ಜಿಲ್ಲಾಧಿಕಾರಿಗಳಿಂದ ಮತಯಂತ್ರ, ವಿವಿಪ್ಯಾಟ್ ಪರಿಶೀಲನೆ
Team Udayavani, Feb 26, 2018, 5:27 PM IST
ಯಾದಗಿರಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಿಂದ ಮತಯಂತ್ರಗಳು ಜಿಲ್ಲೆಗೆ ತರಲಾಗಿದ್ದು, ಸಿಸಿ ಕ್ಯಾಮರಾ, ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಸುರಕ್ಷಿತವಾಗಿಡಲಾಗಿದೆ.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ 1500 ಬ್ಯಾಲೆಟ್ ಯೂನಿಟ್, 1300 ಕಂಟ್ರೋಲ್ ಯೂನಿಟ್ಗಳನ್ನು ಸಂಗ್ರಹಿಸಿಡಲಾಗಿದೆ. ಇನ್ನೂ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಬಳಸಲಾಗುತ್ತಿದೆ. ಈ ವಿವಿಪ್ಯಾಟ್ಗಳನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ಶಾಖೆಯಲ್ಲಿ ಸಂಗ್ರಹಿಸಿಡಲಾಗಿದೆ.
ಈ ಬಾರಿ ಚುನಾವಣೆಯಲ್ಲಿ ವಿವಿ ಪ್ಯಾಟ್ನಲ್ಲಿ ಮತದಾರರು ಯಾರಿಗೆ ಮತ ಹಾಕಿದ್ದೇವೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಬೆಂಗಳೂರಿನ ಜಾಲಹಳ್ಳಿ ಬಳಿಯಲ್ಲಿರುವ ಭಾರತ ಎಲೆಕ್ಟ್ರಿಕಲ್ ಲಿಮಿಟೆಡ್ ವತಿಯಿಂದ 1420 ಯಂತ್ರಗಳು ಜಿಲ್ಲೆಗೆ ಬಂದಿದ್ದು, ಪೊಲೀಸ್ ಸುರ್ಪದಿಯಲ್ಲಿ ಬಿಗಿ ಭದ್ರತೆ ನೀಡಲಾಗಿದೆ. ವಿವಿ ಪ್ಯಾಟ್ಗಳ ಭದ್ರತೆಗಾಗಿ ಮೂರು ಜನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಉತ್ತರ ಪ್ರದೇಶದಿಂದ ಬಂದಿರುವ ಮತ ಯಂತ್ರಗಳ ಭದ್ರತೆಗಾಗಿ ಆರು ಜನ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆಗಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಮತಯಂತ್ರಗಳು ಬಂದಿವೆ. ಶೀಘ್ರದಲ್ಲಿಯೇ ಭಾರತ ಎಲೆಕ್ಟ್ರಿಕಲ್ ಲಿಮಿಟೆಡ್ನ ತಂಡದ ಸದಸ್ಯರು ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲೆಯ ವಿವಿಧ ಪಕ್ಷದ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಮತಯಂತ್ರಗಳ ಪರಿಶೀಲನೆ ನಡೆಸಲಾಗುವುದು. ಕೆಟ್ಟು ಹೋಗಿರುವ ಮತಯಂತ್ರಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜೆ. ಮುಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ