ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ


Team Udayavani, Jun 2, 2018, 3:46 PM IST

yad-1.jpg

ಕಕ್ಕೇರಾ: ಅಭಿವೃದ್ಧಿಯಲ್ಲಿ ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಅಧಿಕಾರಿಗಳಿಗೆ ಎಚ್ಚರಿಸಿದರು.

ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತುರ್ತು ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಕೇವಲ ವೇತನಕ್ಕೆ ಸಿಮೀತವಾಗದೆ ಜನಪರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಪರ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ಕರ್ತವ್ಯ ನಿಭಾಯಿಸಬೇಕು. ಬಯಲು ಶೌಚಾಲಯ ಮುಕ್ತವಾಗಿಸಲು ಪ್ರತಿಯೊಂದು ಕುಟುಂಬಕ್ಕೆ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಬೇಕಿದ್ದು, ನಿರೀಕ್ಷಿತ ಗುರಿ ತಲುಪಲು ಪ್ರತಿ ಫಲಾನುಭವಿಗ ವರದಿ ತಯಾರಿಸಿ ಕೊಟ್ಟರೆ (ಎನ್‌ಜಿಒ) ಮೂಲಕ ಶೌಚಾಲಯ ನಿರ್ಮಿಸಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ವೈಯಕ್ತಿಕ ಶೌಚಾಲಯ ನಿರ್ಮಾಣದ ನಂತರ ಸಮುದಾಯ ಶೌಚಾಲಯ ನಿರ್ಮಿಸಲಾಗುವುದು, ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿಸಲು ಈಗಾಗಲೇ ಸ್ಥಳಾವಕಾಶಕ್ಕಾಗಿ ಪ್ರಯತ್ನ ನಡೆಸಲಾಗುತ್ತಿದ್ದು, ಮುಂದಿನ ದಿನಮಾನಗಳಲ್ಲಿ ಈ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. 

ರೈತರ ಹಿತದೃಷ್ಟಿಯಿಂದ ಈ ಭಾಗದ ಉಪ ಕಾಲುವೆಗಳ ದುರಸ್ತಿ ಹಾಗೂ ಪುನರುಶ್ಚೇತನ ಕಾಮಗಾರಿ ಹಾಗೂ ಬಾಕಿ ಉಳಿದ ಕಾಲುವೆ ಕಾಮಗಾರಿಗಳ ಕುರಿತು ಸಮಗ್ರ ಮಾಹಿತಿ ನೀಡುವುದರೊಂದಿಗೆ ಅವುಗಳ ವರದಿ ನೀಡಬೇಕು ಎಂದು ಕೆಬಿಜೆಎನ್ನೆಲ್‌ ಎಂಜನಿಯರ್‌ ಶೀಲಾರ್‌ ಅವರಿಗೆ ಸೂಚಿಸಿದರು.

ಪುರಸಭೆ ವ್ಯಾಪ್ತಿಯ ವಾರ್ಡ್‌ ಅಥವಾ ಪ್ರಮುಖ ದೊಡ್ಡಿಗಳಿಗೆ ಇಲ್ಲಿಯವರೆಗೆ ವಿದ್ಯುತ್‌ ಸಂಪರ್ಕವೇ ಹೊಂದಿಲ್ಲ. ವಿದ್ಯುತ್‌ ಸಂಪರ್ಕದಲ್ಲಿ ವಿಳಂಬ ನೀತಿ ಅನುಸರಿಸದೆ ಕೂಡಲೇ ವಿದ್ಯುತ್‌ ಸಂಪರ್ಕ ಕಲ್ಪಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು. 

ಸ್ಲಂ ನಿವಾಸಿಗರಿಗೆ ಪ್ರತೇಕವಾಗಿ ಆಶ್ರಯ ಮನೆಗಳು ಕಲ್ಪಿಸಲಾಗುತ್ತಿದ್ದು, ಬಹುತೇಕವಾಗಿ ಈ ಭಾಗದಲ್ಲಿ ಕಡು ಬಡವರು ಗುಡಿಸಲುಗಳಲ್ಲಿಯೇ ಹೆಚ್ಚಾಗಿರುವುದರಿಂದ ಅಂತಹ ವಾರ್ಡ್‌ ಅಥವಾ ದೊಡ್ಡಿಗಳನ್ನು ಸ್ಲಂ ನಿವಾಸಿಗಳೆಂದು ಗುರುತಿಸಿ ಸಮಗ್ರ ವರದಿ ತಕ್ಷಣವೇ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಆದಪ್ಪ ಸುರಪುರಕರ್‌ ಅವರಿಗೆ ಸೂಚಿಸಿದರು.

ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಗ್ರಾಮೀಣ ಪ್ರದೇಶ ರಸ್ತೆ ತೀರಾ ಹದಗೆಟ್ಟಿದ್ದು, ಅಭಿವೃದ್ಧಿಯಾಗಬೇಕಾಗಿರುವ ರಸ್ತೆಗಳ ಮಾಹಿತಿಯೊಂದಿಗೆ ಪ್ರಸ್ತಾವನೆಯ ವರದಿ ಸಲ್ಲಿಸುವಂತೆ ಲೋಕೊಪಯೋಗಿ ಅಧಿಕಾರಿಗಳಿಗೆ ಹೇಳಿದರು.

ಕೃಷ್ಣಾನದಿ ತೀರದ ನೀಲಕಂಠರಾಯನ ಗಡ್ಡಿ ಸೇತುವೆ ಈಗಾಗಲೇ ನಿರ್ಮಾಣದ ಹಂತದಲ್ಲಿದೆ. ಇದು ತೀರಾ ಚಿಕ್ಕದಾಗಿದ್ದು, ವಾಹನಗಳು ಸಂಚರಿಸುವ ರೀತಿಯಲ್ಲಿ ಸೇತುವೆಯನ್ನು ಅಗಲೀಕರಣಕ್ಕೆ ಈಗಾಗಲೇ ನಿರ್ಧರಿಸಲಾಗಿದೆ. ಈ ಭಾಗದ ಸಾಮಾನ್ಯ ಜನರಿಗೆ ಆಶ್ರಯ ವಸತಿಗಳನ್ನು ಹೆಚ್ಚು ಕಲ್ಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಮುಂದೆ ನಡೆಯುವ ಯಾವುದೇ ಸಭೆಗಳು ಸದಸ್ಯರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಕಾಮಗಾರಿಗಳ ಬಗ್ಗೆ ಸಮಗ್ರ ಚರ್ಚೆ ಆಗುವುದರೊಂದಿಗೆ ಅರ್ಥಪೂರ್ಣವಾಗಿ ಸಭೆ ನಡೆಸಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ದಶರಥ ಆರೇಶಂಕರ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಉಪಾಧ್ಯಕ್ಷೆ ಮಲ್ಲಮ್ಮ ಪವಡೆಪ್ಪ ಮ್ಯಾಗೇರಿ, ಪುರಸಭೆ ಸದಸ್ಯರಾದ ಭೀಮನಗೌಡ ಹಳ್ಳಿ, ರಾಜು ಹವಾಲ್ದಾರ, ನಿಂಗಾನಾಯ್ಕ ರಾಠೊಡ, ಪರಶುರಾಮ ಪೂಜಾರಿ, ಬಸಯ್ಯಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.