ನಾಲ್ಕು ಮತಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಗಳ ಘೋಷಣೆ


Team Udayavani, Feb 19, 2018, 5:23 PM IST

yad-1.jpg

ಯಾದಗಿರಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದು, ಮೊದಲ ಪಟ್ಟಿಯಲ್ಲಿಯೇ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿದ್ದು, ಜಿಲ್ಲಾ ರಾಜಕೀಯ
ವಲಯದಲ್ಲಿ ಸಂಚಲನ ಮೂಡಿದೆ.

ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ. ಕುಮಾರಸ್ವಾಮಿ ರಾಜ್ಯದ 123 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಜಿಲ್ಲೆಯ ಯಾದಗಿರಿ, ಗುರುಮಠಕಲ್‌, ಶಹಾಪುರ ಮತ್ತು ಸುರಪುರ ಮತಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿವೆ.
 
ಯಾದಗಿರಿ ವಿಧಾನಸಭಾ ಕ್ಷೇತ್ರದಿಂದ ಎ.ಸಿ. ಕಾಡ್ಲೋರ, ಗುರುಮಠಕಲ್‌ ಕ್ಷೇತ್ರದಿಂದ ನಾಗನಗೌಡ ಕಂದಕೂರ, ಶಹಾಪುರ ಕ್ಷೇತ್ರದಿಂದ ಅಮೀನರೆಡ್ಡಿ ಯಾಳಗಿ ಮತ್ತು ಸುರಪುರ ಕ್ಷೇತ್ರದಿಂದ ರಾಜಾ ಕೃಷ್ಣಪ್ಪ ನಾಯಕ ಅಭ್ಯರ್ಥಿಗಳಾಗಿ ಹೊರ ಹೊಮ್ಮಿದ್ದಾರೆ.
 
ಯಾದಗಿರಿ ಮತಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಸಿ. ಕಾಡ್ಲೂರ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಅವರು ಒಮ್ಮೆ ಬಿಎಸ್‌ಪಿಯಿಂದ, ಎರಡು ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಆಗಿರುವ ಹನುಮೇಗೌಡ ಬಿರನಕಲ್‌ ಸಹ ಆಕಾಂಕ್ಷಿಯಾಗಿದ್ದರು. ಆದರೆ ಎ.ಸಿ. ಕಾಡ್ಲೂರ ಅವರಿಗೆ ಟಿಕೆಟ್‌ ಲಭಿಸಿದೆ. ಪ್ರತಿ ಬಾರಿ ಚುನಾವಣೆಯಲ್ಲಿ ಎ.ಸಿ. ಕಾಡ್ಲೂರ ಮೂರನೇ ಸ್ಥಾನ ಪಡೆದುಕೊಂಡಿದ್ದು, ಈ ಬಾರಿ ಅವರ ಆಯ್ಕೆ ಕಾಯ್ದು ನೋಡಬೇಕಿದೆ.

ಗುರುಮಠಕಲ್‌ ಮತಕ್ಷೇತ್ರದ ನಾಗನಗೌಡಕಂದಕೂರ ಲಿಂಗಾಯತ ರೆಡ್ಡಿ ಸಮುದಾಯಕ್ಕೆಸೇರಿದ್ದು, ಕಳೆದ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಪುನಃ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದು, ಇವರು ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಇವರಿಗೆ ಯಾರು ಪ್ರತಿಸ್ಪರ್ಧಿ ಇರಲಿಲ್ಲ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ವಿರುದ್ಧ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಗೆಲುವಿಗಾಗಿ ಪಣತೊಟ್ಟಿದ್ದಾರೆ.

ಶಹಾಪುರ ಮತಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಅಮೀನರೆಡ್ಡಿ ಯಾಳಗಿ ಲಿಂಗಾಯತ ರೆಡ್ಡಿ ಸಮುದಾಯಕ್ಕೆ ಸೇರಿದ್ದು, ಇವರು ಈ ಮೊದಲು ಕಾಂಗ್ರೆಸ್‌ ಮಾಜಿ ಸಚಿವ ಶರಣ ಬಸಪ್ಪಗೌಡ ದರ್ಶನಾಪುರ ಅವರ ಒಡನಾಡಿಯಾಗಿ ಗುರುತಿಸಿಕೊಂಡಿದ್ದರು. ಈಚೆಗೆ ಜೆಡಿಎಸ್‌ ಸೇರ್ಪಡೆಯಾಗಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಇವರಿಗೆ ಪ್ರತಿಸ್ಪರ್ಧಿ ಇರಲಿಲ್ಲ. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಶಹಾಪುರದಲ್ಲಿ ಬಿಜೆಪಿ, ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಪ್ರತಿ ಸ್ಪರ್ಧಿಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. 

ಸುರಪುರ ಮತಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿರುವ ರಾಜಾ ಕೃಷ್ಣಪ್ಪ ನಾಯಕ ಎಸ್ಟಿ ಸಮುದಾಯ ನಾಯಕ ಜನಾಂಗಕ್ಕೆ ಸೇರಿದ್ದಾರೆ. ಇವರು ಸುರಪುರ ಸಂಸ್ಥಾನದವರಾಗಿದ್ದು, ಯುವ ರಾಜರಾಗಿ ಗುರುತಿಸಿಕೊಂಡಿದ್ದಾರೆ. ಈ ಮೊದಲು ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷದಲ್ಲಿದ್ದರು. ಈಚೆಗೆ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು.
 
ಜೆಡಿಎಸ್‌ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಮದನಗೋಪಾಲ ನಾಯಕ ಮಗ ರಾಜಾ ಹರ್ಷ ವರ್ಧನ್‌, ರಾಜನಕೊಳ್ಳೂರಿನ ಯಮುನಪ್ಪ ದೊರೆ ಅವರು ಆಕಾಂಕ್ಷಿಗಳಾಗಿದ್ದರು. ಆದರೆ ಜೆಡಿಎಸ್‌ ಅಭ್ಯರ್ಥಿಯಾಗಿ ರಾಜಾ ಕೃಷ್ಣಪ್ಪ ನಾಯಕವರಿಗೆ ಟಿಕೆಟ್‌ ನೀಡಿದ್ದು, ಈ ಬಾರಿ ಚುನಾವಣೆಯಲ್ಲಿ ಸುರಪುರ ಮತಕ್ಷೇತ್ರದಲ್ಲಿ ಚುನಾವಣಾ ಕಣ
ರಂಗೇರಲಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದರಿಂದ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿದೆ. 

ರಾಜೇಶ ಪಾಟೀಲ್‌ ಯಡ್ಡಳ್ಳಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.