ಸಿಂಗಾಪುರ: ಪಟಾಕಿ ಸಿಡಿಸಿದ ಇಬ್ಬರು ಭಾರತೀಯರಿಗೆ 2 ವರ್ಷ ಜೈಲು ಸಂಭವ
Team Udayavani, Nov 8, 2018, 12:04 PM IST
ಸಿಂಗಾಪುರ : ಭಾರತೀಯರ ಬಾಹುಳ್ಯವಿರುವ ಇಲ್ಲಿನ Little India ಪ್ರದೇಶದಲ್ಲಿ ದೀಪಾವಳಿ ಮುನ್ನಾ ದಿನ ಕಾನೂನು ಬಾಹಿರವಾಗಿ ಪಟಾಕಿ ಸಿಡಿಸಿದ ಕೃತ್ಯಕ್ಕಾಗಿ ಭಾರತೀಯ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು ಅವರ ವಿರುದ್ದ ಕೇಸು ದಾಖಲಿಸಲಾಗಿದೆ; ಇವರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 2,000 ದಿಂದ 10,000 ಸಿಂಗಾಪುರ ಡಾಲರ್ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಸಿಂಗಾಪುರದಲ್ಲಿ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಪಟಾಕಿ, ಸುಡುಮದ್ದು ಸುಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಆರೋಪಿಗಳಾದ ತ್ಯಾಗು ಸೆಲ್ವರಾಜು (29) ಮತ್ತು ಶಿವ ಕುಮಾರ್ ಸುಬ್ರಮಣಿಯನ್ (48) ವಿರುದ್ಧ ಅಪಾಯಕಾರಿ ಸುಡುಮದ್ದು ಸುಟ್ಟ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಲಾಗಿದೆ ಎಂದು ಸ್ಟ್ರೇಟ್ಸ್ ಟೈಮ್ಸ್ ಇಂದು ಗುರುವಾರ ವರದಿ ಮಾಡಿದೆ.
ಕೋರ್ಟಿಗೆ ಸಲ್ಲಿಸಲಾಗಿರುವ ದಾಖಲೆಗಳ ಪ್ರಕಾರ ಆರೋಪಿ ಶಿವ ಕುಮಾರನು ಸೋಮವಾರ ಮಧ್ಯ ರಾತ್ರಿ ಗ್ಲೌಸೆಸ್ಟರ್ ರೋಡ್ನ ಡಿವೈಡರ್ ಮೇಲೆ ಸುಡು ಮದ್ದು ತುಂಬಿದ್ದ ಪೆಟ್ಟಿಗೆಯೊಂದನ್ನು ಇರಿಸಿದ್ದಾನೆ; ಇನ್ನೋರ್ವ ಆರೋಪಿ ತ್ಯಾಗು ಅದಕ್ಕೆ ಬೆಂಕಿ ಹಚ್ಚಿದ್ದಾನೆ.
ಆದರೆ ಇವರಿಬ್ಬರು ಎಲ್ಲಿಂದ ಸುಡುಮದ್ದನ್ನು ಪಡೆದುಕೊಂಡರು ಎಂಬುದನ್ನು ಕೋರ್ಟ್ ದಾಖಲೆಪತ್ರಗಳಲ್ಲಿ ತಿಳಿಸಿಲ್ಲ. ಇವರಿಬ್ಬರನ್ನು ಮಂಗಳವಾರ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ