ಭವಿಷ್ಯದಲ್ಲಿ ಫೇಸ್ಬುಕ್ ಆಗಲಿದೆಯೇ ‘ಸೀಕ್ರೆಟ್ ಬುಕ್’ !?


Team Udayavani, Mar 7, 2019, 3:15 AM IST

mark-zuckerberg-600.jpg

ಸ್ಯಾನ್ ಫ್ರಾನ್ಸಿಸ್ಕೋ: ಜನಪ್ರಿಯ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಖಾಸಗಿತನ ಮತ್ತು ಗೌಪ್ಯತೆಯ ಪಾಲನೆಯ ಕೊರತೆಯಿದೆ ಎಂಬ ಕೂಗು ವಿಶ್ವಾದ್ಯಂತ ಕೆಳಿಬರುತ್ತಿದೆ. ವಾಟ್ಸ್ಯಾಪ್ ಗೆ ಹೋಲಿಸಿದರೆ ಫೇಸ್ಬುಕ್ ನಲ್ಲಿ ಬಳಕೆದಾರರು ಹಂಚಿಕೊಳ್ಳುವ ಮಾಹಿತಿ ಬಟಾಬಯಲಾಗುವುದೇ ಹೆಚ್ಚು. ಈ ಎಲ್ಲಾ ವಿಚಾರಗಳನ್ನು ಅರ್ಥಮಾಡಿಕೊಂಡಿರುವ ಫೇಸ್ಬುಕ್ ಕಂಪೆನಿಯ ಮಾಲಕ ಮಾರ್ಕ್ ಝುಕರ್ ಬರ್ಗ್ ಅವರು, ಭವಿಷ್ಯದಲ್ಲಿ ಫೇಸ್ಬುಕ್ ಬಳಕೆದಾರರ ಖಾಸಗಿತನಕ್ಕೆ ಅತೀ ಹೆಚ್ಚಿನ ಆದ್ಯತೆಯನ್ನು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಫೇಸ್ಬುಕ್ ಮೇಸೇಜಿಂಗ್ ನಲ್ಲಿ ಎಲ್ಲಾ ಖಾಸಾ ಸಂವಹನಗಳಿಗೆ ಎಂಡ್ –ಟು – ಎಂಡ್ ಎನ್ಕ್ರಿಪ್ಷನ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾಗಿರುವ ಅಗತ್ಯತೆಯನ್ನು ಝುಕರ್ ಬರ್ಗ್ ಅವರು ಇತ್ತೀಚೆಗಿನ ತಮ್ಮ ಫೇಸ್ವುಕ್ ಫೋಸ್ಟ್ ನಲ್ಲಿ ಒತ್ತಿ ಹೇಳಿದ್ದಾರೆ. ಇದರಿಂದಾಗಿ ಯಾವುದೇ ಒಂದು ಪೋಸ್ಟ್ ವೈರಲ್ ಆಗಿ ಬಳಕೆದಾರರಿಗೆ ಸಿಗುವ ರೀತಿಯಲ್ಲಿ ಬದಲಾವಣೆಗಳುಂಟಾಗಬಹುದೆಂದೂ ಸಹ ಅವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಈ ರೀತಿಯ ತಂತ್ರಜ್ಞಾನದ ಅಳವಡಿಕೆಯು ನಿರ್ಧಿಷ್ಟ ಸಮುದಾಯ ಅಥವಾ ವರ್ಗವನ್ನು ಗುರಿಯಾಗಿಸಿ ನೀಡಲಾಗುವ ‘ಟಾರ್ಗೆಟ್ ಆ್ಯಡ್ಸ್’ ಆದಾಯಕ್ಕೂ ಕುತ್ತು ತರುವ ಸಾಧ್ಯತೆಗಳನ್ನು ಝುಕರ್ ಬರ್ಗ್ ಕಂಡುಕೊಂಡಿದ್ದಾರೆ. ಆದಾಗ್ಯೂ ಫೇಸ್ಬುಕ್ ಬಳಕೆದಾರರ ಖಾಸಗಿತನದ ರಕ್ಷಣೆಯ ಹಿತದೃಷ್ಟಿಯಿಂದ ಈ ಎಲ್ಲಾ ಸುರಕ್ಷಾ ಕ್ರಮಗಳನ್ನು ಮುಂಬರುವ ದಿನಗಳಲ್ಲಿ ಅಳವಡಿಸಿಕೊಳ್ಳಬೇಕಾಗಿರುವ ಅನಿವಾರ್ಯತೆಯನ್ನು ಝುಕರ್ ಬರ್ಗ್ ಒತ್ತಿ ಹೇಳಿದ್ದಾರೆ.

ಫೇಸ್ಬುಕ್ ತರಲುದ್ದೇಶಿಸಿರುವ ಈ ಬದಲಾವಣೆಯಿಂದಾಗಿ ಇನ್ನು ಮೆಸೆಂಜರ್ ಅಕೌಂಟ್ ಇರುವರು ವಾಟ್ಸ್ಯಾಪ್ ಬಳಕೆದಾರರೊಂದಿಗೆ ಹಾಗೂ ವಾಟ್ಸ್ಯಾಪ್ ಬಳಕೆದಾರರು ಮೆಸೆಂಜರ್ ಬಳಕೆದಾರರೊಂದಿಗೆ ಸಂವಹನ ನಡೆಸಲು ಸಾಧ್ಯವಾಗುತ್ತದೆ. ಮಾತ್ರವಲ್ಲದೆ ಬಳಕೆದಾರರು ತಮ್ಮ ಸಂವಹನಗಳನ್ನು (ಚಾಟ್ಸ್) ಎಷ್ಟು ಸಮಯ ಇರಿಸಿಕೊಳ್ಳಬೆಕೆಂಬುದನ್ನೂ ಸಹ ತಾವೇ ನಿರ್ಧರಿಸಬಹುದಾಗಿರುತ್ತದೆ. ‘ಜಾಲತಾಣ ಬಳಕೆದಾರರು ಭವಿಷ್ಯದಲ್ಲಿ ತಾವು ನಡೆಸುವ ಸಂವಹನಗಳು ಹೆಚ್ಚೆಚ್ಚು ಖಾಸಗಿಯಾಗಿರಬೇಕು ಮತ್ತು ಸುರಕ್ಷಿತವಾಗಿರಬೇಕು ಎಂದು ಬಯಸುತ್ತಾರೆ ಮತ್ತು ತಮ್ಮ ಮಾತುಕತೆಗಳು ಹೆಚ್ಚು ಸಮಯ ಅಲ್ಲೇ ಉಳಿಸಿಕೊಳ್ಳಲು ಬಯಸುವುದಿಲ್ಲ’ ಎಂಬ ಅಭಿಪ್ರಾಯವನ್ನೂ ಸಹ ಝುಕರ್ ಬರ್ಗ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.