ತಾಲಿಬಾನ್ ಸಂಧಾನ ಸಭೆಗೆ ಭಾರತಕ್ಕೆ ಆಹ್ವಾನ
Team Udayavani, Nov 9, 2018, 11:38 AM IST
ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲಿ ಶಾಂತಿ ನೆಲೆಸುವಂತೆ ಮಾಡಲು ರಷ್ಯಾ ಸರಕಾರ ಮುಂದಾಗಿದೆ. ಅದಕ್ಕಾಗಿ ಉಗ್ರ ಸಂಘಟನೆ ತಾಲೀಬಾನ್ ಜತೆಗೆ ಸಭೆ ನಡೆಸಲು ತೀರ್ಮಾ ನಿಸಲಾಗಿದೆ. ಹೀಗಾಗಿ ಮಾಸ್ಕೋ ದಲ್ಲಿ ಶುಕ್ರವಾರ ಅನೌಪಚಾರಿಕ ಸಭೆ ಆಯೋಜಿಸಿದ್ದು, ಭಾರತ ಇದರಲ್ಲಿ ಪಾಲ್ಗೊಳ್ಳಲಿದೆ.
ಎರಡು ದೇಶಗಳ ನಡುವಿನ ಭಿನ್ನಾಭಿಪ್ರಾಯ ಶಮನಕ್ಕಾಗಿ ಕರೆಯಲಾಗಿರುವ ಅನೌಪಚಾರಿಕ ಅಂತಾರಾಷ್ಟ್ರೀಯ ಸಭೆ ಯೊಂದರಲ್ಲಿ ಭಾರತ ಪಾಲ್ಗೊಳ್ಳುತ್ತಿರುವುದು ಇದೇ ಮೊದಲು. ಈ ಸಭೆಯಲ್ಲಿ ಭಾಗವಹಿಸುವಂತೆ ಭಾರತಕ್ಕೆ ಆಮಂತ್ರಣ ನೀಡಲಾಗಿದ್ದು, ಆಫ್ಘಾನಿಸ್ತಾನ ದಲ್ಲಿ ಭಾರತದ ರಾಯಭಾರಿಯಾಗಿದ್ದ ಅಮರ್ ಸಿನ್ಹಾ, ಪಾಕಿಸ್ಥಾನದಲ್ಲಿ ಭಾರತದ ಹೈಕಮೀಷನರ್ ಆಗಿದ್ದ ಟಿ.ಸಿ.ಎ. ರಾಘವನ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ