ಕಾಶ್ಮೀರದಲ್ಲಿ ಹತ್ಯೆಯ ಹೊಸ ಅವರ್ತನ: ಪಾಕ್ ಪ್ರಧಾನಿ ಇಮ್ರಾನ್ ಖಾನ್
Team Udayavani, Oct 22, 2018, 5:34 PM IST
ಇಸ್ಲಾಮಾಬಾದ್ : ‘ ಕಾಶ್ಮೀರದಲ್ಲಿ ಅಮಾಯಕರನ್ನು ಹತ್ಯೆಗೈವ ಹೊಸ ಆವರ್ತನವನ್ನು ಭಾರತ ಆರಂಭಿಸಿದೆ ‘ ಎಂದು ಆರೋಪಿಸುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ ಮತ್ತು ಆ ಮೂಲಕ ಭಾರತವನ್ನು ಕೆರಳಿಸುವ ಕೃತ್ಯಕ್ಕೆ ಕೈ ಹಾಕಿದ್ದಾರೆ.
”ಕಾಶ್ಮೀರ ಸಮಸ್ಯೆ ಮತ್ತು ಕಾಶ್ಮೀರ ಜನರ ಆಶೋತ್ತರಗಳನ್ನು ವಿಶ್ವಸಂಸ್ಥೆಯ ಠರಾವಿನ ಪ್ರಕಾರ ಮಾತುಕತೆಯ ಮೂಲಕವೇ ಇತ್ಯರ್ಥಪಡಿಸಲು ಸಾಧ್ಯ” ಎಂದು ಟ್ವಿಟರ್ನಲ್ಲಿ ಬರೆದುಕೊಂಡಿರುವ ಪಾಕಿಸ್ಥಾನದ ನೂತನ ಪ್ರಧಾನಿ ಇಮ್ರಾನ್ ಖಾನ್, “ಬನ್ನಿ, ಮಾತುಕತೆ ಆರಂಭಿಸೋಣ” ಎಂದು ಭಾರತಕ್ಕೆ ಕರೆ ನೀಡಿದ್ದಾರೆ.
ಇಮ್ರಾನ್ ಖಾನ್ ಅವರ ಈ ಟ್ವೀಟನ್ನು ಆಲ್ ಪಾರ್ಟೀಸ್ ಹುರಿಯತ್ ಕಾನ್ಫರೆನ್ಸ್ನ ಅಧ್ಯಕ್ಷ ಮೀರ್ ವೇಜ್ ಉಮರ್ ಫಾರೂಕ್ ಅವರು ರೀ – ಟ್ವೀಟ್ ಮಾಡಿದ್ದಾರೆ. ಕಾಶ್ಮೀರ ಸಮಸ್ಯೆಗೆ ಸಂಬಂಧಿಸಿ ಪಾಕಿಸ್ಥಾನವೂ ಒಬ್ಬ ಕಕ್ಷಿದಾರನಾಗಿರುವುದರಿಂದ ಅದು ವಿವಾದವನ್ನು ಬಗೆಹರಿಸಲು ಮಾಡಬೇಕಾದದ್ದು ಬಹಳಷ್ಟಿದೆ ಎಂದು ಮೀರ್ ವೇಜ್ ತಮ್ಮ ರೀ – ಟ್ವೀಟ್ ನಲ್ಲಿ ಬರೆದಿದ್ದಾರೆ.
“ಕಾಶ್ಮೀರಿಗಳು ಪಾಕಿಸ್ಥಾನದ ಕಳಕಳಿಯನ್ನು ಪ್ರಶಂಸಿಸುತ್ತಾರೆ; ಆದರೆ ಕಾಶ್ಮೀರದಲ್ಲಿ ಭಾರತ ಸರಕಾರ ನಡೆಸುತ್ತಿರುವ ಆಘಾತಕಾರಿ ದಮನ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಕೊನೆಗಾಣಿಸಲು ಕಾಶ್ಮೀರ ವಿವಾದದಲ್ಲಿ ಒಬ್ಬ ಕಕ್ಷಿದಾರನೂ ಆಗಿರುವ ಪಾಕಿಸ್ಥಾನ ಬಹಳಷ್ಟನ್ನು ಮಾಡಬೇಕಿದೆ’ ಎಂದು ಹುರಿಯತ್ ನಾಯಕ ಮೀರ್ ವೇಜ್ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್