ಪ್ರಯತ್ನದಿಂದ ವ್ಯಕ್ತಿತ್ವ ವಿಕಾಸ
Team Udayavani, May 17, 2018, 5:19 PM IST
ಶಹಾಪುರ: ನಿರಂತರ ಪ್ರಯತ್ನ, ಸತತ ಅಧ್ಯಯನ, ಸಮಯ ಪ್ರಜ್ಞೆ ವಿದ್ಯಾರ್ಥಿಗಳು ಅಳವಡಿಸಿಕೊಂಡಾಗ ಅದರಿಂದ ವ್ಯಕ್ತಿತ್ವದ ವಿಕಾಸ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಟಿ.ಪಿ. ದೊಡ್ಮನಿ ಹೇಳಿದರು.
ನಗರದ ಹಳಪೇಟೆಯಲ್ಲಿನ ಜ್ಞಾನಗಂಗೋತ್ರಿ ಶಾಲೆಯಲ್ಲಿ ಬಾಲಭವನ ಸೂಸೈಟಿ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿ ಕಾರಿಗಳ ಕಾರ್ಯಾಲಯ ಶಹಾಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಸಗರನಾಡು ಸೇವಾ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ
ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ಬೇಸಿಗೆ ಶಿಬಿರ ಅತ್ಯಂತ ಪೂರಕವಾಗಿದೆ. ಶಿಬಿರದಲ್ಲಿ ದಿನನಿತ್ಯ ಹಲವಾರು ಕ್ರಿಯಾತ್ಮಕ ಚಟುವಟಿಕೆ ವ್ಯಕ್ತಪಡಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನಳ್ಳಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಭವಿಷ್ಯ ಹೊಂದಲು ಆರೋಗ್ಯಕರ ಹವ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಬದುಕಿನಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಬಹುದು.
ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಅನೇಕ ಕರಕುಶಲ ವಸ್ತುಗಳ ತಯಾರಿಕೆ, ಮಣ್ಣಿನ ಆಟಿಕೆ ತಯಾರಿಕೆ, ಸಂಗೀತ, ನೃತ್ಯ ಜತೆಗೆ ಸಾಮೂಹಿಕ ಗೀತೆ ಪ್ರಸ್ತುತ ಪಡಿಸಲು ಅವಕಾಶವಿದೆ ಎಂದು ಹೇಳಿದರು.
ಹಿರಿಯರಾದ ಮಧ್ವಾಚಾರ್ಯ ಸಗರ, ಕೋನೇರಾಚಾರ್ಯ ಸಗರ, ಅನಂತರಾವ ದೇಶಪಾಂಡೆ ಇದ್ದರು. ಶಿಬಿರಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ನೃತ್ಯ, ಸಂಗೀತ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಸಿದ್ದಮಾಡಿದ ವಿವಿಧ ಕರಕುಶಲ ವಸ್ತುಗಳನ್ನು ಅಧಿಕಾರಿಗಳು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
MUST WATCH
ಹೊಸ ಸೇರ್ಪಡೆ
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ