ತೈಲ ಬೆಲೆ ನಿಯಂತ್ರಿಸಲು 8ರಾಷ್ಟ್ರಗಳಿಗೆ ತಾತ್ಕಾಲಿಕ ವಿನಾಯಿತಿ:ಟ್ರಂಪ್


Team Udayavani, Nov 7, 2018, 11:31 AM IST

trump.jpg

ವಾಷಿಂಗ್ಟನ್‌: ಜಾಗತಿಕ ತೈಲ ಬೆಲೆಗಳನ್ನು ನಿಯಂತ್ರಣದಲ್ಲಿರಿಸುವ ಮತ್ತು ಮಾರುಕಟ್ಟೆಯಲ್ಲಿ ಆಘಾತವುಂಟಾಗುವುದನ್ನು ತಡೆಯುವ ಸಲುವಾಗಿ ಇರಾನ್‌ನಿಂದ ತೈಲ ಆಮದು ಮಾಡುವುದರ ಮೇಲೆ ವಿಧಿಸ ಲಾಗಿರುವ ನಿಷೇಧದಿಂದ ಭಾರತ ಮತ್ತು ಚೀನ ಸಹಿತ 8 ರಾಷ್ಟ್ರಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆಯೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಹೇಳಿದ್ದಾರೆ. 

ಇರಾನ್‌ ಆಡಳಿತದ ವರ್ತನೆಯನ್ನು ತಿದ್ದುವ ಸಲುವಾಗಿ ಅಮೆರಿಕ ಸೋಮವಾರ ಇರಾನ್‌ ಮೇಲೆ ಅತೀ ಕಠಿನ ನಿರ್ಬಂಧಗಳನ್ನು ವಿಧಿಸಿತ್ತು. ಇರಾನ್‌ನ ಬ್ಯಾಂಕಿಂಗ್‌ ಮತ್ತು ಇಂಧನ ಕ್ಷೇತ್ರಗಳು ನಿರ್ಬಂಧಕ್ಕೆ ಒಳಪಟ್ಟಿವೆ. ಇರಾನ್‌ನಿಂದ ತೈಲ ಆಮದನ್ನು ಮುಂದುವರಿಸುವ ಯೂರೋಪ್‌, ಏಷ್ಯಾ ಮತ್ತು ಇತರೆಡೆಯ ರಾಷ್ಟ್ರಗಳು ಹಾಗೂ ಕಂಪೆನಿಗಳ ಮೇಲೆ ದಂಡವನ್ನು ವಿಧಿಸಲು ಟ್ರಂಪ್‌ ಆಡಳಿತ ನಿರ್ಧರಿಸಿದೆ.

ಆದರೆ ಎಂಟು ರಾಷ್ಟ್ರಗಳಾದ ಭಾರತ, ಚೀನ, ಇಟೆಲಿ, ಗ್ರೀಸ್‌, ಜಪಾನ್‌, ದಕ್ಷಿಣ ಕೊರಿಯ, ತೈವಾನ್‌ ಮತ್ತು ಟರ್ಕಿ ಇವು ಇರಾನ್‌ನಿಂದ ಕೊಳ್ಳುವ ತೈಲದ ಪ್ರಮಾಣವನ್ನು ಗಣನೀಯವಾಗಿ ಇಳಿಕೆ ಮಾಡಿರುವುದರಿಂದ ಅವುಗಳಿಗೆ ತೈಲ ಖರೀದಿಯನ್ನು ತಾತ್ಕಾ ಲಿಕವಾಗಿ ಮುಂದುವರಿಸುವುದಕ್ಕೆ ಅವಕಾಶ ವೀಯಲಾಗಿದೆ ಎಂದು ವಿದೇಶಾಂಗ ಸಚಿವ ಮೈಕ್‌ ಪಾಂಪಿಯೊ ಸ್ಪಷ್ಟಪಡಿಸಿದ್ದಾರೆ.

ನಾವು ತೀರಾ ಕಠಿನ ನಿಷೇಧ ಹೇರುವುದರಲ್ಲಿ ದ್ದೇವು. ಆದರೆ ಜಗತ್ತಿನಾದ್ಯಂತ ತೈಲ ಬೆಲೆ ಏರುಗತಿಯಲ್ಲಿರುವುದರಿಂದ ಜನರಿಗೆ ಸಮಸ್ಯೆ ಆಗಬಾರದೆಂದು ತಾತ್ಕಾಲಿಕವಾಗಿ ಕೆಲವು ದೇಶಗಳಿಗೆ ವಿನಾಯಿತಿ ನೀಡಿದ್ದೇವೆ. ಇರಾನ್‌ ಈಗಲೂ ಸರಿ ದಾರಿಗೆ ಬಾರದಿದ್ದಲ್ಲಿ ಅನಿವಾರ್ಯವಾಗಿ ಕಠಿನಾತಿಕಠಿನ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮೈಕ್‌ ಪಾಂಪಿಯೊ ತಿಳಿಸಿದ್ದಾರೆ.

ತೈಲ ಬೆಲೆ ಇಳಿಕೆ 
ಹೊಸದಿಲ್ಲಿ: ತೈಲ ಬೆಲೆ ಮಂಗಳವಾರ ಕೂಡ ಅಲ್ಪ ಇಳಿಕೆಯಾಗಿದೆ. ದಿಲ್ಲಿಯಲ್ಲಿ ಪೆಟ್ರೋಲ್‌ ಬೆಲೆ ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್‌ ಬೆಲೆ 9 ಪೈಸ್‌ ಇಳಿಕೆಯಾಗಿದೆ. ಪ್ರಸ್ತುತ ದಿಲ್ಲಿಯಲ್ಲಿ ಲೀಟರ್‌ ಪೆಟ್ರೋಲ್‌ ಬೆಲೆ 78.42 ರೂ.ಗಳಿದ್ದರೆ, ಡೀಸೆಲೆ ಬೆಲೆ 73.07 ರೂ. ಇದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.