ಸಿಂಧ್ನಲ್ಲಿ ದೇಗುಲ ಧ್ವಂಸ
Team Udayavani, Feb 7, 2019, 12:30 AM IST
ಇಸ್ಲಮಾಬಾದ್/ಕರಾಚಿ: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಮಾತ್ರವಲ್ಲದೆ ಪವಿತ್ರ ಗ್ರಂಥಗಳನ್ನು ಹಾಗೂ ವಿಗ್ರಹಗಳನ್ನು ಕಿಡಿಗೇಡಿಗಳು ಬೆಂಕಿಗೆ ಹಾಕಿ ಸುಟ್ಟಿದ್ದಾರೆ. ಪ್ರಧಾನಮಂತ್ರಿ ಇಮ್ರಾನ್ ಖಾನ್ ಘಟನೆಯನ್ನು ಖಂಡಿಸಿದ್ದು, ತನಿಖೆಗೆ ಆದೇಶ ನೀಡಿದ್ದಾರೆ. ಸಿಂಧ್ ಪ್ರಾಂತ್ಯದ ಖೈರ್ಪುರ್ ಜಿಲ್ಲೆಯ ಕುಂಬ್ ಎಂಬಲ್ಲಿ ಅಪರಿಚಿತ ಕಿಡಿಗೇಡಿಗಳು ಈ ದುಷ್ಕೃತ್ಯವೆಸಗಿದ್ದಾರೆ. ಇದೊಂದು ಖಂಡನಾರ್ಹ ಎಂದು ಟ್ವೀಟ್ ಮಾಡಿರುವ ಪ್ರಧಾನಿ ಇಮ್ರಾನ್ ಖಾನ್ ಸಿಂಧ್ ಪ್ರಾಂತ್ಯದ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥರನ್ನು ಕಾನೂನಿನ ಕ್ರಮಕ್ಕೆ ಒಳಪಡಿಸಬೇಕು. ಈ ಘಟನೆ ಕುರಾನ್ನ ಬೋಧನೆಗಳಿಗೆ ವಿರುದ್ಧವಾದದ್ದು ಎಂದು ಹೇಳಿದ್ದಾರೆ. ಘಟನೆ ಬಳಿಕ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ