ನವಶಕ್ತಿ ಸಮಾವೇಶ ಯಶಸ್ಸಿಗೆ ಕರೆ


Team Udayavani, Feb 23, 2018, 5:28 PM IST

yad-5.jpg

ಸುರಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ನೇತೃತ್ವದಲ್ಲಿ ನಗರದ ಸಜ್ಜನ್‌ ಮೈದಾನಾನದಲ್ಲಿ ಫೆ. 25ರಂದು ನಡೆಯುವ ನವಶಕ್ತಿ ಸಮಾವೇಶ ಯಶಸ್ವಿಗೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಬೇಕು ಎಂದು ಯಾದಗಿರಿ ಬಿಜೆಪಿ ಜಿಲ್ಲಾ ಉಸ್ತುವಾರಿ ಮತ್ತು ಶಿಸ್ತು ಸಮಿತಿ ಅಧ್ಯಕ್ಷ ಎನ್‌. ಶಂಕ್ರಪ್ಪ ಹೇಳಿದರು.

ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮೂರು ದಿನಗಳವರಗೆ ಅಮಿತ ಶಾ ಪಕ್ಷದ ಬೂತ್‌ ಮಟ್ಟದ ಅನೇಕ ಸಭೆಗಳನ್ನು ನಡೆಸಲಿದ್ದಾರೆ. ಈ ವೇಳೆ ರೈತರು, ಕಾರ್ಮಿಕರೊಂದಿಗೆ ಚರ್ಚಿಸಲಿದ್ದಾರೆ. ನವಶಕ್ತಿ ಸಮಾವೇಶದ ಯಶಸ್ವಿಗೆ ಎಲ್ಲಾ ಸಿದ್ಧತೆಗಳು ನಡೆದಿವೆ
ಎಂದು ತಿಳಿಸಿದರು. 

ರವಿವಾರ ಬೆಳಗ್ಗೆ 11:00 ಗಂಟೆಗೆ ಅಮಿತ್‌ ಶಾ ಸುರಪುರಕ್ಕೆ ಆಗಮಿಸುವರು. ಹೆಲಿಪ್ಯಾಡಿನಿಂದ ನೇರವಾಗಿ ಸಮವೇಶದ
ವೇದಿಕೆ ತೆರಳಿ ಸುರಪುರ-ಯಾದಗಿರಿ ಕ್ಷೇತ್ರಗಳ ಬೂತ್‌ ಮಟ್ಟದ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಚುನಾವಣೆಯ ಕೆಲ ತಂತ್ರ ಮತ್ತು ಗೆಲುವಿನ ರೂಪರೇಷಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಮಾವೇಶದಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಬಿಜೆಪಿ ಪ್ರಮುಖರು ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ಹೇಳಿದರು.

ನಂತರ ಅವರು ಯಾನಾಗುಂದಿಗೆ ತೆರಳಿ ಮಾತೆ ಮಾಣೀಕೇಶ್ವರಿಯ ದರ್ಶನ ಪಡೆಯುವರು. ಗುರುಮಠಕಲ್‌ ದಲ್ಲಿ ಟೋಕರಿ, ಕೂಲಿ ಕಬ್ಬಲಿಗ ಗಂಗಾಮತ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳುವರು. ನಂತರ ಕಲಬುರಗಿಗೆ ತೆರಳುವರು. ಫೆ. 26ರಂದು ಕಲಬುರಗಿಯಲ್ಲಿ ಮೂರು ಜಿಲ್ಲೆಗಳ 19 ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶ ನಡೆಸಲಿದ್ದಾರೆ ಎಂದು ಹೇಳಿದರು. 

ಮಾಜಿ ಸಚಿವ ರಾಜುಗೌಡ, ಚಂದ್ರಶೇಖರಗೌಡ ಮಾಗನೂರ, ಅಮರಣ್ಣ ಹುಡೇದ್‌, ಹೆಚ್‌.ಸಿ. ಪಾಟೀಲ್‌, ಕೊತ್ತ ಅಶೋಕಗೌಡ, ಶ್ರೀನಿವಾಸರಾವ್‌, ಪ್ರಮುಖರಾದ ಡಾ| ವೀರಬಸವಂತರಡ್ಡಿ ಮುದ್ನಾಳ, ಯಲ್ಲಪ್ಪ ಕುರುಕುಂದಿ, ಬಸವರಾಜ ಸ್ಥಾವರಮಠ, ಡಾ| ಭೀಮಣ್ಣ ಮೇಟಿ, ಮೇಲಪ್ಪ ಗುಳಗಿ ಇದ್ದರು. 

ಬಿಜೆಪಿ ಜಯ ನಿಶ್ಚಿತ ಕೊಲೆ, ಭ್ರಷ್ಟಾಚಾರ, ಹಲ್ಲೆ ಸೇರಿದಂತೆ ಹಗರಣಗಳ ಸರಮಾಲೆ ಹೊತ್ತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ ದುರಾಡಳಿತ ದಿಂದ ರಾಜ್ಯದ ಜನತೆ ರೋಸಿಹೋಗಿದೆ. ಕಾಂಗ್ರೆಸ್‌ನ್ನು ಕಿತ್ತು ಒಗೆಯಲು ರಾಜ್ಯದ ಜನತೆ ಸಂಕಲ್ಪ ಮಾಡಿದ್ದಾರೆ. ಅಭಿವೃದ್ಧಿಗಾಗಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಜನತೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಗೆಲುವು ನಿಶ್ವಿ‌ತ ಎಂದು ಎನ್‌. ಶಂಕ್ರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.