ಯಜ್ಞದಿಂದ ಮನೋಭಿಲಾಷೆ ಈಡೇರಿಕ


Team Udayavani, Jun 4, 2018, 12:29 PM IST

ray-2.jpg

ಯಾದಗಿರಿ: ಅಧಿಕ ಮಾಸದಲ್ಲಿ ಯಜ್ಞ ಮಾಡುವುದರಿಂದ ಭಗವಂತ ಸಂತೃಪ್ತನಾಗಿ ಪ್ರಕೃತಿಯ ಸಮತೋಲನ ಕಾಪಾಡುವುದರ ಜತೆಗೆ ಸಕಲ ಜೀವಿಗಳ ಮನೋಭಿಲಾಷೆಗಳನ್ನು ಈಡೇರಿಸುತ್ತಾನೆ ಎಂದು ಪಂಡಿತ ನರಸಿಂಹಾಚಾರ್ಯ ಪುರಾಣಿಕ ನುಡಿದರು.

ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಉತ್ತರಾಧಿಮಠದ ಶ್ರೀ ಸತ್ಯಾತ್ಮ ತೀರ್ಥರ ಜನ್ಮ ಶತಮಾನೋತ್ಸವ, ಅಧಿಕ ಮಾಸದ ನಿಮಿತ್ತ ಲೋಕ ಕಲ್ಯಾಣಾರ್ಥವಾಗಿ ಶ್ರೀ ವಿಶ್ವ ಮಧ್ವಮಹಾ ಪರಿಷತ್‌ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಶ್ರೀ ಲಕ್ಷ್ಮೀ ನರಸಿಂಹ ಯಜ್ಞ, ಜ್ಞಾನಸತ್ರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವರ್ಷದ 12 ತಿಂಗಳು ವಿಶೇಷತೆ ಹೊಂದಿದ್ದರೂ, ಪ್ರತಿ ಮೂರು ವರ್ಷಕ್ಕೊಮ್ಮೆ ಬರುವ ಈ ಅಧಿಕ ಮಾಸ ವಿಶಿಷ್ಟತೆಯಿಂದ ಕೂಡಿದೆ. ಈ ತಿಂಗಳನ್ನು ಭಗವಂತನ ಮಾಸ ಎನ್ನಲಾಗುತ್ತದೆ. ಈ ಮಾಸದಲ್ಲಿ ಕೈಗೊಳ್ಳುವ ಪ್ರತಿಯೊಂದು ಧಾರ್ಮಿಕ ಕಾರ್ಯ, ಮಾಡುವ ದಾನದಿಂದ ಭಗವಂತ ತೃಪ್ತನಾಗಿ ಮೋಕ್ಷ ಪ್ರಾಪ್ತಿ ಮಾಡುತ್ತಾನೆ. ಅದಕ್ಕಾಗಿ ಈ ತಿಂಗಳಲ್ಲಿ ಭಾಗವತ, ಭಗವದ್ಗೀತೆ ಶ್ರವಣ, ಗಾಯತ್ರಿ ಮಂತ್ರ ಜಪ ಮಾಡುವುದು ಅವಶ್ಯಕವಾಗಿದೆ ಎಂದರು.

ಪ್ರತಿದಿನವೂ ಕೈಲಾದಷ್ಟು ದಾನ ಮಾಡಬೇಕು ಎಂದು ಮನು ಸೇರಿದಂತೆ ಅನೇಕ ಮಹನೀಯರು ಹೇಳಿದ್ದಾರೆ. ಆದರೆ ಇವತ್ತಿನ ಕಾಲದಲ್ಲಿ ಪ್ರತಿನಿತ್ಯ ದಾನ ಮಾಡಲು ಆಗುವುದಿಲ್ಲ. ಅದಕ್ಕಾಗಿ ಅಧಿಕ ಮಾಸದಲ್ಲಿ ದಾನ ಮಾಡಬೇಕು. ವಿಶೇಷವಾಗಿ ಏನೇ ದಾನ ಮಾಡಿದರೂ ಅದು 33 ಸಂಖ್ಯೆ ಹೊಂದಿರಬೇಕು ಎಂದು ವಿವರಿಸಿದರು. ಬೆಳಗ್ಗೆ ವಿಷ್ಣು ಸಹಸ್ರನಾಮ, ಸುಂದರ ಕಾಂಡ, ದೇವರ ಸ್ತೋತ್ರಗಳನ್ನು ಸಾಮೂಹಿಕವಾಗಿ ಪಠಿಸಲಾಯಿತು. ಪುರುಷರು ಗಾಯತ್ರಿ ಮಂತ್ರ, ಮಹಿಳೆಯರು ಭಗವಂತನ ನಾಮ ಜಪ ಮಾಡಿದರು. ನಂತರ ಐದು ಪ್ರತ್ಯೇಕ ಹೋಮ ಮಾಡಿ ಪೂರ್ಣಾಹುತಿ ನೀಡಲಾಯಿತು.

ಪಂಡಿತ ಸತ್ಯಭೋದಾಚಾರ್ಯ ಯರಗೋಳ, ರಾಘವೇಂದ್ರಾಚಾರ್ಯ ಬಳಿಚಕ್ರ, ಶ್ರೀಕಾಂತಾಚಾರ್ಯ ಹಂದರಕ್ತಿ, ಪವನಾಚಾರ್ಯ ಗಾಜರಕೋಟ ಹೋಮದ ನೇತೃತ್ವ ವಹಿಸಿದ್ದರು. ಸಂಜೆ ವಿವಿಧ ಭಜನಾ ಮಂಡಳಿಯಿಂದ 33 ದೇವರನಾಮವಳಿ, ದೇವರಿಗೆ 33 ನಮಸ್ಕಾರ, ಪ್ರದಕ್ಷಣೆ ಹಾಗೂ ದೀಪೋತ್ಸವ ಆಚರಿಸಲಾಯಿತು.

ಮೂರು ದಿನಗಳ ಕಾಲ ನಡೆದ ಭಾಗವತ ಪುರಾಣವನ್ನು ಸಂಪನ್ನಗೊಳಿಸಲಾಯಿತು. ಧಾರ್ಮಿಕ ಗ್ರಂಥಗಳಿಗೆ ಪುಷ್ಪಾರ್ಚನೆ ಮಾಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.