ಯೋಜನೆಗಳ ಸದ್ಬಳಕೆಗೆ ಸಲಹೆ
Team Udayavani, Jan 12, 2018, 2:57 PM IST
ಶಹಾಪುರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹೈ. ಕ ಭಾಗದ ಮಹಿಳೆಯರ ಆಶಾ ಕಿರಣವಾಗಿದೆ. ಉದ್ಯೋಗ ನೀಡುವ ಮೂಲಕ ಮಹಿಳೆಯರ ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದು ಮಾಜಿ ಜಿಪಂ ಸದಸ್ಯ ಬಸನಗೌಡ
ಸುಬೇದಾರ ಹೇಳಿದರು.
ತಾಲೂಕಿನ ಸಗರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಹೈನುಗಾರಿಕೆ ಮತ್ತು ಸ್ವ- ಉದ್ಯೋಗ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾದ ಧರ್ಮಸ್ಥಳ ಸಂಸ್ಥೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಕೆಲಸವಿಲ್ಲದೆ ಬದುಕಿನ ಭರವಸೆ ಕಳೆದುಕೊಂಡಿದ್ದ ಅನೇಕ ಕುಟುಂಬಗಳಿಗೆ ಆಸರೆಯಾಗಿದೆ. ಕರಕುಶಲ, ಕೈಗಾರಿಕೆ ಸೇರಿದಂತೆ ಹೈನುಗಾರಿಕೆ ಇತರೆ ಮಹಿಳೆಯರ ಕೆಲಸಗಳಿಗೆ ಸೂಕ್ತ ತರಬೇತಿ ನೀಡಿ, ವ್ಯಾಪಾರ ವಹಿವಾಟು ಮಾಡಲು ಪ್ರೋತ್ಸಾಹ ಧನ ನೀಡುತ್ತಿದೆ. ಸಂಸ್ಥೆಯ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದರು.
ಯೋಜನಾಧಿಕಾರಿ ಮೋಹನ ಕೆ. ಯೋಜನೆಯ ಉದ್ದೇಶ ಮತ್ತು ಕ್ಷೇತ್ರದ ಹಿನ್ನೆಲೆ ಬಗ್ಗೆ ಸವಿವರವಾಗಿ ತಿಳಿಸಿದರು.
ಪಶು ಸಂಗೋಪನ ಇಲಾಖೆ ಅಧಿಕಾರಿ ಡಾ| ವಿಜಯಕುಮಾರ ಹೈನುಗಾರಿಕೆಯ ಲಾಭ ಕುರಿತು ಮಾಹಿತಿ ನೀಡಿದರು. ಸಮಾಜ ಸೇವಕಿ ಸರಸ್ವತಿ ಬಿರಾದಾರ ಮಹಿಳೆಯ ಸ್ವಾವಲಂಬನೆ ಬಗ್ಗೆ ಮಾತನಾಡಿದರು. ಲಕ್ಷ್ಮೀಕಾಂತ ಕುಲಕರ್ಣಿ ಸೋಲಾರ ಅಳವಡಿಕೆ ಕುರಿತು ಮಾಹಿತಿ ನೀಡಿದರು. ಗ್ರಾಪಂ ಅಧ್ಯಕ್ಷ ಮಾನಪ್ಪ ವಠಾರ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಮುಖಂಡರಾದ ಸಿದ್ದನಗೌಡ ಸುಬೇದಾರ, ಭೀಮರಾಯ ಸೇರಿ ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ಪ್ರಕಾಶ ಜಿ. ನಿರೂಪಿಸಿದರು. ಮಲ್ಲಿಕಾರ್ಜನ ಸ್ವಾಗತಿಸಿದರು. ಗ್ರಾಮದ ಸೇವಾ ಪ್ರತಿನಿಧಿಗಳಾದ ಶಿಲ್ಪಾ, ಶ್ರೀದೇವಿ, ಸೇರಿದಂತೆ ಗ್ರಾಮದ ಮಹಿಳೆಯರು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ