ಎಂ ಜೆ ಅಕ್‌ಬರ್‌ ನನ್ನನ್ನು ರೇಪ್‌ ಮಾಡಿದ್ದರು: ಅಮೆರಿಕ ಪತ್ರಕರ್ತೆ


Team Udayavani, Nov 2, 2018, 11:52 AM IST

mj-akbar-700.jpg

ವಾಷಿಂಗ್ಟನ್‌ : ”ರಾಜಕಾರಣಿಯಾಗಿ ಪರಿವರ್ತಿತರಾಗಿರುವ ಸಂಪಾದಕ ಎಂ ಜೆ ಅಕ್‌ಬರ್‌ ಅವರು ವರ್ಷಗಳ ಹಿಂದೆ ಏಶ್ಯನ್‌ ಏಜ್‌ ಪತ್ರಿಕೆಯ ಮುಖ್ಯ ಸಂಪಾದಕರಾಗಿದ್ದಾಗ ನನ್ನ ಮೇಲೆ ಅತ್ಯಾಚಾರ ನಡೆಸಿದ್ದರು” ಎಂದು ಆರೋಪಿಸಿ ಭಾರತೀಯ ಮೂಲದ ಅಮೆರಿಕನ್‌ ಪತ್ರಕರ್ತೆ, ವಾಷಿಂಗ್ಟನ್‌ ಪೋಸ್ಟ್‌ ನಲ್ಲಿ ಬರೆದಿರುವ ಬ್ಲಾಗ್‌ನಲ್ಲಿ ಆರೋಪಿಸಿದ್ದಾರೆ. ಅಕ್‌ಬರ್‌ ಅವರ ವಕೀಲ ಈ ಆರೋಪಗಳು ಸುಳ್ಳೆಂದು ತಿರಸ್ಕರಿಸಿರುವುದಾಗಿ ವರದಿಯಾಗಿದೆ.

”ಅಕ್‌ಬರ್‌ ವಿರುದ್ಧ ಈಚೆಗೆ ಬೇರೊಬ್ಬ ಮಹಿಳೆ ಮೀ ಟೂ ಅಭಿಯಾನದಡಿ  ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು; ಅದನ್ನು ಕೇಳಿ ನನ್ನ ಮನಸ್ಸು ಹಿಂದಕ್ಕೋಡಿತು. ನಾನು ಏಶ್ಯನ್‌ ಏಜ್‌ ಪತ್ರಿಕೆಯಲ್ಲಿ ದುಡಿಯುತ್ತಿದ್ದಾಗ ನಾನು 22 ವರ್ಷ ವಯಸ್ಸಿನವಳಾಗಿದ್ದೆ. ಆಗ ಅಲ್ಲಿ ಹೆಚ್ಚಿನ ನೌಕರರೆಲ್ಲ ಮಹಿಳೆಯರೇ ಆಗಿದ್ದರು” ಎಂದು ಆಕೆ ತನ್ನ ಬ್ಲಾಗ್‌ ನಲ್ಲಿ ಬರೆದಿದ್ದಾರೆ. 

ಮುಂದುವರಿದು ಆಕೆ, “ಅಕ್‌ಬರ್‌ ಕೈಕೆಳಗೆ ಹೊಸದಿಲ್ಲಿಯಲ್ಲಿ ದುಡಿಯುವುದು ನಮಗೆಲ್ಲ ಭಾರೀ ಪ್ರತಿಷ್ಠೆಯ ಅವಕಾಶವಾಗಿತ್ತು. ಎರಡು ಅತ್ಯುತ್ತಮ ಪುಸ್ತಕಗಳ ಲೇಖಕನಾಗಿ, ಪ್ರಮುಖ ಸಂಪಾದಕನಾಗಿ ಅಕ್‌ಬರ್‌ ತುಂಬ ಖ್ಯಾತರಾಗಿದ್ದರು. ಆಗ ಅವರು 40ರ ಹರೆಯದವರಾಗಿದ್ದರು. ನಮ್ಮ ತಪ್ಪುಗಳನ್ನು ತಿದ್ದುತ್ತಾ ನಮ್ಮನ್ನು ಏರಿದ ಧ್ವನಿಯಲ್ಲಿ ಗದರಿಸುತ್ತಿದ್ದರು, ಬೈಯುತ್ತಿದ್ದರು; ನಾವು ಅವರ ನಿರೀಕ್ಷೆಯ ಮಟ್ಟದಲ್ಲಿ ಇಲ್ಲವೆಂದು ಹೀಯಾಳಿಸುತ್ತಿದ್ದರು….” 

”…1994ರಲ್ಲಿ ನಾನು ಒಪ್‌-ಎಡ್‌ ಪುಟದ ಸಂಪಾದಕಿಯಾಗಿದ್ದಾಗ ಒಮ್ಮೆ ನಾನು ಸಿದ್ಧಪಡಿಸಿದ್ದ ಪುಟವನ್ನು ಅವರಿಗೆ ತೋರಿಸಲು ಅವರ ಕೋಣೆಗೆ ಹೋಗಿದ್ದೆ. ನನ್ನ ಕೆಲಸವನ್ನು ಮೆಚ್ಚಿಕೊಂಡ ಅವರು ಇದ್ದಕ್ಕಿದ್ದಂತೆಯೇ ನನ್ನ ಅಪ್ಪಿಕೊಂಡು ನನಗೆ ಬಲವಂತದ ಕಿಸ್‌ ನೀಡಿದರು. ಈ ಕ್ಷಣಾರ್ಧದ ಲೈಂಗಿಕ ದಾಳಿಯಿಂದ ತತ್ತರಿಸಿದ ನಾನು ಗೊಂದಲದ ಗೂಡಾಗಿ ಕೋಣೆಯಿಂದ ಹೊರಬಂದೆ; ಆಗ ನನಗೆ 23 ವರ್ಷ ವಯಸ್ಸಾಗಿತ್ತು….”

”…. ಅದಾಗಿ ಕೆಲವು ತಿಂಗಳ ಬಳಿಕ ತಾಜ್‌ ಹೊಟೇಲ್‌ನಲ್ಲಿ ಮತ್ತೆ ಇದೇ ರೀತಿಯ ದಾಳಿಯನ್ನು ಅಕ್‌ಬರ್‌ ನನ್ನ ಮೇಲೆ ನಡೆಸಲು ಮುಂದಾದರು; ನಾನು ವಸ್ತುತಃ ಹೋರಾಡಿ ಹೊರ ಬಂದೆ; ಆತ ನನ್ನ ಮುಖದ ಪರಚು ಗಾಯ ಮಾಡಿದರು. ಇದೇ ರೀತಿ ಪುನಃ ಪ್ರತಿರೋಧಿಸಿದರೆ ನನ್ನನ್ನು ಕೆಲಸದಿಂದ ತೆಗೆದು ಹಾಕುವುದಾಗಿ ಅಕ್‌ಬರ್‌ ನನಗೆ ಬೆದರಿಕೆ ಒಡ್ಡಿದರು” ಎಂದು ಮಹಿಳೆ ತನ್ನ ಬ್ಲಾಗ್‌ನಲ್ಲಿ ಬರೆದಿದ್ದಾರೆ. 

ಆದರೆ ಈಕೆಯ ಆರೋಪಗಳನ್ನು ಅಕ್‌ಬರ್‌ ಅವರ ವಕೀಲರು ಸಾರಾಸಗಟು ಸುಳ್ಳೆಂದು ಹೇಳಿರುವುದಾಗಿ ವಾಷಿಂಗ್‌ಟನ್‌ ಪೋಸ್ಟ್‌ ವರದಿ ಮಾಡಿದೆ. 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.