ಇಂಡೋನೇಷ್ಯಾ ರಕ್ಕಸ ಅಲೆಗಳ ಸುನಾಮಿ ಹೊಡೆತ;ಸಾವಿನ ಸಂಖ್ಯೆ 400
Team Udayavani, Sep 29, 2018, 2:50 PM IST
ಜಕಾರ್ತಾ:ಇಂಡೋನೇಷ್ಯಾದ ಸುಮಾತ್ರಾದ ಸಮುದ್ರಳಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಎದ್ದಿದ್ದ ಭಾರೀ ಸುನಾಮಿಗೆ ಸಾವನ್ನಪ್ಪಿದವರ ಸಂಖ್ಯೆ 400ಕ್ಕೆ ಏರಿಕೆಯಾಗಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆಂದು ಮಾಧ್ಯಮದ ವರದಿ ತಿಳಿಸಿದೆ.
ಸುನಾಮಿ ಹೊಡೆತದಿಂದ ಗಾಯಗೊಂಡವರ ಶುಶ್ರೂಷೆಗಾಗಿ ಆಸ್ಪತ್ರೆಗಳಲ್ಲಿಯೂ ತೊಡಕು ಉಂಟಾಗಿದ್ದು, ಸುನಾಮಿ ಅಪ್ಪಳಿಸಿದ ಸ್ಥಳಕ್ಕೆ ತಲುಪಲು ರಕ್ಷಣಾ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ವರದಿ ಹೇಳಿದೆ.
ರಾಷ್ಟ್ರೀಯ ವಿಪತ್ತು ಏಜೆಸ್ಸಿ ಅಧಿಕಾರಿಗಳ ಪ್ರಕಾರ, ಸಾವಿನ ಸಂಖ್ಯೆ 384ಕ್ಕೇರಿದೆ. ಇವರೆಲ್ಲರೂ ಸುನಾಮಿ ಅಪ್ಪಳಿಸಿದ ಪಾಲೂ ನಗರದವರಾಗಿದ್ದಾರೆ. ಆದರೆ ಸಾವಿನ ಸಂಖ್ಯೆ ಹೆಚ್ಚಳವಾಗಲಿದೆ ಎಂದು ತಿಳಿಸಿದೆ.
ನಗರದಲ್ಲಿರುವ ಮನೆಗಳಲ್ಲಿ ಸುಮಾರು 3,50,000 ಜನರಿದ್ದು, ಸುನಾಮಿ ಹೊಡೆತಕ್ಕೆ ಮೃತದೇಹಗಳು ಕಡಲ ಕಿನಾರೆಯಲ್ಲಿ ಬಿದ್ದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಶುಕ್ರವಾರ ಸಮುದ್ರಾಳದಿಂದ ಬರೋಬ್ಬರಿ 18 ಅಡಿ ಎತ್ತರದಲ್ಲಿ ಅಲೆಗಳು ಬಂದು ದಡಕ್ಕೆ ಅಪ್ಪಳಿಸಿದ್ದವು. ಸುಮಾತ್ರಾ ಸಮುದ್ರದ ಆಳದಲ್ಲಿ ಭಾರೀ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 7.5ರಷ್ಟು ತೀವ್ರತೆ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..