ಪೆಸಿಫಿಕ್ ವಲಯದಲ್ಲಿ ಶಾಂತಿಗೆ ಬದ್ಧ: ಮೋದಿ
Team Udayavani, Nov 16, 2018, 7:44 AM IST
ಸಿಂಗಾಪುರ: ಇಂಡೋ ಪೆಸಿಫಿಕ್ ವಲಯದಲ್ಲಿ ಶಾಂತಿ ನೆಲೆಸುವ ಕ್ರಮಗಳನ್ನು ಕೈಗೊಳ್ಳಲು ಭಾರತ ಬದ್ಧವಾಗಿದೆ ಎಂದು ಸಿಂಗಾಪುರದಲ್ಲಿ ನಡೆಯುತ್ತಿರುವ ಪೂರ್ವ ಏಷ್ಯಾ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪೂರ್ವ ಏಷ್ಯಾ ದೇಶಗಳೊಂದಿಗೆ ಭಾರತ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಹೊಂದಿದೆ. ಪೂರ್ವ ಏಷ್ಯಾ ದೇಶಗಳ ಒಕ್ಕೂಟ ದಲ್ಲಿ 10 ದೇಶಗಳಿದ್ದು, 2005 ರಿಂದಲೂ ಭಾರತ ಸಮ್ಮೇಳನದಲ್ಲಿ ಭಾಗವಹಿಸುತ್ತಿದೆ. ಇದಕ್ಕೂ ಮುನ್ನ ಬೆಳಗ್ಗೆ ಆಸಿಯಾನ್- ಇಂಡಿಯಾ ಬ್ರೇಕ್ಫಾಸ್ಟ್ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 10 ಆಸಿಯಾನ್ ಮುಖಂಡರ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ.
ಪ್ರಶಸ್ತಿ ವಿತರಣೆ: ಕಳೆದ ಜೂನ್ನಲ್ಲಿ ಸಿಂಗಾಪುರಕ್ಕೆ ಭೇಟಿ ನೀಡಿದಾಗ ಭಾರತ-ಸಿಂಗಾಪುರ ಜಂಟಿ ಹ್ಯಾಕಥಾನ್ ನಡೆಸುವ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ಇದಕ್ಕೆ ಒಪ್ಪಿಕೊಂಡ ಸಿಂಗಾಪುರ ಪ್ರಧಾನಿ ಲೀ ಸೀನ್, ಹ್ಯಾಕಥಾನ್ ನಡೆಸಿದ್ದರು. ಈ ಸ್ಪರ್ಧೆಯಲ್ಲಿ ವಿಜೇತ ಭಾರತದ ಎರಡು ಹಾಗೂ ಸಿಂಗಾಪುರದ ನಾಲ್ಕು ತಂಡಗಳಿಗೆ ಪ್ರಧಾನಿ ಮೋದಿ ಗುರುವಾರ ಪ್ರಶಸ್ತಿ ಪ್ರದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ