯನ್ನು ಪರಿಗಣಿಸುತ್ತಿರುವ ಬಗ್ಗೆ ಟ್ವಿಟರ್‌ನಲ್ಲಿ ಸೌದಿ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ಗೆ ಹಿರಿಯ ಸಲಹೆಗಾರರಾಗಿರುವ ಸೌದ್‌ ಅಲ್‌ ಖತಾನಿ ಹೇಳಿದ್ದಾರೆ.

ಟೆಂಡರ್‌ ಪ್ರಕ್ರಿಯೆಯೂ ಆರಂಭ: ಇದು 60 ಮೈಲು ಉದ್ದದ ನಾಲೆಯಾಗಿರಲಿದ್ದು, 200 ಮೀಟರ ಅಗಲ ಇರಲಿದೆ. 4 ಸಾವಿರ ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಇದರ ಒಂದು ಭಾಗವನ್ನು ಪರಮಾಣು ತ್ಯಾಜ್ಯವನ್ನು ಸುರಿಯುವುದಕ್ಕೆಂದೇ ಮೀಸಲಿಡಲಾಗುತ್ತದೆ. ಕಳೆದ ಜೂನ್‌ನಲ್ಲೇ ಈ ಬಗ್ಗೆ ಟೆಂಡರ್‌ ಆಹ್ವಾನಿಸಲಾಗಿದ್ದು, ನಾಲೆ ನಿರ್ಮಾಣದಲ್ಲಿ ಪರಿಣಿತಿ ಇರುವ ಐದು ಕಂಪನಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಂದು ಕಂಪನಿಗೆ ಈ ತಿಂಗಳಲ್ಲೇ ಯೋಜನೆ ಅನುಮೋದಿಸಲಾಗುತ್ತದೆ. ಸದ್ಯ ಸೌದಿ ಅರೇಬಿಯಾದ ರಾಜ ಮನೆತನವಾಗಲೀ ಅಥವಾ ಕತಾರ್‌ನ ಅಧಿಕಾರಿಗಳಾಗಲೀ ಈ ಯೋಜನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಏನಿದು ಬಿಕ್ಕಟ್ಟು?
ಭಯೋತ್ಪಾದಕರನ್ನು ಪೋಷಿಸುತ್ತಿದೆ ಎಂಬ ಆರೋಪ ಕತಾರ್‌ ಮೇಲಿದೆ. ಉಗ್ರರಿಗೆ ನೆರವು ನೀಡುವುದನ್ನು ಸ್ಥಗಿತಗೊಳಿಸುವಂತೆ ಎಷ್ಟೇ ಹೇಳಿದರೂ ಕತಾರ್‌ ಅದಕ್ಕೆ ಸೊಪ್ಪು ಹಾಕಿರಲಿಲ್ಲ. ಇದುವೇ ಗಲ್ಫ್ ರಾಷ್ಟ್ರಗಳ ಸಿಟ್ಟಿಗೆ ಕಾರಣ. ಹೀಗಾಗಿ ಕತಾರ್‌ ಅನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಗಲ್ಫ್ ರಾಷ್ಟ್ರಗಳು ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಕಳೆದ ವರ್ಷದಿಂದ ಕತಾರ್‌ ಹಾಗೂ ಸೌದಿ ಅರೇಬಿಯಾದ ಗಡಿ ಮುಚ್ಚಲಾಗಿತ್ತು. ಕತಾರ್‌ನಿಂದ ಸೌದಿ ಅರೇಬಿಯಾಗೆ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿತ್ತು. ಅಷ್ಟೇ ಅಲ್ಲ, ಕತಾರ್‌ ವಿಮಾನಯಾನ ಕಂಪನಿಗಳು ವಿದೇಶದಲ್ಲಿ ಇಳಿಯುವಂತೆಯೂ ಇಲ್ಲ. ಕತಾರ್‌ ಏರ್‌ಲೈನ್ಸ್‌ಗೆ ಗಲ್ಫ್ ರಾಷ್ಟ್ರಗಳು ನಿಷೇಧ ಹೇರಿವೆ. ಜೊತೆಗೆ ಅಲ್ಲಿನ ನಾಗರಿಕರು ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ಆಗಮಿಸುವಂತೆಯೂ ಇಲ್ಲ. ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಬಹೆನ್‌ ಹಾಗೂ ಈಜಿಪ್ಟ್ಗಳು ಕತಾರ್‌ ಜೊತೆಗಿನ ಎಲ್ಲ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಕಡಿದುಕೊಂಡಿವೆ. ಕೆಲವು ದಿನಗಳ ಹಿಂದೆ ಕುವೈತ್‌ ಹಾಗೂ ಅಮೆರಿಕ ಸೇರಿ ರಾಜಿ ಪ್ರಯತ್ನಗಳನ್ನು ಮಾಡಿವೆಯಾದರೂ ಈವರೆಗೂ ಯಾವುದೇ ಫ‌ಲಿತಾಂಶ ಕಂಡುಬಂದಿಲ್ಲ. ಹೀಗಾಗಿ ಬಿಕ್ಕಟ್ಟು ಇನ್ನಷ್ಟು ದೊಡ್ಡದಾಗುತ್ತಲೇ ಸಾಗಿದೆ.

ಯೋಜನೆಯ ಹೆಸರು: ಸಾಲ್ವಾ ಐಲ್ಯಾಂಡ್‌ ಪ್ರಾಜೆಕ್ಟ್
60 ಮೈಲು ನಾಲೆಯ ಉದ್ದ
200 ಮೀ. ಅಗಲ
4,000 ಕೋಟಿ ರೂ. ನಿರ್ಮಾಣಕ್ಕೆ ತಗಲುವ ವೆಚ್ಚ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.