ಕಾಳ್ಗಿಚ್ಚಿಗೆ ಕ್ಯಾಲಿಫೋರ್ನಿಯಾ ಪ್ಯಾರಡೈಸ್‌ ಭಸ್ಮ


Team Udayavani, Nov 11, 2018, 6:00 AM IST

28.jpg

ಪ್ಯಾರಡೈಸ್‌ (ಅಮೆರಿಕ): ಅಮೆರಿಕದ ಕ್ಯಾಲಿಫೋರ್ನಿಯಾ ಪ್ರಾಂತ್ಯದ ಜನತೆ ಕಾಳ್ಗಿಚ್ಚಿನ ರೌದ್ರಾವತಾರಕ್ಕೆ ಕಂಗಾಲಾಗಿದ್ದಾರೆ. ಅಲ್ಲಿನ ಪ್ಯಾರಡೈಸ್‌ ಎಂಬ ಪಟ್ಟಣ ಬಹುತೇಕ ಸುಟ್ಟು ಹೋಗಿದೆ. ಇಲ್ಲಿನ ಮೂರು ಸ್ಥಳಗಳಲ್ಲಿ ಸಂಭವಿಸಿದ ಕಾಳ್ಗಿಚ್ಚಿನಿಂದ 9 ಮಂದಿ ಅಸುನೀಗಿದ್ದು, 35 ಮಂದಿ ನಾಪತ್ತೆಯಾಗಿದ್ದಾರೆ. ವೆಂಚುರಾ ಮತ್ತು ಲಾಸ್‌ ಏಂಜಲೀಸ್‌ ಸಹಿತ ಹಲವಾರು ಸ್ಥಳಗಳ 3 ಲಕ್ಷಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಹಾಲಿವುಡ್‌ನ‌ ಪ್ರಮುಖ ಗಣ್ಯರೂ ಸೇರಿದ್ದಾರೆ.

ಗುರುವಾರ ಬೆಳಗ್ಗಿನಿಂದ ಈ ಸಮಸ್ಯೆ ತಲೆದೋರಿದ್ದು, ಈ ವರೆಗೆ 90 ಸಾವಿರ ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. “ಕ್ಯಾಂಪ್‌ ಫೈರ್‌’ ಎಂಬ ಕಿಚ್ಚಿನ ಪ್ರಕೋಪಕ್ಕೆ ಉತ್ತರ ಕ್ಯಾಲಿಫೋರ್ನಿಯಾದ ರಾಜಧಾನಿ ಸಾಕ್ರಮೆಂಟೋದಿಂದ ಉತ್ತರ ಭಾಗದಲ್ಲಿರುವ ಪ್ಯಾರಡೈಸ್‌ ಪಟ್ಟಣದ ಶೇ. 90ರಷ್ಟು ಪ್ರದೇಶ ಹಾಗೂ ಅಲ್ಲಿರುವ ಮನೆಗಳೂ ಬೆಂಕಿಗೆ ಆಹುತಿಯಾಗಿವೆ. ಹೆಚ್ಚಾ ಕಡಿಮೆ 27 ಸಾವಿರ ಮಂದಿ ವಾಸವಿರುವ ಈ ನಗರದಲ್ಲಿನ ಬಹುತೇಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಹಲವಾರು ಆಸ್ಪತ್ರೆಗಳು, ಪೆಟ್ರೋಲ್‌ ಬಂಕ್‌ಗಳು ಉರಿದು ಭಸ್ಮವಾಗಿವೆ. ಬ್ಯೂಟ್‌ ಕೌಂಟಿ ಪಟ್ಟಣದ ಶೇ.90 ಮನೆ, ವಾಣಿಜ್ಯ ಮಳಿಗೆಗಳು ಬೆಂಕಿಗೆ ಆಹುತಿಯಾಗಿವೆ.

ಶುಕ್ರವಾರ ಒಂದೇ ದಿನ 6,453 ಮನೆಗಳು, 260 ವಾಣಿಜ್ಯ ಮಳಿಗೆಗಳು ಸುಟ್ಟು ಕರಕಲಾಗಿವೆ. ಹೀಗಾಗಿ ಈ ಘಟನೆಯನ್ನು ಕ್ಯಾಲಿಫೋರ್ನಿಯಾ ಪ್ರಾಂತ್ಯದ ಇತಿಹಾಸದಲ್ಲಿಯೇ ಅತ್ಯಂತ ಭೀಕರ ದುರ್ಘ‌ಟನೆ ಎಂದು ಬಣ್ಣಿಸಲಾಗಿದೆ. 2017ರ ಅಕ್ಟೋಬರ್‌ನಲ್ಲಿ ಉಂಟಾಗಿದ್ದ ಭೀಕರ ಅಗ್ನಿ ದುರಂತದಲ್ಲಿ 5,636 ಮನೆಗಳು, ವಾಣಿಜ್ಯ ಮಳಿಗೆಗಳು ಬೆಂಕಿಗೆ ಆಹುತಿಯಾಗಿದ್ದವು.

ಈ ವಾರಾಂತ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿಯೂ ಬೀಸಿದ್ದರಿಂದ ಕಾರ್ಯಾಚರಣೆಗೆ ಅವಕಾಶವೇ ಇಲ್ಲದಂತೆ ಬೆಂಕಿ ವೇಗವಾಗಿ ವ್ಯಾಪಿಸಿದೆ. ಪ್ರಸ್ತುತ ಇದು ಕ್ಯಾಲಿಫೋರ್ನಿಯಾ ರಾಜಧಾನಿ ಸಾಕ್ರಮೆಂಟೋದತ್ತ ಧಾವಿಸುತ್ತಿದೆ. ಅದೃಷ್ಟವಶಾತ್‌ ದಕ್ಷಿಣ ಪ್ರದೇಶದಲ್ಲಿ ಉಂಟಾಗಿರುವ ಅಗ್ನಿ ಅನಾಹುತದಲ್ಲಿ ಜೀವ ಹಾನಿಯಾಗಿಲ್ಲ. ಅಗ್ನಿ ಶಾಮಕ ದಳದ 2 ಸಾವಿರಕ್ಕೂ ಅಧಿಕ ಸಿಬಂದಿ ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.

ಬೆಂಕಿ ಶುರುವಾಗಿದ್ದೆಲ್ಲಿ?
ಕೇಂದ್ರ ಲಾಸ್‌ ಏಂಜಲೀಸ್‌ನಿಂದ 64 ಕಿ.ಮೀ. ದೂರದ ವಾಯವ್ಯ ಭಾಗದಲ್ಲಿರುವ ಥೌಸೆಂಡ್‌ ಓಕ್ಸ್‌ ಎಂಬಲ್ಲಿ ಗುರುವಾರ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಮತ್ತೂಂದು ಬೆಂಕಿಯ ಪ್ರಕರಣ ಥೌಸೆಂಡ್‌ ಓಕ್ಸ್‌ ಸಮೀಪದಲ್ಲಿಯೇ ಗೋಚರಿಸಿತ್ತು. 

ಉರಿಯುವ ಜ್ವಾಲೆ ನಂದಿಸಲು ಭದ್ರತಾ ಸಿಬಂದಿ ಹರಸಾಹಸ
2 ಲಕ್ಷ ಕ್ಯಾಲಿಫೋರ್ನಿಯಾ ಪ್ರಾಂತ್ಯದಿಂದ ರಕ್ಷಿಸಲಾಗಿರುವವರ ಸಂಖ್ಯೆ
03 ಇಷ್ಟು ಸ್ಥಳಗಳಲ್ಲಿ ಕಾಣಿಸಿಕೊಂಡಿದೆ ಬೆಂಕಿ
35 ಇಷ್ಟು ಮಂದಿ ನಾಪತ್ತೆಯಾಗಿ ರುವವರು 
90  ಸಾವಿರ ಎಕರೆ  ಬ್ಯೂಟಿ ಕೌಂಟಿ ಯಲ್ಲಿ ಉರಿದ  ಪ್ರದೇಶ
40  ಸಾವಿರ ಎಕರೆ  ದ.ಕ್ಯಾಲಿಫೋರ್ನಿಯಾದಲ್ಲಿ ಉರಿದು ಹೋದ ಪ್ರದೇಶ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.