ಚೀನಾ ರಾಯಭಾರಿ ಕಚೇರಿ ಮೇಲೆ ಉಗ್ರ ದಾಳಿ ಯತ್ನ


Team Udayavani, Nov 24, 2018, 6:00 AM IST

z-23.jpg

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿರುವ ಚೀನಾ ರಾಯಭಾರ ಕಚೇರಿ ಮೇಲೆ ಆತ್ಮಾಹುತಿ ದಾಳಿ ಯತ್ನವನ್ನು ಶುಕ್ರವಾರ ತಡೆಯಲಾಗಿದೆ. ಘಟನೆಯಲ್ಲಿ ಮೂವರು ಉಗ್ರರು ಹಾಗೂ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಉಗ್ರರು ಬಲೂಚ್‌ ಲಿಬರೇಶನ್‌ ಆರ್ಮಿಯವರು ಎಂದು ಘೋಷಿಸಿಕೊಂಡಿದ್ದು, ಚೀನೀಯರು ಬಲೂಚಿಸ್ತಾನದಲ್ಲಿ ಮಧ್ಯಪ್ರವೇಶಿಸು ವುದನ್ನು ಸಹಿಸುವುದಿಲ್ಲ ಎಂದಿದೆ. 

ಕ್ಲಿಫ್ಟನ್‌ ಪ್ರದೇಶದಲ್ಲಿ ರಾಯಭಾರ ಕಚೇರಿಯಿದ್ದು, ಶುಕ್ರವಾರ ಬೆಳಗ್ಗೆ ಇಲ್ಲಿಗೆ ನುಗ್ಗಲು ಮೂವರು ಉಗ್ರರು ಯತ್ನಿಸಿದ್ದರು. ಇವರನ್ನು ಗುಂಡಿಟ್ಟು ಹತ್ಯೆಗೈಯಲಾಗಿದ್ದು, ಭಾರಿ ಅವಘಡ ತಪ್ಪಿದಂತಾಗಿದೆ. ಒಂಬತ್ತು ಗ್ರೆನೇಡ್‌ಗಳು, ಕಲಾಶ್ನಿಕೋವ್‌ ಬುಲೆಟ್‌ಗಳು, ಮದ್ದುಗುಂಡುಗಳು ಹಾಗೂ ಸ್ಫೋಟಕಗಳನ್ನು ಭದ್ರತಾ ಪಡೆ ವಶ ಪಡಿಸಿಕೊಂಡಿದೆ. ಆಹಾರ, ಔಷಧ ವನ್ನೂ ಉಗ್ರರು ಹೊತ್ತು ತಂದಿದ್ದು, ರಾಯಭಾರ ಕಚೇರಿ ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿಸಿಕೊಳ್ಳುವ ಉದ್ದೇಶವನ್ನು ಹೊಂದಿದ್ದರು ಎನ್ನಲಾಗಿದೆ.

ವ್ಯಾಪಾರ ಒಪ್ಪಂದಕ್ಕೆ ಪ್ರತಿಯಾಗಿ ದಾಳಿ: ಚೀನಾಗೆ ಇತ್ತೀಚೆಗೆ ತೆರಳಿದ್ದಾಗ ಮಾಡಿಕೊಂಡ ಒಪ್ಪಂದದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ. ಪಾಕಿಸ್ತಾನದ ಅಭಿವೃದ್ಧಿ ಬೇಕಿಲ್ಲದ ವ್ಯಕ್ತಿಗಳು ನಡೆಸಿದ ಯೋಜಿತ ದಾಳಿ ಇದು ಎಂದಿದ್ದಾರೆ.

ಭದ್ರತೆ ಹೆಚ್ಚಿಸಿ ಎಂದ ಚೀನಾ: ದಾಳಿ ಹಿನ್ನೆಲೆಯಲ್ಲಿ ಚೀನಾದ ಸಿಪಿಇಸಿ ಯೋಜನೆ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿ ಎಂದು ಪಾಕಿಸ್ತಾನಕ್ಕೆ ಚೀನಾ ಆಗ್ರಹಿಸಿದೆ. ದಾಳಿ ಖಂಡಿಸಿರುವ ಚೀನಾ, ಪಾಕಿಸ್ತಾನ ಸದ್ಯ ತನಿಖೆ ನಡೆಸುತ್ತಿದ್ದು , ಈ ಘಟನೆಯಿಂದ ಕಾರಿಡಾರ್‌ ಯೋಜನೆಗೆ ಯಾವುದೇ ಬಾಧೆಯಿಲ್ಲ ಎಂದಿದೆ. ಖೈಬರ್‌ ಪಖು¤ಂಖಾ ಪ್ರದೇಶದಲ್ಲಿ ಚೀನಾ ನಿರ್ಮಿಸುತ್ತಿರುವ ರಸ್ತೆ ಹಾದುಹೋಗಲಿದ್ದು, ಇದಕ್ಕೆ ಬಲೂಚಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಉಗ್ರರ ಹಿಮ್ಮೆಟ್ಟಿಸಿದ ಮಹಿಳಾ ಅಧಿಕಾರಿ 
ಉಗ್ರರ ದಾಳಿ ವಿಫ‌ಲಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಹಿರಿಯ ಮಹಿಳಾ ಪೊಲೀಸ್‌ ಅಧಿಕಾರಿ ಸುಹಾಯ್‌ ಅಜೀಜ್‌ ತಲ್ಪುರ್‌! ಶಸ್ತ್ರ ಸಜ್ಜಿತ ಉಗ್ರರು ರಾಯಭಾರ ಕಚೇರಿಗೆ ಉಗ್ರರು ಪ್ರವೇಶಿಸಲು ಯತ್ನಿಸಿದಾಗ ಇವರು ಮಹತ್ವದ ಪಾತ್ರ ವಹಿಸಿ ದಾಳಿಯನ್ನು ತಡೆಯಲು ಯಶಸ್ವಿಯಾದರು. ಉಗ್ರರು ಮುಂಭಾಗದ ಗೇಟ್‌ ಬಳಿ ಬರುತ್ತಿದ್ದಂತೆಯ ಭದ್ರತಾ ಸಿಬ್ಬಂದಿಯೊಂದಿಗೆ ಗುಂಡಿನ ಚಕಮಕಿ ನಡೆಸಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಕಟ್ಟಡದ ಬಾಗಿಲನ್ನು ಮುಚ್ಚಿ ಉಗ್ರರು ಒಳನುಗ್ಗಲು ಸಾಧ್ಯವಾಗದಂತೆ ಸಹಾಯ್‌ ತಡೆದಿದ್ದಾರೆ.

ಸ್ಫೋಟಕ್ಕೆ 32 ಬಲಿ
ಕರಾಚಿಯ ಚೀನಾ ರಾಯಭಾರ ಕಚೇರಿ ಮುಂದೆ ದಾಳಿ ನಡೆದ ಬೆನ್ನಲ್ಲೇ ಪಾಕಿಸ್ತಾನದ ಖೈಬರ್‌ ಪಖು¤ಂಖ್ವಾ ಮಾರುಕಟ್ಟೆಯಲ್ಲಿ ಆತ್ಮಾಹುತಿ ದಾಳಿಕೋರರು ನಡೆಸಿದ ಪ್ರಬಲ ಸ್ಫೋಟಕ್ಕೆ ಮೂವರು ಪಾಕಿಸ್ತಾನಿ-ಸಿಖ್ಭರು ಸೇರಿದಂತೆ 32 ಮಂದಿ ಬಲಿ¿ಚÞಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶಿಯಾ ಧಾರ್ಮಿಕ ಕೇಂದ್ರದ ಸಮೀಪದಲ್ಲೇ ಇರುವ ಜುಮಾ ಬಜಾರ್‌ನಲ್ಲಿ ಈ ಸ್ಫೋಟ ನಡೆದಿದೆ. ತರಕಾರಿ ಸಾಗಾಟ ಮಾಡಲು ಬಳಸುತ್ತಿದ್ದ ಬೈಕ್‌ನಲ್ಲಿ ಸುಧಾರಿತ ಸ್ಫೋಟಕಗಳನ್ನು  ಸ್ಫೋಟಿಸಲಾಗಿದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.