ಹಿಂದೂ ಪದವನ್ನೇ ಅಸ್ಪೃಶ್ಯ ಎಂಬಂತೆ ಬಿಂಬಿಸಲಾಗುತ್ತಿದೆ
Team Udayavani, Sep 11, 2018, 10:09 AM IST
ಶಿಕಾಗೋ: “”ಕೆಲವರು ಹಿಂದೂ ಪದವನ್ನೇ “ಅಸ್ಪೃಶ್ಯ’ ಮತ್ತು “ಅಸಹನೀಯ’ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಶಿಕಾಗೋದಲ್ಲಿ ನಡೆದ ವಿಶ್ವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿರುವ ಅವರು, “”ಸ್ವಾಮಿ ವಿವೇಕಾನಂದರಂಥ ಸಂತರು ಕಲಿಸಿದ ಹಿಂದುತ್ವದ ನೈಜ ಮೌಲ್ಯಗಳನ್ನು ಸಂರಕ್ಷಿಸುವ ಅಗತ್ಯತೆ ತುಂಬಾ ಇದೆ. ವಿವೇಕಾನಂದರದ್ದು ನಿಜವಾದ ಹಿಂದೂ ಪ್ರೇಮ. ಹಿಂದೂ ಧರ್ಮ ಸಂರಕ್ಷಣೆಯಲ್ಲಿ ಅವರದ್ದು ಮೇರು ಕೊಡುಗೆ” ಎಂದು ಗುಣಗಾನ ಮಾಡಿದರು.
1983ರಂದು ಸ್ವಾಮಿ ವಿವೇಕಾನಂದರು ಮಾಡಿದ ಭಾಷಣದ ಬಗ್ಗೆಯೂ ಪ್ರಸ್ತಾವಿಸಿದರು.
ಇದೇ ವೇಳೆ, ಇಲಿನಾಯ್ಸ ಗವರ್ನರ್ ಸೆ.11, 2018 ಅನ್ನು “ಸ್ವಾಮಿ ವಿವೇಕಾನಂದ ದಿನ’ ಎಂದು ಘೋಷಿಸಿದರು. ಮುಂದಿನ ವಿಶ್ವ ಹಿಂದೂ ಸಮ್ಮೇಳನ 2022ರ ನವೆಂಬರ್ನಲ್ಲಿ ಬ್ಯಾಂಕಾಕ್ನಲ್ಲಿ ನಡೆಯಲಿದೆ.
ಬೆಳೆಯುತ್ತಿದೆ ಆರ್ಥಿಕತೆ
ಸಮ್ಮೇಳನದಲ್ಲಿ ಮಾತನಾಡಿದ ಮಣಿಪಾಲ್ ಗ್ಲೋಬಲ್ನ ನಿರ್ದೇಶಕ ಮಂಡಳಿ ಮುಖ್ಯಸ್ಥ ಮೋಹನ್ ದಾಸ್ ಪೈ, ಭಾರತ ಆರ್ಥಿಕ ಪ್ರಗತಿ ಕಾಣುತ್ತಿರುವ ದೇಶವಾಗಿದ್ದು, 2.6 ಲಕ್ಷಕೋಟಿ ಡಾಲರ್ನಷ್ಟು ಆರ್ಥಿಕತೆ ಹೊಂದಿದೆ. 2030ರ ವೇಳೆಗೆ ಭಾರತವು 10 ಲಕ್ಷಕೋಟಿ ಡಾಲರ್ನ ಆರ್ಥಿಕತೆಯಾಗಿ ಬೆಳೆಯಲಿದೆ. ಎಲ್ಲರಿಗೂ ಆಹಾರ, ವಸತಿ, ವಿದ್ಯುತ್, ನೀರು, ಆರೋಗ್ಯ ಮುಂತಾದ ಮೂಲಸೌಕರ್ಯಗಳು ಸಿಗಬೇಕು. 2030ರ ವೇಳೆಗೆ ಎಲ್ಲ ಸಮಸ್ಯೆಗಳಿಂದಲೂ ದೇಶ ಮುಕ್ತವಾಗಲಿದೆ ಎಂದರು. ಭಾಷಣದ ಆರಂಭದಲ್ಲಿ “ಎಲ್ಲರಿಗೂ ನಮಸ್ಕಾರಗಳು’ ಎಂದು ಕನ್ನಡದಲ್ಲೇ ಹೇಳಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ