ಉಗ್ರ ಸಯೀದ್‌ ನಿಷೇಧ ತೆರವು!


Team Udayavani, Oct 27, 2018, 6:00 AM IST

27-hafeez.jpg

ಇಸ್ಲಾಮಾಬಾದ್‌: ಮುಂಬೈ ದಾಳಿ ಸಂಚುಕೋರ ಹಫೀಜ್‌ ಸಯೀದ್‌ ನೇತೃತ್ವದ ಜಮಾತ್‌ ಉದ್‌ ದಾವಾ ಸಂಘಟನೆ ಪಾಕಿಸ್ಥಾನ‌ದಲ್ಲಿ ಇನ್ನು ಮುಕ್ತವಾಗಿ ಕಾರ್ಯಾಚರಣೆ ಮಾಡಬಹುದು! ವಿಶ್ವಸಂಸ್ಥೆಯೇ ಈ ಸಂಘಟನೆಗಳನ್ನು ನಿಷೇಧಿತ ಎಂದು ಘೋಷಿಸಿದ್ದರೂ, ಪಾಕಿಸ್ಥಾನ ಈ ಸಂಘಟನೆಗೆ ವಿಧಿಸಿದ ನಿಷೇಧವನ್ನು ತೆಗೆದುಹಾಕಿದೆ. ಜಮಾತ್‌ ಉದ್‌ ದಾವಾ ಹಾಗೂ ಫ‌ಲಾಹ್‌ -ಇ- ಇನ್ಸಾನಿಯತ್‌ ಸಂಘಟನೆಗಳನ್ನು ಸಯೀದ್‌ ಸ್ಥಾಪಿಸಿದ್ದು, ಇವು ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಮೂಲ ಉದ್ದೇಶ ಹೊಂದಿವೆ. ವಿಶ್ವಸಂಸ್ಥೆಯ ನಿಷೇದಿಂದಾಗಿ ಕಳೆದ ಫೆಬ್ರವರಿಯಲ್ಲಿ ಪಾಕಿಸ್ಥಾನ ಅಧ್ಯಾದೇಶ ಹೊರಡಿಸಿ ಇವುಗಳನ್ನು ನಿಷೇಧಿತ ಎಂದು ಘೋಷಿಸಿತ್ತು. ಆದರೆ ಈಗ ಈ ಅಧ್ಯಾದೇಶ ಅವಧಿ ಮುಗಿದೆ. ಅದನ್ನು ನವೀಕರಿಸಲು ಇಮ್ರಾನ್‌ ಖಾನ್‌ ನೇತೃತ್ವದ ಪಾಕ್‌ ಸರ್ಕಾರ ಮುಂದಾಗಿಲ್ಲ. ಈ ಮೂಲಕ ಅದು ಜಾಣ ಮರೆವು ಪ್ರದರ್ಶಿಸಿದೆ.

ಸಂಘಟನೆಗಳನ್ನು ನಿಷೇಧಿಸಿ ಫೆಬ್ರವರಿಯಲ್ಲಿ ಪಾಕ್‌ ಅಧ್ಯಕ್ಷರಾಗಿದ್ದ ಮಮೂನ್‌ ಹುಸೈನ್‌ ಹೊರಡಿಸಿದ್ದ ಅಧ್ಯಾದೇಶ ವಿರುದ್ಧ ಜೆಯುಡಿ ಕೋರ್ಟ್‌ ಮೊರೆ ಹೋಗಿತ್ತು. ಗುರುವಾರದ ಪ್ರಕರಣದ ವಿಚಾರಣೆ ವೇಳೆ ಸಯೀದ್‌ ಪರ ವಕೀಲರು ಇಸ್ಲಾಮಾಬಾದ್‌ ಹೈ ಕೋರ್ಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೋರ್ಟ್‌ನಲ್ಲಿ ಕೇಸ್‌ ವಜಾಗೊಂಡಿದೆ. ಸರಕಾರ ಅಧ್ಯಾದೇಶವನ್ನು ಪುನಃ ಜಾರಿಗೊಳಿಸಿದರೆ ಮತ್ತೂಂದು ದಾವೆಯನ್ನು ಸಲ್ಲಿಸಬಹುದು ಎಂದು ಕೋರ್ಟ್‌ ಪ್ರಕರಣವನ್ನು ವಜಾಗೊಳಿಸಿದೆ.

ಸೆಪ್ಟೆಂಬರ್‌ನಲ್ಲೇ ನಿಷೇಧ ತೆರವು: ಕಳೆದ ಸೆಪ್ಟೆಂಬರ್‌ನಲ್ಲೇ ನಿಷೇಧ ತೆರವುಗೊಳಿಸಿದ ಬಗ್ಗೆ ಪಾಕಿಸ್ಥಾನ ರಾಷ್ಟ್ರೀಯ ಭಯೋತ್ಪಾದನೆ ತಡೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ. ಜಮಾತ್‌ ಉದ್‌ ದಾವಾ ಹಾಗೂ ಫ‌ಲಾಹ್‌ ಇ ಇನ್ಸಾನಿಯತ್‌ ಫೌಂಡೇಶನ್‌ಗಳು ನಿಷೇಧಿತವಲ್ಲ ಎಂದು ಪ್ರಾಧಿಕಾರ ಪ್ರಕಟಿಸಿದ ಪಟ್ಟಿಯಲ್ಲಿ ವಿವರಿಸಲಾಗಿದೆ. ಆದರೆ ಇವುಗಳನ್ನು ಗೃಹ ಸಚಿವಾಲಯದ ಪರಿವೀಕ್ಷಣೆಯಲ್ಲಿರುವ ಸಂಸ್ಥೆಗಳು ಎಂದು ಪಟ್ಟಿಯಲ್ಲಿ ಹೆಸರಿಸಲಾಗಿದೆ. ಈ ಮಧ್ಯೆ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಕೂಡ ಈ ಸಂಸ್ಥೆಗಳು ದತ್ತಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಬಹುದು ಎಂದು ಸೆಪ್ಟಂಬರ್‌ನಲ್ಲೇ ಸೂಚನೆ ನೀಡಿತ್ತು.

ಟಾಪ್ ನ್ಯೂಸ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.