ಐಪಿಎಲ್‌ ಹಬ್ಬಕ್ಕೆ ಕ್ಷಣಗಣನೆ ಆರಂಭ


Team Udayavani, Mar 20, 2019, 12:30 AM IST

e-18.jpg

ಹೊಸದಿಲ್ಲಿ: ಐಪಿಎಲ್‌ 12ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಮಾ. 23ರಿಂದ ಮೇ 5ರ ತನಕ ಒಟ್ಟಾರೆ 56 ಲೀಗ್‌ ಪಂದ್ಯಗಳು ದೇಶಾದ್ಯಂತ ಹಲವು ಕ್ರೀಡಾಂಗಣಗಳಲ್ಲಿ ನಡೆಯಲಿವೆ. ದೇಶದೆಲ್ಲೆಡೆ ಚುನಾವಣೆಯ ಬಿಸಿ ಇರುವುದರಿಂದ 3 ಪ್ಲೇಆಫ್, ಒಂದು ಫೈನಲ್‌ ಪಂದ್ಯಗಳ ದಿನಾಂಕವನ್ನು ಇನ್ನೂ ನಿಗದಿಪಡಿಸಿಲ್ಲ. ಶೀಘ್ರದಲ್ಲೇ ಉಳಿದ ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿಯೂ ಪ್ರಕಟಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ.

ಪ್ಲೇ ಆಫ್ ವೇಳಾಪಟ್ಟಿ ಪ್ರಕಟಿಸಿ ತೆಗೆದ ಬಿಸಿಸಿಐ
ಮಂಗಳವಾರ ಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿತ್ತು. ಆದರೆ ಕೊನೇ ಕ್ಷಣದಲ್ಲಿ ಕ್ವಾಲಿಫೈಯರ್‌ 1, ಎಲಿಮಿನೇಟರ್‌, ಕ್ವಾಲಿಫೈಯರ್‌ 2 ಹಾಗೂ ಫೈನಲ್‌ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಅಧಿಕೃತ ವೆಬ್‌ಸೈಟ್‌ನಿಂದ ತೆಗೆದುಹಾಕಿತು. ಒಟ್ಟಾರೆ 56 ಲೀಗ್‌ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಉಳಿಸಿಕೊಂಡಿದೆ. ಚುನಾ ವಣೆಯ ಹಿನ್ನೆಲೆಯಲ್ಲಿ ವೇಳಾಪಟ್ಟಿಯನ್ನು ಹೊಂದಿಸಲು ಆಗಿಲ್ಲ. ಜತೆಗೆ ಪಂದ್ಯಗಳಿಗೆ ಅಗತ್ಯವಿರುವ ಭದ್ರತೆ ಯನ್ನೂ ಒದಗಿಸುವುದಕ್ಕೆ ಸಾಕಷ್ಟು ಕಷ್ಟವಾಗುವುದರಿಂದ ಬಿಸಿಸಿಐ ಕೊನೆಯ 4 ಪಂದ್ಯ ಆಡಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಇದಕ್ಕೂ ಮೊದಲು ಲೋಕಸಭಾ ಚುನಾವಣೆಯ ದಿನಾಂಕದ ಜತೆಗಿನ ಸಂಘರ್ಷ ತಪ್ಪಿಸಲು ಬಿಸಿಸಿಐ ಮೊದಲು 17 ಪಂದ್ಯಗಳ ವೇಳಾಪಟ್ಟಿ (ಮಾ.23-ಎ.5) ಮಾತ್ರ ಪ್ರಕಟಿಸಿತ್ತು. ಮಾ.23ರಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಬಲಿಷ್ಠ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಎದುರಿಸಲಿದೆ. ಮಾಜಿ ನಾಯಕ ಎಂ.ಎಸ್‌.ಧೋನಿ ಹಾಗೂ ಹಾಲಿ ನಾಯಕ ವಿರಾಟ್‌ ಕೊಹ್ಲಿ ನಡುವಿನ ಮುಖಾಮುಖೀ ಕುತೂಹಲ ಕೆರಳಿಸಿದೆ.

ಬೆಂಗಳೂರಿನಲ್ಲಿ  ಆರ್‌ಸಿಬಿಗೆ 7 ಪಂದ್ಯ
ವಿರಾಟ್‌ ಕೊಹ್ಲಿ ನೇತೃತ್ವದ ಆರ್‌ಸಿಬಿ ತವರಿನಲ್ಲಿ ಒಟ್ಟಾರೆ 7 ಪಂದ್ಯ ಆಡಲಿದೆ. ತವರಿನಿಂದ ಹೊರಗೆ ಕೂಡ 7 ಪಂದ್ಯಗಳ‌ನ್ನು ಆಡಲಿದೆ. ಒಟ್ಟಾರೆ 14 ಪಂದ್ಯಗಳಲ್ಲಿ ಆರ್‌ಸಿಬಿ ಕಣಕ್ಕೆ ಇಳಿಯಲಿದೆ.  ಈ ಹಿಂದಿನ 11 ಆವೃತ್ತಿಗಳಲ್ಲಿ ಆರ್‌ಸಿಬಿ ಟ್ರೋಫಿ ಗೆಲ್ಲಲು ವಿಫ‌ಲವಾಗಿತ್ತು. ಈ ಸಲವಾದರೂ ಟ್ರೋಫಿ ಗೆಲ್ಲುವ ಛಲದೊಂದಿಗೆ ಆರ್‌ಸಿಬಿ ಆಡಬೇಕಿದೆ. ಆರ್‌ಸಿಬಿ ಕಳಪೆ ನಿರ್ವಹಣೆ ನೀಡಿ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿತ್ತು. ಇದೀಗ ಹೊಸ ಹುಮ್ಮಸ್ಸಿನೊಂದಿಗೆ ಕಣಕ್ಕೆ ಇಳಿಯುತ್ತಿರುವ ಕೊಹ್ಲಿ ಪಡೆ ಇತಿಹಾಸ ಬರೆಯಲು ಕಾತರದಿಂದ ಕಾಯುತ್ತಿದೆ. ಕಪ್‌ ನಮೆª ಎನ್ನುವುದನ್ನು ಸಾಬೀತುಪಡಿಸಲು ಕೊಹ್ಲಿ ಬಳಗದ ಮುಂದೆ ಒಂದೊಳ್ಳೆಯ ಅವಕಾಶ ಇದೆ.

ಮಾ. 22ಕ್ಕೆ ಬೆಂಗಳೂರಿಗೆ  ಐಪಿಎಲ್‌ ಟ್ರೋಫಿ
ಐಪಿಎಲ್‌ ಆರಂಭಕ್ಕೂ ಮೊದಲು ವಿವಿಧ ನಗರಗಳ ಕಡೆಗೆ ಟ್ರೋಫಿ ಸುತ್ತಾಟ ಆರಂಭವಾಗಲಿದೆ. ಮಾ. 22ರಂದು ಬೆಂಗಳೂರಿಗೆ ಟ್ರೋಫಿ ಆಗಮಿಸಲಿದೆ. ಈ ವೇಳೆ ಅಭಿಮಾನಿಗಳು ಟ್ರೋಫಿ ಜತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಅವಕಾಶ ಇದೆ. ಮಾ. 23ಕ್ಕೆ ಚೆನ್ನೈ, ಮಾ. 24ಕ್ಕೆ ಮುಂಬಯಿ, ಮಾ. 30ಕ್ಕೆ ಹೈದರಾಬಾದ್‌, ಎ. 6ಕ್ಕೆ ಜೈಪುರ ಹಾಗೂ ಎ.7ಕ್ಕೆ ಛತ್ತೀಸ್‌ಗಢ ನಗರಗಳಲ್ಲಿ ಟ್ರೋಫಿ ಪ್ರವಾಸ ನಡೆಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.