ಮತದಾನ ಬಹಿಷ್ಕಾರ ನಿರ್ಧಾರ ಅಚಲ
Team Udayavani, Apr 17, 2018, 5:47 PM IST
ಸೈದಾಪುರ: ಮತದಾನ ನಿಮ್ಮ ಹಕ್ಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರವಿರಬೇಡಿ ಎಂದು ಗ್ರಾಮಸ್ಥರ ಮನವೊಲಿಸಲು ಮುಂದಾದ ಗುರುಮಠಕಲ್ ಮತಕ್ಷೇತ್ರದ ಚುನಾವಣಾಧಿಕಾರಿ ಪರಮೇಶ್ವರ ನಾಯ್ಕ ಅವರ ಮಾತಿಗೆ ಒಪ್ಪದ ಬದ್ದೇಪಲ್ಲಿ ಗ್ರಾಮಸ್ಥರು ಬೇಡಿಕೆ ಈಡೇರುವವರೆಗೆ ಮತದಾನ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಬದ್ದೇಪಲ್ಲಿಗೆ ರವಿವಾರ ರಾತ್ರಿ ಭೇಟಿ ನೀಡಿದ ಚುನಾವಣಾ ಅಧಿಕಾರಿ ಪರಮೇಶ್ವರ ನಾಯ್ಕ ಅವರು ಸಭೆ ನಡೆಸಿ ಮತದಾನ ಮಾಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬದ್ದೇಪಲ್ಲಿ ಗ್ರಾಮಸ್ಥರು, ನಮ್ಮ ಗ್ರಾಮ ಹಾಗೂ ತಾಂಡಾವನ್ನು ನೂತನ ಗುರುಮಠಕಲ್ ತಾಲೂಕಿಗೆ ಸೇರಿಸಿರುವುದನ್ನು ಕೈಬಿಟ್ಟು ಯಾದಗಿರಿ ತಾಲೂಕಿನಲ್ಲಿಯೇ ಮುಂದುವರಿಸಬೇಕು. ಅಲ್ಲಿಯವರೆಗೂ ತಾವು ಮತದಾನ ಮಾಡುವುದೇ ಇಲ್ಲ ಎಂದು ಖಡಕ್ ಆಗಿ ಉತ್ತರಿಸಿದರು. ಗ್ರಾಮೀಣ ಜನರಿಗೆ ಆಡಳಿತ ಕೇಂದ್ರ ಸಮೀಪದಲ್ಲಿದ್ದು ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಹೊಸ ತಾಲೂಕು ರಚನೆ ಮಾಡಲಾಗುತ್ತದೆ.
ಆದರೆ ದೂರದ ಮೂಲೆಯಲ್ಲಿರುವ ಯಾವುದೋ ಗ್ರಾಮವನ್ನು ಹೊಸ ತಾಲೂಕಿಗೆ ಸೇರಿಸಿ ಅಂತಲ್ಲ. ಕೇವಲ ಗ್ರಾಪಂ ಆಧಾರವಾಗಿಟ್ಟುಕೊಂಡು ಬದ್ದೇಪಲ್ಲಿ ಗ್ರಾಮ ಹಾಗೂ ತಾಂಡಾವನ್ನು ಗುರುಮಠಕಲ್ ತಾಲೂಕಿಗೆ ಸೇರಿಸಿದ ಜಿಲ್ಲಾಡಳಿತ ಆಕ್ಷೇಪಣೆ ಅರ್ಜಿ ಸಲ್ಲಿಸಿದರೂ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಧರಣಿ ಸತ್ಯಾಗ್ರಹ ಮಾಡಿದರೂ ಸ್ಪಂದನೆ ನೀಡಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದರು.
ಚುನಾವಣಾ ಅಧಿಕಾರಿ ಪರಮೇಶ್ವರ ನಾಯ್ಕ ಅವರು ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಸಾಕಷ್ಟು ಮನವಿ ಮಾಡಿದರೂ ಜನರು ತಮ್ಮ ನಿಲುವು ಬದಲಿಸಲಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ