ಗುರುಮಠಕಲ್‌ ಮತಕ್ಷೇತ್ರದ ತಾಂಡಾಗಳ ಅಭಿವೃದ್ಧಿಗೆ ಒತ್ತು: ಚಿಂಚನಸೂರ


Team Udayavani, Apr 17, 2018, 5:42 PM IST

yad-1.jpg

ಯಾದಗಿರಿ: ಕಳೆದ 10 ವರ್ಷಗಳ ಅಧಿಕಾರದ ಅವಧಿಯಲ್ಲಿ ಗುರುಮಠಕಲ್‌ ಮತಕ್ಷೇತ್ರದ 70 ತಾಂಡಾಗಳಿಗೆ ಅಗತ್ಯ
ಮೂಲಭೂತ ಸೌಕರ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ ಎಂದು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಬಾಬುರಾವ ಚಿಂಚನಸೂರ ಹೇಳಿದರು.

ಗುರುಮಠಕಲ್‌ ಮತಕ್ಷೇತ್ರದ ಹೊಸಳ್ಳಿ ತಾಂಡಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಅನುಕೂಲಕರ ಯೋಜನೆ ಜಾರಿಗೆ ತಂದಿದೆ. ಅಲ್ಲದೇ ಬದ್ಧತೆಯಿಂದ ಅನುಷ್ಠಾನಗೊಳಿಸಿದೆ. ಅದರಲ್ಲಿ ವಿಶೇಷವಾಗಿ ಬಂಜಾರ ಸಮಾಜದ ಪ್ರಗತಿಗೆ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆಗೊಳಿಸಿದೆ. ಕಾಂಗ್ರೆಸ್‌ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಸಹಕಾರದಿಂದ ಬರುವ ದಿನಗಳಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಬಂಜಾರ ಸಮಾಜದ ಧರ್ಮಗುರು ಸೇವಲಾಲರ ಜಯಂತಿಯನ್ನು ಸರ್ಕಾರದಿಂದಲೇ ನಾಡಿನಾದ್ಯಂತಹ ಆಚರಣೆಗೆ ನಿರ್ಧಾರ ಕೈಗೊಳ್ಳಲಾಯಿತು. ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನಪೀಠ ಸ್ಥಾಪನೆ ಮಾಡಿರುವುದರಿಂದ ಬಡವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಾಂಗ ಮಾಡಲು ಅನುಕೂಲವಾಯಿತು. ಅರಣ್ಯ ಭಾಗಗಳಲ್ಲಿ ವಾಸಿಸುವ ಜನತೆಗೆ ಅಗತ್ಯ ಭೂಮಿ ಮಂಜೂರು
ಮಾಡುವ ಮೂಲಕ ಅವರ ಬದುಕಿಗೆ ಭದ್ರತೆ ಒದಗಿಸಿದೆ. ಕಾರಣ ಮತದಾರರು ಇನ್ನು ಹೆಚ್ಚು ಸೇವೆ ಮಾಡಲು ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್‌ ಪಕ್ಷ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಪಕ್ಷದ ಮುಖಂಡ ನರೇಂದ್ರ ರಾಠೊಡ ಮಾತನಾಡಿ, ಸಮಾಜದ ಬಗ್ಗೆ ಕಾಳಜಿ ಹಾಗೂ ಅಭಿವೃದ್ಧಿ ಚಿಂತನೆ ಹೊಂದಿರುವ ಬಾಬುರಾವ ಚಿಂಚನಸೂರ ಅವರಿಗೆ ಎಲ್ಲರೂ
ಚುನಾವಣೆಯಲ್ಲಿ ಮತ ನೀಡುವ ಮೂಲಕ ಶಕ್ತಿ ತುಂಬಬೇಕು ಎಂದು ಹೇಳಿದರು. ರಾಮುನಾಯಕ ತಾಂಡಾ, ಸೌದಾಗರ ತಾಂಡಾ, ಸಮಣಾಪುರ ತಾಂಡಾ, ಬಾಚವಾರ ತಾಂಡಾ ಹಾಗೂ ಕಂಚಗಾರಹಳ್ಳಿಗೆ ತೆರಳಿ ಮತಯಾಚಿಸಿದರು. ತಾಪಂ ಅಧ್ಯಕ್ಷ ಬಾಷು ರಾಠೊಡ, ಕಿಶನ ಚವ್ಹಾಣ, ಚಂದ್ರಕಾಂತ ಕವಲ್ದಾರ, ಪರಶುರಾಮ ಚವ್ಹಾಣ, ಅರ್ಜುನಪ್ಪ ಬಾಚವಾರ, ತಿಪ್ಪಣ್ಣ ಯಾದವ, ಶಾಂತಪ್ಪ ರಾಠೊಡ, ಮನ್ನು ಚವ್ಹಾಣ, ಜಯರಾಮ ದೇವಜೀ ಇದ್ದರು. 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.