ನೀರು ಕೇಳಿದವರಿಗೆ ಹಾಲು ನೀಡಿದ ಸಂಸ್ಕೃತಿ ನಮ್ಮದು
Team Udayavani, Aug 3, 2017, 8:16 AM IST
ಶಹಾಪುರ: ಕಾಯಕ ಸಂಸ್ಕೃತಿ ಆಚರಣೆ ಮೂಲಕ ಕೆಲಸದಲ್ಲಿ ಸಂತೃಪ್ತಿ ಜೊತೆಗೆ ದೈವಾನುಭೂತಿ ಹೊಂದಿದ ಹಾಲುಮತ ಸಮಾಜ ನೀರು ಕೇಳಲು ಬಂದವರಿಗೆ ಹಾಲುಕೊಟ್ಟು ಬೆಳೆಸಿದ ಕೀರ್ತಿ ಸಲ್ಲುತ್ತದೆ ಎಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಕಲಬುರಗಿ ವಿಭಾಗದ ಪೀಠಾಧ್ಯಕ್ಷ ಸಿದ್ಧರಾಮಾನಂದ ಮಹಾಸ್ವಾಮೀಜಿ ಹೇಳಿದರು.
ನಗರದ ಹಳೆಪೇಟೆಯ ವಗ್ಗರಾಯಣ್ಣ ಶರಣನ ಸನ್ನಿಧಾನದ ಆವರಣದಲ್ಲಿ 9 ನೇ ವರ್ಷದ ಹಸಿರು ಮತ್ತು ಹಾಲುಮತ ಸಂಸ್ಕೃತಿ ಜಾಗೃತಿ ಯಾತ್ರೆಗೆ ಚಾಲನೆ ನೀಡಿ, ನಂತರ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದ ಆರಾಧ್ಯ ದೇವರಾದ ಶ್ರೀ ಮಾಳಿಂಗರಾಯ, ಬೀರ ದೇವರು, ದಾರ್ಶನಿಕ ಕನಕದಾಸರಂಥ ದಾಸ ಶ್ರೇಷ್ಠರ ಪರಂಪರೆ ಹೊಂದಿದ ಹಾಲುಮತ ಸಮುದಾಯ ಮನುಷ್ಯ ಸಂಸ್ಕೃತಿ ಕಾಳಜಿ ಮತ್ತು ಜೀವ ಸಂಕುಲದ ಉಸಿರಾಗಿರುವ ನಿಸರ್ಗ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಮನುಷ್ಯತ್ವಕ್ಕಾಗಿ ಸಂಸ್ಕೃತಿ ಮುಖ್ಯವಾಗಿದ್ದು, ಪ್ರತಿಯೊಬ್ಬರು ಇಂದಿನ ಹೊಸ ಸಮಾಜದಲ್ಲಿ ಸದಾಚಾರ ಸಂಪನ್ನರಾಗಬೇಕು. ಕ್ಷಮಾಗುಣ, ಸ್ಪಂಧನಾಗುಣ, ಪ್ರೀತಿ ವಿಶ್ವಾಸ ಮತ್ತು ನಂಬಿದ ದೈವ ದೇವರಲ್ಲಿ ಶ್ರದ್ಧೆ ಭಕ್ತಿಯನಿಟ್ಟು ಮುನ್ನಡೆಯಬೇಕು ಎಂದರು. ಇದೇ ಸಂದರ್ಭದಲ್ಲಿ ಶ್ರೀಗಳು ಸಸಿಗಳನ್ನು ವಿತರಿಸಿ ಅವುಗಳ ರಕ್ಷಣೆ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕನಕಗುರು ಪೀಠದ ನಿಂಗಬೀರ ದೇವರು, ನಗರದ ಸಿದ್ಧರಾಮಯ್ಯ ಗುರುವಿನ, ಕುರುಬ ಸಮಾಜದ ಹಿರಿಯ ಮುಖಂಡರಾದ ಬಸವರಾಜ ವಿಭೂತಿಹಳ್ಳಿ, ಮಾಜಿ ಎಂ.ಎಲ್ .ಸಿ ಅಮಾತೆಪ್ಪ ಕಂದಕೂರ, ರೈತ ಮುಖಂಡ ಶರಣಪ್ಪ ಸಲಾದಪುರ, ಡಾ| ಭೀಮಣ್ಣ ಮೇಟಿ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಸಾಯಬಣ್ಣ ಹೊರಕೇರಿ, ಮುಖಂಡ ವಿಠಲ ವಗ್ಗಿ, ಶಾಂತಗೌಡ ನಾಗನಟಿಗಿ, ಯಮನಪ್ಪ ಭಪ್ಪರಗಿ, ಮಲ್ಲಿಕಾರ್ಜುನ ಕಂದಕೂರು, ಅಯ್ಯಣ್ಣ ಇನಾಂದಾರ, ಮಾನಪ್ಪ ಅರಿಕೇರಿ
ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೂ ಮುಂಚೆ ನಗರದ ಸಿ.ಬಿ.ಕಮಾನದಿಂದ ರಾಯಣ್ಣ ದೇವರ ಸನ್ನಿಧಾನದವರೆಗೂ ಯಾತ್ರಾ ಮೆರವಣಿಗೆ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ