ಭರದಿಂದ ಸಾಗಿದ ಪುಸ್ತಕ-ಸಮವಸ್ತ್ರ ಸರಬರಾಜು


Team Udayavani, Jun 8, 2018, 2:23 PM IST

yad-2.jpg

ಸುರಪುರ: ಪ್ರತಿ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಗಳಿಗೆ ಸರಬರಾಜು ಮಾಡುವ ಪುಸ್ತಕ ವಿತರಣೆಯಲ್ಲಿ ಒಂದಿಲ್ಲ ಒಂದು ಸಮಸ್ಯೆ ಉಂಟಾಗಿ ವಿತರಣೆ ವಿಳಂಬ ಆಗುತ್ತಿತ್ತು. ಆದರೆ 2018-19ನೇ ಸಾಲಿನ ಪುಸ್ತಕ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲದೆ ಎಲ್ಲ ಶಾಲೆಗಳಿಗೆ ಪುಸ್ತಕ ವಿತರಣೆ ಕಾರ್ಯ ಭರದಿಂದ ಸಾಗಿದೆ.

1ರಿಂದ ಎಸ್‌ಎಸ್‌ಎಲ್‌ಸಿವರೆಗೆ ಇಲಾಖೆಯಿಂದ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಿದರೆ, ಅನುದಾನ ರಹಿತ ಶಾಲೆಗಳಿಗೆ ಸಬ್ಸಿಡಿ ದರದಲ್ಲಿ ಪುಸ್ತಕ ವಿತರಿಸಲಾಗುತ್ತಿದೆ. ಪ್ರತಿ ವರ್ಷ ಕೆಲ ವಿಷಯಗಳ ಪುಸ್ತಕಗಳು ಸಕಾಲಕ್ಕೆ ಸರಬರಾಜು ಆಗದ ಕಾರಣ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಮಸ್ಯೆ ಎದುರಿಸುತ್ತಿದ್ದರು. ಈ ಬಾರಿ ಬೇಡಿಕೆಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ ವರೆಗಿನ ಎಲ್ಲ ವಿಷಯವಾರು ಪುಸ್ತಕಗಳು ಸಮರ್ಪಕವಾಗಿ ಸರಬರಾಜು ಆಗಿರುವುದು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ನಿಟ್ಟುಸಿರು ಬಿಡುವಂತೆ ಆಗಿದೆ.

ಉರ್ದು ಮತ್ತು ಕನ್ನಡ ಮಾಧ್ಯಮ ಸೇರಿ ತಾಲೂಕಿಗೆ ಒಟ್ಟು 4,35,175 ಪುಸ್ತಕಗಳ ಬೇಡಿಕೆ ಇತ್ತು. ಈ ಪೈಕಿ 3,52,451 ಪುಸ್ತಕಗಳು ಸರಬರಾಜು ಆಗಿವೆ. 1ರಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಉರ್ದು ಮಾಧ್ಯಮದ ಕೆಲ ವಿಷಯಗಳ ಪುಸ್ತಕಗಳು ಇನ್ನು ಬಂದಿಲ್ಲ. ಶೇ. 70ರಷ್ಟು ಪುಸ್ತಕಗಳ ಕೊರತೆ ಇದೆ. ಕನ್ನಡ ಮಾಧ್ಯಮ ಪುಸ್ತಕಗಳಿಗೆ ಯಾವುದೇ ಕೊರತೆ ಇಲ್ಲ.
 
ಖಾಸಗಿ ಶಾಲೆಗಳು ಒಟ್ಟು 10,3073 ಪುಸ್ತಕಗಳ ಬೇಡಿಕೆ ಸಲ್ಲಿಸಿದ್ದು, ಈ ಪೈಕಿ 90,1315 ಸರಬರಾಜು ಆಗಿವೆ. ಆಯಾ ಶಾಲೆಗಳ ಬೇಡಿಕೆಗಳಿಗೆ ಅನುಗುಣವಾಗಿ ಪುಸ್ತಕ ಸರಬರಾಜು ಮಾಡಲಾಗಿದೆ. ಈಗಾಗಲೇ 26 ಕ್ಲಸ್ಟರ್‌ಗಳಿಗೆ ವಿತರಿಸಲಾಗಿದ್ದು, ಕೇವಲ ಎರಡು ಕ್ಲಸ್ಟರ್‌ಗಳಿಗೆ ಮಾತ್ರ ವಿತರಣೆ ಬಾಕಿ ಇದೆ. ಇನ್ನೆರಡು ದಿನಗಳಲ್ಲಿ ಸರಬರಾಜು
ಮುಗಿಯಲಿದೆ ಎಂದು ಶಿಕ್ಷಣ ಸಂಯೋಜಕ ಸುಭಾಸ ತಿಳಿಸಿದ್ದಾರೆ. 

ಸಮವಸ್ತ್ರ ವಿತರಣೆ: 32,302 ಬಾಲಕರು. 31,086 ಬಾಲಕಿಯರು ಸೇರಿದಂತೆ ಒಟ್ಟು 63,388 ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಈ ಪೈಕಿ ಈಗ 1ರಿಂದ ಎಸ್‌ಎಸ್‌ಎಲ್‌ಸಿ ವರೆಗಿನ ಬಾಲಕರ ಸಮವಸ್ತ್ರ ಪೂರೈಕೆ ಆಗಿದ್ದು, ಆಯಾ ಶಾಲೆಗಳಲ್ಲಿ ವಿತರಣೆ ಕಾರ್ಯ ನಡೆದಿದೆ. 8, 9, 10ನೇ ತರಗತಿ ಬಾಲಕಿಯರ ಸಮವಸ್ತ್ರ ಇನ್ನು ಸರಬರಾಜು ಆಗಿಲ್ಲ ಎಂದು ತಿಳಿದು ಬಂದಿದೆ.

ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಪ್ರಸಕ್ತ ಸಾಲಿನಲ್ಲಿ ಶಾಲೆ ಆರಂಭಕ್ಕೂ ಮುನ್ನವೇ ಸಮರ್ಪಕವಾಗಿ ಪುಸ್ತಕ ಮತ್ತು ಸಮವಸ್ತ್ರ ಸರಬರಾಜು ಆಗಿರುವುದು ಸಂತಸ ತಂದಿದೆ. ಆಯಾ ಶಾಲೆಗಳ ಬೇಡಿಕೆಗೆ ಅನುಗುಣವಾಗಿ ಈಗಾಗಲೇ ಎಲ್ಲ ಶಾಲೆಗಳಿಗೆ ಪುಸ್ತಕ, ಸಮವಸ್ತ್ರ ವಿತರಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಶಾಲೆಗೆ ಬರಲು ಕ್ರಮ ಕೈಗೊಳ್ಳಲಾಗುವುದು.  
 ನಾಗರತ್ನಾ ಓಲೇಕಾರ, ಕ್ಷೇತ್ರ ಶಿಕ್ಷಣಾಧಿಕಾರಿ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.