ಮೋದಿ ಜೊತೆ ಮಾತುಕತೆಗೆ ಸಿದ್ಧ: ಇಮ್ರಾನ್
Team Udayavani, Nov 30, 2018, 11:53 AM IST
ಇಸ್ಲಾಮಾಬಾದ್: ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತುಕತೆಗೆ ಸಿದ್ಧ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗುರುವಾರ ಹೇಳಿದ್ದಾರೆ. ಹೊರದೇಶದಲ್ಲಿ ಉಗ್ರ ಚಟುವಟಿಕೆ ನಡೆಸಲು ನಮ್ಮ ನೆಲವನ್ನು ನಾವು ನೀಡುವುದು ನಮಗೆ ಅಗತ್ಯವಿಲ್ಲ ಎಂದೂ ಹೇಳಿದ್ದಾರೆ. ಬುಧವಾರ ಕರ್ತಾರ್ಪುರ ಕಾರಿಡಾರ್ಗೆ ಶಂಕುಸ್ಥಾಪನೆ ನೆರವೇರಿಸಿದ್ದ ಇಮ್ರಾನ್, ಭಾರತದ ಜೊತೆಗೆ ಸ್ನೇಹ ವೃದ್ಧಿಗೆ ಬಯಸಿದ್ದೇನೆ ಎಂದಿದ್ದರು.
ಪಾಕಿಸ್ಥಾನದ ಜನರ ಮನಸ್ಥಿತಿ ಬದಲಾಗಿದೆ. ಕಾಶ್ಮೀರ ವಿಚಾರದಲ್ಲಿ ಸೇನೆ ಮೂಲಕ ಪರಿಹಾರ ಸಾಧ್ಯವಿಲ್ಲ. ಲೋಕಸಭೆ ಚುನಾವಣೆಯ ನಂತರ ನಾವು ಭಾರತ ಸ್ನೇಹ ಹಸ್ತ ಚಾಚಬಹುದು ಎಂದು ನಿರೀಕ್ಷಿಸಿ ದ್ದೇವೆ. ಅಲ್ಲಿಯವರೆಗೆ ನಾವು ಕಾಯುತ್ತೇವೆ ಎಂದು ಭಾರತೀಯ ಪತ್ರಕರ್ತರೊಂದಿಗೆ ಮಾತುಕತೆ ವೇಳೆ ಹೇಳಿದ್ದಾರೆ. ಈ ಮಧ್ಯೆ ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ವಿರುದ್ಧ ಪಾಕಿಸ್ಥಾನ ಕ್ರಮ ಕೈಗೊಳ್ಳದ ಬಗ್ಗೆ ಕೇಳಿದ ಪ್ರಶ್ನೆಗೆ, ಹಫೀಜ್ ಸಯೀದ್ ವಿರುದ್ಧ ವಿಶ್ವಸಂಸ್ಥೆ ನಿಷೇಧ ಹೇರಿದೆ. ಈಗಾಗಲೇ ನಿರ್ಬಂಧ ವಿಧಿಸಲಾಗಿದೆ ಎಂದಿದ್ದಾರೆ. ಮುಂಬೈ ದಾಳಿಯ ಇತರ ಆರೋಪಿಗಳಿಗೆ ಸಂಬಂಧಿಸಿದಂತೆ ವಿಷಯ ನ್ಯಾಯಾಲಯದಲ್ಲಿದೆ. ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.
ಉಗ್ರನೊಂದಿಗೆ ಸಿಧು ಫೋಟೋ!: ಖಲಿಸ್ತಾನಿ ಉಗ್ರ ಗೋಪಾಲ್ ಸಿಂಗ್ ಚಾವ್ಲಾ ಜೊತೆಗೆ ಪಂಜಾಬ್ ಸಚಿವ ನವ್ಜೋತ್ ಸಿಧು ಕರ್ತಾರ್ಪುರ ಕಾರಿಡಾರ್ ಶಂಕು ಸ್ಥಾಪನೆ ವೇಳೆ ಫೋಟೋ ತೆಗೆಸಿಕೊಂಡಿದ್ದು ಈಗ ವಿವಾದವಾಗಿದೆ. ಅಲ್ಲಿನ ಜನರು ಪ್ರೀತಿ ತೋರಿಸಿದ್ದಾರೆ. ಪ್ರತಿ ನಿಮಿಷವೂ ಸಾವಿರಾರು ಫೋಟೋ ಕ್ಲಿಕ್ಕಿಸಲಾಗುತ್ತಿತ್ತು. ಈ ಮಧ್ಯೆ ಯಾರು ಚಾವ್ಲಾ ಎಂಬುದು ನನಗೆ ಗೊತ್ತೂ ಆಗಲಿಲ್ಲ ಎಂದು ಸಿಧು ಪ್ರತಿಕ್ರಿಯಿಸಿದ್ದಾರೆ. ಪಾಕಿಸ್ಥಾನದ ಸಿಖ್ ಗುರುದ್ವಾರ ಪ್ರಬಂಧಕ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಾವ್ಲಾ ತನ್ನ ಫೇಸ್ಬುಕ್ ಪುಟದಲ್ಲಿ ಈ ಫೋಟೋವನ್ನು ಪ್ರಕಟಿಸಿದ್ದರು. ಕೆಲವೇ ದಿನಗಳ ಹಿಂದೆ ಅಮೃತ ಸರದ ನಿರಂಕಾರಿ ಭವನದಲ್ಲಿ ನಡೆದ ದಾಳಿಯಲ್ಲಿ ಚಾವ್ಲಾ ಪಾತ್ರವೂ ಇತ್ತು ಎಂಬ ಶಂಕೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ