ನೀರವ್ ಮೋದಿಗೆ ಬೇಲ್ ಇಲ್ಲ, ಪೊಲೀಸ್ ಕಸ್ಟಡಿ, ಮಾ.29ಕ್ಕೆ ವಿಚಾರಣೆ
Team Udayavani, Mar 20, 2019, 1:48 PM IST
ಲಂಡನ್ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆಗೈದು ವಿದೇಶಕ್ಕೆ ಪಲಾಯನ ಮಾಡಿದ್ದ ಹಾಗೂ ಇಂದು ಬುಧವಾರ ಲಂಡನ್ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ನೀರವ್ ಮೋದಿಗೆ ಬೇಲ್ ಮಂಜೂರು ಮಾಡಲು ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ.
ನೀರವ್ ಮೋದಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವ ನ್ಯಾಯಾಲಯ, ಕೇಸಿನ ಮುಂದಿನ ವಿಚಾರಣೆಯನ್ನು ಮಾರ್ಚ್ 29ಕ್ಕೆ ನಿಗದಿಸಿದೆ.
ನೀರವ್ ಮೋದಿ ತನ್ನ ವಾದವನ್ನು ಕೋರ್ಟಿನಲ್ಲಿ ಮಂಡಿಸಲು ಸಮಯಾವಕಾಶ ಕೋರಿರುವುದಾಗಿ ಮೂಲಗಳು ತಿಳಿಸಿವೆ.
ನೀರವ್ ಮೋದಿ ಇಂದು ಪೊಲೀಸರ ಕೈಗೆ ಸಿಕ್ಕಿ ಬಿದ್ದದ್ದು ಒಬ್ಬ ಬ್ಯಾಂಕ್ ಕ್ಲರ್ಕ್ ನಿಂದಾಗಿ. ನೀರವ್ ಮೋದಿಯನ್ನು ಗುರುತಿಸಿದ ಆ ಬ್ಯಾಂಕ್ ಕ್ಲರ್ಕ್ ಒಡನೆಯೇ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದ.
ನೀರವ್ ಮೋದಿ ಬಂಧನಕ್ಕೆ ಈಗಾಗಲೇ ತಮ್ಮ ಕೈಯಲ್ಲಿ ಕೋರ್ಟ್ ವಾರೆಂಟ್ ಹಿಡಿದುಕೊಂಡಿದ್ದ ಲಂಡನ್ ಪೊಲೀಸರು, ಸಲೀಸಾಗಿ ಆತನನ್ನು ಬಂಧಿಸಿದರು.
ನೀರವ್ ಮೋದಿ ಪ್ರಾಮಾಣಿಕನಾಗಿರುವುದರಿಂದಲೇ ಆತ ಲಂಡನ್ ನಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದ ಎಂದು ಆತನ ವಕೀಲರು ಕೋರ್ಟಿಗೆ ತಿಳಿಸಿದರು.
ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ನೀರವ್ ಮೋದಿಯನ್ನು ಮಾರ್ಚ್ 29ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’