ಸುಭದ್ರ ಆಡಳಿತಕ್ಕಾಗಿ ಕಾಂಗ್ರೆಸ್‌ ಬೆಂಬಲಿಸಿ


Team Udayavani, May 1, 2018, 3:56 PM IST

yad-2.jpg

ಕಕ್ಕೇರಾ: ರಾಜ್ಯದಲ್ಲಿ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನಡೆಸಿ ಕಾಂಗ್ರೆಸ್‌ ಸರ್ಕಾರ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಹೀಗಾಗಿ ಈ ಹಿಂದೇ ಐದು ವರ್ಷದಲ್ಲಿ ರಾಜ್ಯ ಕಂಡರಿಯದ ಮೂರು ಜನ ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸಿದ ಪಕ್ಷಕ್ಕೆ ಜನ ಬೆಂಬಲಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ರಾಜಾ ವೆಂಕಟಪ್ಪ ನಾಯಕ ಪರ ಬಹಿರಂಗ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಿಂದೆ ಅಧಿಕಾರಲ್ಲಿದ್ದವರು ವಿವಿಧ ಹಗರಣಗಳಲ್ಲಿ ಸಿಕ್ಕು ಜೈಲು ಅನುಭವಿಸಿದ್ದು ಬಿಟ್ಟರೆ ಏನೂ ಮಾಡಿಲ್ಲ. ಅಭಿವೃದ್ಧಿ ಮಾತ್ರ ಶೂನ್ಯ. ಹೀಗಾಗಿ ನಾನು ಮುಖ್ಯಮಂತ್ರಿಯಾಗಿ ಸುದೀರ್ಘ‌ ಐದು ವರ್ಷ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ಚಲಾಯಿಸಿದ್ದು ನನಗೆ ಸಲ್ಲುತ್ತದೆ. ಹೀಗಾಗಿ ನನ್ನ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗಿಲ್ಲ ಎಂದರು.

ಪ್ರಣಾಳಿಕೆಗಳಲ್ಲಿ ಜನರಿಗೆ ನೀಡಿದ್ದ 165 ಭರವಸೆಯಗಳನ್ನು ಈಡೇರಿಸಲಾಗಿದೆ. ನಮ್ಮದು ನುಡಿದಂತೆ ನಡೆಯುವ ಸರಕಾರವಾಗಿದೆ. ಬಿಜೆಪಿಯವರು ಪದೇ ಪದೇ ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಇಂಥವರ ಕೈಯಲ್ಲಿ ಅಧಿಕಾರ ನೀಡಿದರೆ ರಾಜ್ಯವನ್ನೇ ಲೂಟಿ ಮಾಡುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗ ಎಸ್‌ಸಿಪಿ, ಟಿಎಸ್‌ಪಿ ಯೋಜನೆಡಿಯಲ್ಲಿ 22 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಅದೇ ಯೋಜನೆಡಿಯಲ್ಲಿ 89 ಸಾವಿರ ಕೋಟಿ ರೂ. ರೈತರ ಜಮೀನುಗಳಿಗೆ ನೀರಾವರಿ ಇನ್ನಿತರಕ್ಕಾಗಿ ಖರ್ಚು ಮಾಡಲಾಗಿದೆ. ರೈತರ ಜಮೀನುಗಳಿಗೆ ನೀರಾವರಿಗಾಗಿ 50 ಸಾವಿರ ಕೋಟಿ
ರೂ. ಖರ್ಚು ಮಾಡಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.

ಹಸಿವು ಮುಕ್ತ, ಗುಡಿಸಲು ಮುಕ್ತ, ನವ ಕರ್ನಾಟಕ ನಿರ್ಮಾಣವೇ ನಮ್ಮ ಕಾಂಗ್ರೆಸ್‌ ಸರಕಾರದ ಉದ್ದೇಶವಾಗಿದೆ. ಮೋದಿ, ಶಾ ಅವರು ಬಂದರೂ ನನಗೆ ಏನೂ ಮಾಡಲಾಗುವುದಿಲ್ಲ. ರಾಜ್ಯದಲ್ಲಿ ಮತ್ತೂಮ್ಮೆ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬರಲಿದೆ. ಸುರಪುರ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮುತ್ಸದ್ಧಿ ನಾಯಕ, ಅವರನ್ನು ಮತ್ತೂಮ್ಮೆ ಬೆಂಬಲಿಸಿ
ಬಹುಮತದಿಂದ ಆರಿಸಿ ತಂದಾಗ ನನಗೆ ಮತಷ್ಟು ಬಲ ಬರುತ್ತದೆ ಎಂದರು.

ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಚಿವ ರಾಜುಗೌಡ ನನ್ನನ್ನು ಸೋಲಿಸಲು ಪ್ರಚಾರಕ್ಕೆ ಹೋಗಿದ್ದಾರೆ. ರಾಜುಗೌಡ್ರೇ ನಿಮ್ಮಂತಹ
ನೂರು ಜನ ಬಂದರೂ ನನಗೆ ಸೋಲಿಸಲು ಆಗುವುದಿಲ್ಲ. ನಿಮ್ಮ ಮಾತು ಕೇಳಲು ಜನರು ಹುಚ್ಚರಲ್ಲ. ಮೊದಲು ಸುರಪುರ ಕೇತ್ರದಲ್ಲಿ ಗೆದ್ದು ಬನ್ನಿ.
ಸಿದ್ದರಾಮಯ್ಯ, ಮುಖ್ಯಮಂತ್ರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿಯಿಂದ ವಂಚಿತರಾಗಬೇಕಾಗುವ ಕಾಲ ದೂರವಿಲ್ಲ. ಸಂವಿಧಾನವನ್ನು ತಿದ್ದುಪಡಿ ಮಾಡುವ ಹುನ್ನಾರ ಬಿಜೆಪಿ ನಡೆಸಿದ್ದು, ಇವರಿಗೆ ಮತದಾನದ ಮೂಲಕ ತಕ್ಕಪಾಠ ಕಲಿಸಬೇಕು. ಧರ್ಮ ಧರ್ಮದ ನುಡುವೆ ಕಲಹ ಸೃಷ್ಟಿಸುತ್ತಾರೆ. ಜಾತಿ ಬೇಧ, ತಾರತಮ್ಯ ತಂದು ಸಮಾಜವನ್ನು ಹೊಡೆದಾಳುವ ನೀತಿ ಬಿಜೆಪಿಯವರು ಅನುಸರಿಸುತ್ತಿದ್ದಾರೆ. ರಾಜ್ಯದಲ್ಲಿ, ದೇಶದಲ್ಲಿ ಹಿಂದೂ, ಮುಸ್ಲಿಂ ಒಂದೇ ಎಂಬ ತತ್ವ, ಸಿದ್ಧಾಂತ, ಸಂವಿಧಾನ ಸಂರಕ್ಷಣೆಯೊಂದಿಗೆ ಆಡಳಿತ ನಡೆಸುವ ಪಕ್ಷ ಎಂದರೆ ಕಾಂಗ್ರೆಸ್‌. ಹೀಗಾಗಿ ಮತ್ತೂಮ್ಮೆ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ.
ಸಿ.ಎಂ. ಇಬ್ರಾಹಿಂ, ಕೇಂದ್ರದ ಮಾಜಿ ಸಚಿವ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.