ದೇಶ ನಡೆಸಲು ದುಡ್ಡಿಲ್ಲ; ದೇವರೇ ಸೃಷ್ಟಿಸಿದ ಬಿಕ್ಕಟ್ಟಿದು: ಇಮ್ರಾನ್
Team Udayavani, Sep 15, 2018, 11:58 AM IST
ಇಸ್ಲಾಮಾಬಾದ್ : ಪಾಕಿಸ್ಥಾನವನ್ನು ನಡೆಸಲು ಪಾಕಿಸ್ಥಾನ್ ತೆಹರೀಕ್ ಎ ಇನ್ಸಾಫ್ (ಪಿಟಿಐ) ಸರಕಾರದ ಬಳಿ ದುಡ್ಡಿಲ್ಲ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಹಿಂದಿನ ಸರಕಾರ ದೇಶದ ಸಂಪತ್ತನ್ನು ಹೆಚ್ಚಿಸುವ ಕೆಲಸ ಮಾಡುವ ಬದಲು ನಷ್ಟ ಉಂಟುಮಾಡುವ ಯೋಜನೆಗಳನ್ನು ಕೈಗೊಂಡು ದೇಶದ ಆರ್ಥಿಕತೆ ಭಾರೀ ಹಾನಿ ಉಂಟುಮಾಡಿದೆ ಎಂದು ಇಮ್ರಾನ್ ಖಾನ್ ಇಸ್ಲಾಮಾಬಾದ್ನಲ್ಲಿ ಸರಕಾರದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಾ ಹೇಳಿದರು.
ದೇಶದ ಜನಸಂಖ್ಯೆಯ ಬಹುಪಾಲು ಜನರು ಯುವಕರಾಗಿದ್ದು ಅವರು ಉದ್ಯೋಗಗಳನ್ನು ಎದುರು ನೋಡುತ್ತಿದ್ದಾರೆ. ದೇಶ ಸಾಧ್ಯವಾದಷ್ಟು ಬೇಗನೆ ಸಾಲದ ಹೊರೆಯಿಂದ ಮುಕ್ತವಾಗಬೇಕಿದೆ; ನಾವು ಮೊದಲು ನಮ್ಮನ್ನು, ಅನಂತರ ನಮ್ಮ ದೇಶವನ್ನು, ಬದಲಿಸಬೇಕಿದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಡಾನ್ ನ್ಯೂಸ್ ವರದಿ ಮಾಡಿದೆ.
ಸರಕಾರ ಜನರ ಹೊಣೆ ವಹಿಸಬೇಕು; ಹಾಗೆಯೇ ಜನರು ಸರಕಾರ ತಮ್ಮದೆಂಬ ಭಾವನೆಯನ್ನು ಬೆಳೆಸಿಕೊಳ್ಳಬೇಕು; ದೇವರೇ ಈ ಬಿಕ್ಕಟ್ಟನ್ನು ಸೃಷ್ಟಿಸಿರಬಹುದು, ಏಕೆಂದರೆ ನಾವು ಬದಲಾಗಬೇಕೆಂದೇ ದೇವರ ಬಯಸಿರಬೇಕು’ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ