ಹಿಂದೂ ಪದವನ್ನೇ ಅಸ್ಪೃಶ್ಯ ಎಂಬಂತೆ ಬಿಂಬಿಸಲಾಗುತ್ತಿದೆ
Team Udayavani, Sep 11, 2018, 10:09 AM IST
ಶಿಕಾಗೋ: “”ಕೆಲವರು ಹಿಂದೂ ಪದವನ್ನೇ “ಅಸ್ಪೃಶ್ಯ’ ಮತ್ತು “ಅಸಹನೀಯ’ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಶಿಕಾಗೋದಲ್ಲಿ ನಡೆದ ವಿಶ್ವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿರುವ ಅವರು, “”ಸ್ವಾಮಿ ವಿವೇಕಾನಂದರಂಥ ಸಂತರು ಕಲಿಸಿದ ಹಿಂದುತ್ವದ ನೈಜ ಮೌಲ್ಯಗಳನ್ನು ಸಂರಕ್ಷಿಸುವ ಅಗತ್ಯತೆ ತುಂಬಾ ಇದೆ. ವಿವೇಕಾನಂದರದ್ದು ನಿಜವಾದ ಹಿಂದೂ ಪ್ರೇಮ. ಹಿಂದೂ ಧರ್ಮ ಸಂರಕ್ಷಣೆಯಲ್ಲಿ ಅವರದ್ದು ಮೇರು ಕೊಡುಗೆ” ಎಂದು ಗುಣಗಾನ ಮಾಡಿದರು.
1983ರಂದು ಸ್ವಾಮಿ ವಿವೇಕಾನಂದರು ಮಾಡಿದ ಭಾಷಣದ ಬಗ್ಗೆಯೂ ಪ್ರಸ್ತಾವಿಸಿದರು.
ಇದೇ ವೇಳೆ, ಇಲಿನಾಯ್ಸ ಗವರ್ನರ್ ಸೆ.11, 2018 ಅನ್ನು “ಸ್ವಾಮಿ ವಿವೇಕಾನಂದ ದಿನ’ ಎಂದು ಘೋಷಿಸಿದರು. ಮುಂದಿನ ವಿಶ್ವ ಹಿಂದೂ ಸಮ್ಮೇಳನ 2022ರ ನವೆಂಬರ್ನಲ್ಲಿ ಬ್ಯಾಂಕಾಕ್ನಲ್ಲಿ ನಡೆಯಲಿದೆ.
ಬೆಳೆಯುತ್ತಿದೆ ಆರ್ಥಿಕತೆ
ಸಮ್ಮೇಳನದಲ್ಲಿ ಮಾತನಾಡಿದ ಮಣಿಪಾಲ್ ಗ್ಲೋಬಲ್ನ ನಿರ್ದೇಶಕ ಮಂಡಳಿ ಮುಖ್ಯಸ್ಥ ಮೋಹನ್ ದಾಸ್ ಪೈ, ಭಾರತ ಆರ್ಥಿಕ ಪ್ರಗತಿ ಕಾಣುತ್ತಿರುವ ದೇಶವಾಗಿದ್ದು, 2.6 ಲಕ್ಷಕೋಟಿ ಡಾಲರ್ನಷ್ಟು ಆರ್ಥಿಕತೆ ಹೊಂದಿದೆ. 2030ರ ವೇಳೆಗೆ ಭಾರತವು 10 ಲಕ್ಷಕೋಟಿ ಡಾಲರ್ನ ಆರ್ಥಿಕತೆಯಾಗಿ ಬೆಳೆಯಲಿದೆ. ಎಲ್ಲರಿಗೂ ಆಹಾರ, ವಸತಿ, ವಿದ್ಯುತ್, ನೀರು, ಆರೋಗ್ಯ ಮುಂತಾದ ಮೂಲಸೌಕರ್ಯಗಳು ಸಿಗಬೇಕು. 2030ರ ವೇಳೆಗೆ ಎಲ್ಲ ಸಮಸ್ಯೆಗಳಿಂದಲೂ ದೇಶ ಮುಕ್ತವಾಗಲಿದೆ ಎಂದರು. ಭಾಷಣದ ಆರಂಭದಲ್ಲಿ “ಎಲ್ಲರಿಗೂ ನಮಸ್ಕಾರಗಳು’ ಎಂದು ಕನ್ನಡದಲ್ಲೇ ಹೇಳಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ