ವರಿಷ್ಠರು ಒಪ್ಪಿದರೆ ಬಾದಾಮಿಯಲ್ಲಿ ಪ್ರಚಾರ
Team Udayavani, May 4, 2018, 5:48 PM IST
ಕಕ್ಕೇರಾ: ರಾಜ್ಯದಲ್ಲಿ ಕಾಂಗ್ರೆಸ್ಗೆ ಸಂಪೂರ್ಣ ಹಿನ್ನೆಡೆಯಾಗಲಿದೆ. ಒಂದು ವೇಳೆ ಬಿಜೆಪಿ ವರಿಷ್ಠರು ಅನುಮತಿ ನೀಡಿದರೆ ಬಾದಾಮಿಗೆ ಹೋಗಿ ಪ್ರಚಾರ ಮಾಡಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ರಾಜುಗೌಡ ಹೇಳಿದರು.
ಪಟ್ಟಣದ ಪುರಸಭೆ ವ್ಯಾಪ್ತಿಯ ನಿಂಗಾಪುರ ಗ್ರಾಮದಲ್ಲಿ ಮತಯಾಚನೆ ವೇಳೆ ಕಾಂಗ್ರೆಸ್ ಕೆಲ ಕಾರ್ಯಕರ್ತರನ್ನು
ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ
ಕರ್ನಾಟಕ ನಿರ್ಮಾಣವಾಗಲಿದೆ. ಕಾಂಗ್ರೆಸ್ನವರು ಐದು ವರ್ಷಗಳಲ್ಲಿ ಬರೀ ಸುಳ್ಳು ಆಶ್ವಾಸನೆಗಳನ್ನೇ ನೀಡುತ್ತಾ
ಬರುತ್ತಿದ್ದಾರೆ ಎಂದು ಹರಿಹಾಯ್ದರು.
ಈ ಹಿಂದೇ ಅಧಿಕಾರದಲ್ಲಿದ್ದಾಗ ತಾಲೂಕಿನ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ
ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಜನರ ಸೇವೆಗೆ ಸದಾ ಸಿದ್ದ ಎಂದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜ ಸ್ಥಾವರಮಠ, ಕಲೀಲ ಅಹ್ಮದ್ ದಖನಿ, ರಾಮಯ್ಯ ಶೆಟ್ಟಿ, ನಿಂಗಣ್ಣ ಚಿಂಚೋಡಿ, ದ್ಯಾವಣ್ಣ ಮಲಗಲದಿನ್ನಿ, ಅಮರಣ್ಣ ಹುಡೇದ್, ಮಲ್ಲೇಶ ಪಾಟೀಲ್, ಪರಮಣ್ಣ ಪೂಜಾರಿ, ದಶರಥ ಆರೇಶಂಕರ, ಸೋಮಣ್ಣನಾಯಕ ಹವಾಲ್ದಾರ್, ಭೀಮಣ್ಣಗೌಡ ಹಳ್ಳಿ, ಅಯ್ಯಣ್ಣ ಚಿಂಚೋಡಿ, ಭೀಮನಗೌಡ ಬೈಲಾಪುರ, ಚಿದಾನಂದ ಕಮತಗಿ, ತಿರುಪತಿ ಪವಾರ್, ಶಾಂತಪ್ಪ ತಾಳಿಕೋಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ