ಭಾರತ ಅವಕಾಶ ವ್ಯರ್ಥ ಮಾಡಿತು!;ಪಾಕ್ಗೆ ತೀವ್ರ ನಿರಾಶೆಯಾಗಿದೆಯಂತೆ
Team Udayavani, Sep 22, 2018, 9:34 AM IST
ಇಸ್ಲಮಾಬಾದ್: ಉಭಯ ದೇಶಗಳ ವಿದೇಶಾಂಗ ಸಚಿವರ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು 24 ಗಂಟೆಗಳೊಳಗೆ ರದ್ದು ಮಾಡಿರುವುದು ತೀವ್ರ ನಿರಾಶೆ ತಂದಿಟ್ಟಿದೆ ಎಂದು ಪಾಕಿಸ್ಥಾನ ಹೇಳಿದೆ, ಮಾತ್ರವಲ್ಲದೆ ಮಾತುಕತೆಗೆ ಮನಸ್ಸಿಲ್ಲದ ಭಾರತ ಉತ್ತಮ ಅವಕಾಶ ವ್ಯರ್ಥ ಮಾಡಿಕೊಂಡಿದೆ ಎಂದಿದೆ.
ಬಿಎಸ್ಎಫ್ ಯೋಧನ ಹತ್ಯೆಯಲ್ಲಿ ನಮ್ಮ ಸೈನಿಕರ ಪಾತ್ರ ಇಲ್ಲ ಎಂದೂ ಪಾಕ್ ಇಸ್ಲಮಾಬಾದ್ನ ಪ್ರಕಟಣೆಯಲ್ಲಿ ಹೇಳಿಕೊಂಡಿದೆ.
ಮುಂದಿನ ವಾರ ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆ ಮಹಾಧಿ ವೇಶ ನದ ವೇಳೆ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಶಿ ಹಾಗೂ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿಯಾಗಿ ಮಾತುಕತೆ ನಡೆಸುವ ಪಾಕಿಸ್ತಾನದ ವಿನಂತಿಗೆ ಭಾರತ ಗುರುವಾರ ಸಮ್ಮತಿ ನೀಡಿತ್ತು. ಆದರೆ ಸಮ್ಮತಿ ನೀಡಿದ ಮರುದಿನ ಕಾಶ್ಮೀರದಲ್ಲಿ ಮೂವರು ಪೊಲೀಸರನ್ನು ಅಪಹರಿಸಿದ ಹಿಜ್ಬುಲ್ ಮುಜಾಹಿದೀನ್ ಉಗ್ರರು ಬರ್ಬರವಾಗಿ ಹತ್ಯೆಗೈದಿದ್ದು, ಕಾಶ್ಮೀರಿ ಉಗ್ರ ಬುರ್ಹಾನ್ ವಾನಿಯನ್ನು ವೈಭವೀಕರಿಸಿ ಪಾಕಿಸ್ತಾನವು ಅಂಚೆಚೀಟಿಯೊಂದನ್ನು ಬಿಡುಗಡೆ ಮಾಡಿತ್ತು. ಇಂಥ ವಾತಾವರಣದಲ್ಲಿ ಮಾತುಕತೆ ರದ್ದು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್