ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ
Team Udayavani, Jun 19, 2018, 5:00 PM IST
ಯಾದಗಿರಿ: ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವ ಮೂಲಕ ರೈತರು ಆರ್ಥಿಕವಾಗಿ ಸುಧಾರಣೆ ಕಾಣಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.
ಮಿನಿ ವಿಧಾನಸೌಧ ಆವರಣದಲ್ಲಿ 2018-19ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ಸಮಗ್ರ ಕೃಷಿ ಅಭಿಯಾನದಡಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮದಡಿ ಕೃಷಿ ಇಲಾಖೆ ಯೋಜನೆಗಳ ಸಮಗ್ರ ಮಾಹಿತಿ ಹೊತ್ತ ಕೃಷಿ ರಥ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಶ್ರೀ ಬಸರೆಡ್ಡಿಗೌಡ ಮಾಲಿ ಪಾಟೀಲ ಅನಪುರ, ಹತ್ತಿಕುಣಿ ಜಿಪಂ ಸದಸ್ಯ ಶ್ರೀ ಶಿವಲಿಂಗಪ್ಪ ಪುಟಗಿ, ಯರಗೋಳ ಜಿಪಂ ಸದಸ್ಯೆ ಶ್ರೀಮತಿ ಅನಿತಾ ಸುರೇಶ, ಜಿಲ್ಲಾಧಿಕಾರಿ ಜೆ. ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ವಸಂತರಾವ್ ಕುಲಕರ್ಣಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಆರ್. ದೇವಿಕಾ ವಿವಿಧ ಯೋಜನೆಗಳ ಹಸ್ತ ಪ್ರತಿಗಳನ್ನು ಬಿಡುಗಡೆಗೊಳಿಸಿದರು.
ಜಿಲ್ಲೆಯ ರೈತ ಮುಖಂಡರು, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಹಾಜರಿದ್ದರು. ಈ ವೇಳೆ ಜಂಟಿ ಕೃಷಿ ನಿದೇರ್ಶಕರು ಮಾಹಿತಿ ನೀಡಿ, ಕೃಷಿ ಮತ್ತು ಕೃಷಿಗೆ ಸಂಬಂಧಿ ಸಿದ ಇತರೆ ಇಲಾಖೆಗಳ ಸಮಗ್ರ ಮಾಹಿತಿನ್ನೊಳಗೊಂಡ ರಥವು ಜಿಲ್ಲೆಯ ಹದಿನಾರು ಹೋಬಳಿಯ ಎಲ್ಲಾ ಗ್ರಾಮಗಳಲ್ಲಿ ಸಂಚರಿಸಿ ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಯೊಜನೆಗಳ ಮಾಹಿತಿಯನ್ನು ರೈತರ ಮನೆ ಬಾಗಿಲಿಗೆ ತಲುಪಿಸಲು ಸಂಚರಿಸಲಿದೆ.
ಮೂರನೇ ದಿನ ಹೋಬಳಿಯ ಕೇಂದ್ರ ಸ್ಥಾನದಲ್ಲಿ ಕೃಷಿಗೆ ಸಂಬಂಧಿ ಸಿದ ಸಾಕ್ಷ್ಯ ಚಿತ್ರಗಳ ಕೃಷಿ ಉಪಕರಣಗಳ ವಸ್ತು ಪ್ರದರ್ಶನ ಹಾಗೂ ಕೃಷಿ ವಿಜ್ಞಾನಿಗಳೊಂದಿಗೆ ರೈತರ ಸಂವಾದ ಕಾರ್ಯಕ್ರಮ ಇರಲಿದ್ದು, ರೈತರು ಹೆಚ್ಚಿನ
ಸಂಖ್ಯೆಯಲ್ಲಿ ಭಾಗವಹಿಸಿ ಕೃಷಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.
ಯಾದಗಿರಿ ತಾಲೂಕಿನ ಬಳಿಚಕ್ರ, ಸೈದಾಪುರ, ಕೊಂಕಲ್, ಹತ್ತಿಕುಣಿ ಹಾಗೂ ಗುರುಮಠಕಲ್ ಹೋಬಳಿ, ಸುರಪುರ ತಾಲೂಕಿನ ಕೆಂಭಾವಿ, ಹುಣಸಗಿ, ಕಕ್ಕೇರಾ, ಕೊಡೇಕಲ್, ಸುರಪುರ ಹೋಬಳಿ ಹಾಗೂ ಶಹಾಪುರ ತಾಲೂಕಿನ ದೋರನಹಳ್ಳಿ, ಗೋಗಿ, ಹೈಯಾಳ. ಬಿ, ಶಹಾಪುರ ಹಾಗೂ ವಡಗೇರಾ ಹೋಬಳಿಗಳಲ್ಲಿ ಜಾಗೃತಿ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ