ಇನ್ಸ್ಪೆಕ್ಟರ್, ಯುವಕ ಹತ್ಯೆ ಪ್ರಕರಣ: ನಾಲ್ವರ ಬಂಧನ
Team Udayavani, Dec 5, 2018, 10:49 AM IST
ಬುಲಂದ್ಶಹರ್: ಉತ್ತರಪ್ರದೇಶದ ಬುಲಂದ್ ಶಹರ್ನಲ್ಲಿ ಸೋಮವಾರ ನಡೆದ ಹಿಂಸಾಚಾರದಲ್ಲಿ ಯುವಕ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಇಬ್ಬರ ಹತ್ಯೆ ಪ್ರಕರಣ ಸಂಬಂಧ ಮಂಗಳವಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಜರಂಗದಳ ಜಿಲ್ಲಾ ಸಂಚಾಲಕ ಯೋಗೇಶ್ ರಾಜ್ ಪ್ರಮುಖ ಆರೋಪಿ ಎಂದು ಪೊಲೀಸರು ಗುರುತಿಸಿದ್ದು, ಆತ ತಲೆಮರೆಸಿಕೊಂಡಿದ್ದಾನೆ. 27 ಮಂದಿಯ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖೀಸಲಾಗಿದ್ದು, 60 ಮಂದಿ ಅಪರಿಚಿತರ ವಿರುದ್ಧ ಕೇಸು ದಾಖಲಿಸಲಾಗಿದೆ. ಇನ್ನೊಂದೆಡೆ, ಈ ಘಟನೆಯು ರಾಜಕೀಯ ಪಕ್ಷಗಳ ನಡುವೆ ವಾಗ್ಯುದ್ಧಕ್ಕೂ ಕಾರಣವಾಗಿದೆ.
ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹಾಗೂ ಯುವಕ ಸುಮಿತ್ ಇಬ್ಬರೂ ಗುಂಡೇಟು ತಗುಲಿ ಮೃತಪಟ್ಟಿ ದ್ದಾರೆ. ಅವರ ಮೇಲೆ ಘನ ವಸ್ತು ಗಳಿಂದ ಹಲ್ಲೆಯನ್ನೂ ನಡೆಸಲಾಗಿದೆ ಎಂದು ಡಿಜಿಪಿ ಆನಂದ್ ಕುಮಾರ್ ತಿಳಿಸಿದ್ದಾರೆ.
ಇದೊಂದು ಸಂಚು: ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಮೃತ ಇನ್ಸ್ಪೆಕ್ಟರ್ ಸಿಂಗ್ ಅವರ ಸಹೋ ದರಿ ಸುನಿತಾ ಸಿಂಗ್, “ನನ್ನ ಸಹೋದರ ಸುಬೋಧ್ ಅವರು ದಾದ್ರಿಯಲ್ಲಿ ನಡೆದ ಅಖಾÉಕ್ ಹತ್ಯೆ ಪ್ರಕರಣದ ತನಿಖಾಧಿಕಾರಿ ಯಾಗಿದ್ದರು. ಹೀಗಾಗಿ ಅವರನ್ನು ಸಂಚು ರೂಪಿಸಿ ಪೊಲೀಸರೇ ಕೊಂದು ಹಾಕಿ ದ್ದಾರೆ’ ಎಂದು ಆರೋಪಿಸಿದ್ದಾರೆ. ಇದೇ ವೇಳೆ, ಇನ್ಸ್ಪೆಕ್ಟರ್ ಸುಬೋಧ್ಗೆ ಗುಂಡು ಹಾರಿಸಿದ್ದು ಪೊಲೀಸರೇ ಹೊರತು, ಬಜರಂಗದಳ ಕಾರ್ಯಕರ್ತ ರಲ್ಲ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.
ನೋಟಿಸ್: ಪ್ರಕರಣ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಉತ್ತರ ಪ್ರದೇಶ ಸರಕಾರ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.
ಧರ್ಮದ ಹೆಸರಲ್ಲಿ ಯಾವತ್ತೂ ಹಿಂಸೆಗಿಳಿಯಬೇಡ. ಒಬ್ಬ ಒಳ್ಳೆಯ ನಾಗರಿಕನಾಗು ಎಂದು ಆಗಾಗ ಅಪ್ಪ ನನಗೆ ಹೇಳುತ್ತಿದ್ದರು. ಈಗ ಹಿಂದೂ-ಮುಸ್ಲಿಂ ಜಗಳದಲ್ಲಿ ನನ್ನ ತಂದೆ ಪ್ರಾಣ ಕಳೆದುಕೊಳ್ಳ ಬೇಕಾಯಿತು. ನಾಳೆ ಯಾರ ಅಪ್ಪನ ಸರದಿಯೋ ಗೊತ್ತಿಲ್ಲ?
– ಅಭಿಷೇಕ್, ಮೃತ ಇನ್ಸ್ಪೆಕ್ಟರ್ ಪುತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ