ಪಠ್ಯಪುಸ್ತಕ ವಿತರಣೆ ಹೆಸರಲ್ಲಿ ಹಣ ವಸೂಲಿ ಸಲ್ಲ
Team Udayavani, Jun 12, 2018, 9:31 AM IST
ಯಾದಗಿರಿ: ಆರ್ಟಿಇ ಅಡಿ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಆಯ್ಕೆಯಾದ ಮಕ್ಕಳಿಗೆ ಪಠ್ಯ ಪುಸ್ತಕಗಳ ಹೆಸರಿನಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದು, ಇದನ್ನು ತಡೆಯುವಂತೆ ವಿವಿಧ ಶಾಲೆಯ ಮಕ್ಕಳ ಪಾಲಕರು ಆಗ್ರಹಿಸಿದರು.
ಜಿಲ್ಲಾಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಆಗಮಿಸಿದ ಪಾಲಕರು, ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆ ಅವರು ಪಠ್ಯಪುಸ್ತಕ ವಿತರಣೆಯಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಆರ್ ಟಿಇ ಅಡಿ ಆಯ್ಕೆಯಾದ ಮಕ್ಕಳಿಗೆ ಪಠ್ಯ ಕೂಡ ಪೂರೈಸುತ್ತಿದ್ದರೂ ನಗರದ ಕೆಲ ಪ್ರತಿಷ್ಠಿತ ಶಾಲೆಗಳಲ್ಲಿ ಮನಸ್ಸಿಗೆ ಬಂದಂತೆ ಪಠ್ಯಪುಸ್ತಕಗಳ ಹಣವನ್ನು ವಸೂಲಿ ಮಾಡುತ್ತಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಬಹುತೇಕ ಪಾಲಕರ ಮನೆಯಲ್ಲಿ 3ರಿಂದ 4 ಮಕ್ಕಳಿದ್ದವರಿಗಂತೂ ಪರಿಸ್ಥಿತಿ ತೀರಾ ಗಂಭೀರವಾಗಿದೆ. ಸಾಲ ಸೂಲ ಮಾಡಿ, ಪಠ್ಯಪುಸ್ತಕ ಖರೀದಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪಾಲಕರು ಅಧಿಕಾರಿಗಳೆದುರು ಗೋಳು ತೋಡಿಕೊಂಡಿದ್ದಾರೆ.
ಶಾಲೆಗಳಲ್ಲಿ ಆರ್ಟಿಇ ಅಡಿ ಆಯ್ಕೆ ಆಗಿರುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಕಿರುಕುಳ ನೀಡುತ್ತಿದ್ದು, ಮಕ್ಕಳು
ಅಳುತ್ತ ಮನೆಗೆ ಬಂದು ಕೂಡುತ್ತಿದ್ದಾರೆ. ನಮ್ಮ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆಂದು ಪಾಲಕರು
ಮೇಲಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳು ಈ ಕುರಿತು ಕಾಳಜಿ ವಹಿಸಿ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜು ಢವಳೆ, ಅಬ್ದುಲ್ ಕರೀಂ ದಾದೂ, ಹಣಮಂತ ಬಾವರ, ಗಣಪತ ಹರಬಾರೆ,
ಸಂತೋಷ ಮೋರೆ, ಅಬ್ದುಲ್ ಅಲೀಂ, ಮಲ್ಲಿಕಾರ್ಜುನ, ಕಾಂತಪ್ಪ ಪೂಜಾರಿ, ಮಲ್ಲು, ಹಣಮಂತ ಸಾಯಿಬೋಳ
ಇತರರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ