ನೀರವ್ ಮೋದಿಗೆ ಬೇಲ್ ಇಲ್ಲ, ಪೊಲೀಸ್ ಕಸ್ಟಡಿ, ಮಾ.29ಕ್ಕೆ ವಿಚಾರಣೆ
Team Udayavani, Mar 20, 2019, 1:48 PM IST
ಲಂಡನ್ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆಗೈದು ವಿದೇಶಕ್ಕೆ ಪಲಾಯನ ಮಾಡಿದ್ದ ಹಾಗೂ ಇಂದು ಬುಧವಾರ ಲಂಡನ್ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ನೀರವ್ ಮೋದಿಗೆ ಬೇಲ್ ಮಂಜೂರು ಮಾಡಲು ವೆಸ್ಟ್ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ.
ನೀರವ್ ಮೋದಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವ ನ್ಯಾಯಾಲಯ, ಕೇಸಿನ ಮುಂದಿನ ವಿಚಾರಣೆಯನ್ನು ಮಾರ್ಚ್ 29ಕ್ಕೆ ನಿಗದಿಸಿದೆ.
ನೀರವ್ ಮೋದಿ ತನ್ನ ವಾದವನ್ನು ಕೋರ್ಟಿನಲ್ಲಿ ಮಂಡಿಸಲು ಸಮಯಾವಕಾಶ ಕೋರಿರುವುದಾಗಿ ಮೂಲಗಳು ತಿಳಿಸಿವೆ.
ನೀರವ್ ಮೋದಿ ಇಂದು ಪೊಲೀಸರ ಕೈಗೆ ಸಿಕ್ಕಿ ಬಿದ್ದದ್ದು ಒಬ್ಬ ಬ್ಯಾಂಕ್ ಕ್ಲರ್ಕ್ ನಿಂದಾಗಿ. ನೀರವ್ ಮೋದಿಯನ್ನು ಗುರುತಿಸಿದ ಆ ಬ್ಯಾಂಕ್ ಕ್ಲರ್ಕ್ ಒಡನೆಯೇ ಪೊಲೀಸರಿಗೆ ಫೋನ್ ಮಾಡಿ ತಿಳಿಸಿದ್ದ.
ನೀರವ್ ಮೋದಿ ಬಂಧನಕ್ಕೆ ಈಗಾಗಲೇ ತಮ್ಮ ಕೈಯಲ್ಲಿ ಕೋರ್ಟ್ ವಾರೆಂಟ್ ಹಿಡಿದುಕೊಂಡಿದ್ದ ಲಂಡನ್ ಪೊಲೀಸರು, ಸಲೀಸಾಗಿ ಆತನನ್ನು ಬಂಧಿಸಿದರು.
ನೀರವ್ ಮೋದಿ ಪ್ರಾಮಾಣಿಕನಾಗಿರುವುದರಿಂದಲೇ ಆತ ಲಂಡನ್ ನಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದ ಎಂದು ಆತನ ವಕೀಲರು ಕೋರ್ಟಿಗೆ ತಿಳಿಸಿದರು.
ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ನೀರವ್ ಮೋದಿಯನ್ನು ಮಾರ್ಚ್ 29ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್ ಪುತಿನ್ ಆಯ್ಕೆ ಸಾಧ್ಯತೆ